ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಬಂದ್‌ಗೆ ನೀರಸ ಪ್ರತಿಕ್ರಿಯೆ; ಶಾಲೆಕಾಲೇಜಿಗೆ ರಜೆಯಿಲ್ಲ

By Staff
|
Google Oneindia Kannada News

ಕರ್ನಾಟಕ ಬಂದ್‌ಗೆ ನೀರಸ ಪ್ರತಿಕ್ರಿಯೆ; ಶಾಲೆಕಾಲೇಜಿಗೆ ರಜೆಯಿಲ್ಲ
ಹುಬ್ಬಳ್ಳಿಯಲ್ಲಿ ನ್ನೂ ಕುದಿಮೌನ, ಪೊಲೀಸ್‌ ಬಿಗಿ ಬಂದೋಬಸ್ತ್‌

ಬೆಂಗಳೂರು : ಬಿಜೆಪಿ ಕರೆ ನೀಡಿರುವ ಕರ್ನಾಟಕ ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು - ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಶಾಲಾ ಕಾಲೇಜು ಹಾಗೂ ಕಚೇರಿಗಳು ಎಂದಿನಂತೆ ಕಾರ್ಯ ನಿರ್ವಹಿಸುತ್ತಿವೆ.

ಉಮಾಭಾರತಿ ಅವರ ಮೇಲಿನ ಕ್ರಿಮಿನಲ್‌ ಪ್ರಕರಣವನ್ನು ಕೈಬಿಡುವಂತೆ ಒತ್ತಾಯಿಸಿ ಆ.26ರ ಗುರುವಾರ ಕರ್ನಾಟಕ ಬಂದ್‌ಗೆ ರಾಜ್ಯ ಬಿಜೆಪಿ ಕರೆ ನೀಡಿತ್ತು . ಬಂದ್‌ಕರೆಗೆ ನೀರಸ ಆರಂಭಿಕ ಪ್ರತಿಕ್ರಿಯೆ ವ್ಯಕ್ತವಾಗಿದ್ದು , ಜನಜೀವನ ಎಂದಿನಂತಿದೆ. ನಗರಸಾರಿಗೆ ಹಾಗೂ ಕೆಎಸ್‌ಆರ್‌ಟಿಸಿ ಬಸ್ಸು ಸಂಚಾರ ಮಾಮೂಲಿನಂತಿದೆ.

ಬಿಜೆಪಿ ಕ್ಷುಲ್ಲಕ ಕಾರಣಕ್ಕಾಗಿ ಬಂದ್‌ಗೆ ಕರೆ ನೀಡಿದ್ದು , ಈ ಬಂದ್‌ ಬೆಂಬಲಿಸಬಾರದೆಂದು ಮುಖ್ಯಮಂತ್ರಿ ಧರ್ಮಸಿಂಗ್‌ ಜನತೆಗೆ ಮನವಿ ಮಾಡಿಕೊಂಡಿದ್ದಾರೆ. ಶಾಲಾ ಕಾಲೇಜುಗಳಿಗೆ ರಜೆ ಇಲ್ಲ , ರಜೆ ನೀಡುವ ಅಗತ್ಯವೂ ಇಲ್ಲ ಎಂದು ಧರ್ಮಸಿಂಗ್‌ ಹೇಳಿದ್ದಾರೆ.

ಬಂದ್‌ ಕರೆಯ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆ ವ್ಯಾಪಕ ಬಂದೋಬಸ್ತ್‌ ಮಾಡಿದೆ. ಹುಬ್ಬಳ್ಳಿಯಲ್ಲಿ ಬಿಗುಮೌನದ ವಾತಾವರಣ ಇನ್ನೂ ಮುಂದುವರಿದಿದ್ದು , ಪೊಲೀಸರು ಕಟ್ಟೆಚ್ಚರದಿಂದ ಇದ್ದಾರೆ. ಪೊಲೀಸ್‌ ಸಿಬ್ಬಂದಿಯಾಂದಿಗೆ 16 ಸಾವಿರ ಹೋಂಗಾರ್ಡ್‌ಗಳು ಹಾಗೂ ಕ್ಷಿಪ್ರ ಕಾರ್ಯ ಪಡೆಗಳು ಹುಬ್ಬಳ್ಳಿಯಲ್ಲಿ ಬೀಡುಬಿಟ್ಟಿದ್ದು , ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

(ಪಿಟಿಐ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X