ಕರ್ನಾಟಕ ಬಂದ್: ಬಿಜೆಪಿ ಬೆಲ್ಟ್ನಲ್ಲಿ ಬೆಂಬಲ, ಉಳಿದೆಡೆಯಲ್ಲಿ ವಿಫಲ
ಕರ್ನಾಟಕ ಬಂದ್: ಬಿಜೆಪಿ ಬೆಲ್ಟ್ನಲ್ಲಿ ಬೆಂಬಲ, ಉಳಿದೆಡೆಯಲ್ಲಿ ವಿಫಲ
ಸಣ್ಣಪುಟ್ಟ ಅಹಿತಕರ ಘಟನೆಗಳ ಹೊರತುಪಡಿಸಿ ಶಾಂತಿಯುತ ಬಂದ್
ಬಿಜೆಪಿ ಪ್ರಭಾವ ದಟ್ಟವಾಗಿರುವ ಕರಾವಳಿ ಪ್ರದೇಶದಲ್ಲಿ ಬಂದ್ಗೆ ಉತ್ತಮ ಎನ್ನಬಹುದಾದ ಪ್ರತಿಕ್ರಿಯೆ ವ್ಯಕ್ತವಾಗಿದ್ದರೆ, ಬೆಂಗಳೂರು ಸೇರಿದಂತೆ ಉಳಿದೆಡೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಗಳೂರು ಹಾಗೂ ಮಂಗಳೂರಿನಲ್ಲಿ ಕಲ್ಲುತೂರಾಟದಂಥ ಸಣ್ಣಪುಟ್ಟ ಘಟನೆಗಳು ನಡೆದಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸಂಪೂರ್ಣ ಬಂದ್ : ಇಡೀ ಪ್ರಕರಣದ ಕೇಂದ್ರ ಸ್ಥಳವಾದ ಹುಬ್ಬಳ್ಳಿಯಲ್ಲಿ ಬಿಜೆಪಿ ಪ್ರೇರಿತ ಬಂದ್ಗೆ ಪೂರ್ಣ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೊಟೇಲ್ಗಳು, ಅಂಗಡಿ ಮುಂಗಟ್ಟುಗಳು, ಸಿನಿಮಾ ಮಂದಿರಗಳು, ವಾಣಿಜ್ಯ ಸಂಕೀರ್ಣಗಳು ಬಾಗಿಲು ತೆಗೆಯುವ ಸಾಹಸ ಮಾಡಲಿಲ್ಲ . ಶಾಲಾ ಕಾಲೇಜುಗಳಿಗೆ ರಜೆ ಮುಂದುವರಿದಿದೆ. ಬಸ್ಸು ಸಂಚಾರ ಸ್ಥಗಿತಗೊಂಡಿತ್ತು . ಐದು ನಗರ ಸಾರಿಗೆ ಬಸ್ಸುಗಳ ಮೇಲೆ ಕಲ್ಲು ತೂರಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಬಂದ್ ಪ್ರಯುಕ್ತ ಬಿಜೆಪಿ ಭಾರೀ ರ್ಯಾಲಿ ನಡೆಸಿತು. ಪ್ರದರ್ಶನಕಾರರನ್ನು ಉದ್ದೇಶಿಸಿ ಮಾತನಾಡಿದ ವಿಧಾನಸಭೆಯ ನಿಕಟಪೂರ್ವ ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್- ಉಮಾಭಾರತಿ ವಿರುದ್ಧದ ಮೊಕದ್ದಮೆಯನ್ನು ವಾಪಸ್ಸು ಪಡೆಯುವವರೆಗೆ ತಮ್ಮ ಪ್ರತಿಭಟನೆ ಮುಂದುವರಿಯಲಿದೆ ಎಂದರು.
ಹುಬ್ಬಳ್ಳಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಪಾಲನೆಗೆ 3000 ಪೊಲೀಸ್ ಸಿಬ್ಬಂದಿಯಾಂದಿಗೆ ಕ್ಷಿಪ್ರ ಕಾರ್ಯಾಚರಣೆ ಪಡೆ ಹಾಗೂ ಮೀಸಲು ಪಡೆ ಪೊಲೀಸರನ್ನು ನಿಯೋಜಿಸಲಾಗಿದೆ.
ಬೆಂಗಳೂರಿನಲ್ಲಿ ನಗರ ಸಾರಿಗೆ ಎಂದಿನಂತಿದೆ. ಶಾಲಾ ಕಾಲೇಜು, ಬ್ಯಾಂಕು ಹಾಗೂ ಕಚೇರಿಗಳು ಕಾರ್ಯ ನಿರ್ವಹಿಸುತ್ತಿವೆ. ನಗರದ ಕೆಲ ಪ್ರದೇಶಗಳಲ್ಲಿ ಅಂಗಡಿ ಮುಂಗಟ್ಟುಗಳನ್ನು ಗುಂಪುಗಳು ಬಲವಂತವಾಗಿ ಮುಚ್ಚಿಸಿದವು. ರಾಜಾಜಿನಗರದಲ್ಲಿ ಬಸ್ಸೊಂದರ ಮೇಲೆ ಕಲ್ಲುತೂರಾಟ ನಡೆಯಿತು.
ಗುಲ್ಬರ್ಗಾ, ಬಿಜಾಪುರ, ದಾವಣಗೆರೆ, ಶಿವಮೊಗ್ಗ , ಬಳ್ಳಾರಿ ಹಾಗೂ ಬೀದರ್ಗಳಲ್ಲೂ ಬಂದ್ಗೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಂಗಳೂರು ಹಾಗೂ ಉಡುಪಿಯಲ್ಲೂ ಬಂದ್ ಪರಿಣಾಮಕಾರಿಗಿದೆ.
ಮಂಗಳೂರಿನ ಕೆಲವೆಡೆ ಕಲ್ಲು ತೂರಾಟ ನಡೆದಿದೆ. ಉದ್ರಿಕ್ತರ ಗುಂಪು ಟೈರುಗಳಿಗೆ ಬೆಂಕಿ ಹಚ್ಚಿ ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಎಸೆದ ಘಟನೆಗಳೂ ನಡೆದಿವೆ. ಸುರತ್ಕಲ್ ಸಮೀಪ ಖಾಸಗಿ ಬಸ್ಸೊಂದು ಕಲ್ಲಿನ ದಾಳಿಗೆ ತುತ್ತಾಗಿದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಚ್.ಎಸ್.ಲೋಕೇಶ್ಕುಮಾರ್ ತಿಳಿಸಿದ್ದಾರೆ. ಅಂಗಡಿ ಮುಂಗಟ್ಟು , ಹೊಟೇಲು ಹಾಗೂ ಬಹುತೇಕ ಶಾಲಾ ಕಾಲೇಜುಗಳು ಮುಚ್ಚಿವೆ.
ಅನಂತಕುಮಾರ್ ಬಂಧನ : ಬೆಂಗಳೂರಿನ ಆನಂದರಾವ್ ವೃತ್ತದಲ್ಲಿ ರಸ್ತೆ ತಡೆ ನಡೆಸುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಅನಂತಕುಮಾರ್ ಸೇರಿದಂತೆ ಬಿಜೆಪಿ 100 ಮಂದಿಯನ್ನು ಪೊಲೀಸರು ಬಂಧಿಸಿ, ಸ್ವಲ್ಪಕಾಲದ ನಂತರ ಬಿಡುಗಡೆ ಮಾಡಿದರು.
ಮೈಸೂರಿನಲ್ಲಿ ಬಂದ್ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇಲ್ಲಿ ಜನಜೀವನ ಎಂದಿನಂತಿತ್ತು.
(ಪಿಟಿಐ)
ಮುಖಪುಟ / ವಾರ್ತೆಗಳು
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications