ಕನ್ನಂಬಾಡಿ ಕಲಕಲಕ್ಕೆ ದಸರೆ ವೈಭವ ಸ್ಪಂದನ
ಕನ್ನಂಬಾಡಿ ಕಲಕಲಕ್ಕೆ ದಸರೆ ವೈಭವ ಸ್ಪಂದನ
ರಾಜ್ಯದಲ್ಲಿ ಮಳೆ ಚೆನ್ನಾಗಿ ಆಗುತ್ತಿರುವುದರಿಂದ, ಒಳ್ಳೆಯ ಬೆಳೆಯ ನಿರೀಕ್ಷೆಯೂ ಇರುವುದರಿಂದ ದಸರೆಯನ್ನು ಅದ್ದೂರಿಯಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ.
ರಾಜ್ಯಾದ್ಯಂತ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಹಾಗೂ ವಿಶೇಷವಾಗಿ ಕನ್ನಂಬಾಡಿ ಹಾಗೂ ಕಬಿನಿ ಜಲಾಶಯಗಳು ತುಂಬಿರುವ ಹಿನ್ನೆಲೆಯಲ್ಲಿ ದಸರೆಯನ್ನು ವಿಜೃಂಭಣೆ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಉನ್ನತ ಮಟ್ಟದ ಸಭೆ ತೀರ್ಮಾನಿಸಿತು. ಮುಖ್ಯಮಂತ್ರಿ ಧರ್ಮಸಿಂಗ್, ಉಪ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.
‘ ಮೈಸೂರು ದಸರಾ ಎಷ್ಟೊಂದು ಸುಂದರಾ’ ಎನ್ನುವ ಜನಪ್ರಿಯ ಸಿನಿಮಾ ಹಾಡುಹೇಳುವಂತೆ ಮೈಸೂರು ದಸರಾ ಮೆರವಣಿಗೆ ವಿಶ್ವವಿಖ್ಯಾತವಾದುದು. ಪಾರಂಪರಿಕವಾಗಿ ನಡೆದು ಬಂದ ಈ ದಸರಾ ಮೆರವಣಿಗೆ ಖ್ಯಾತಿ ಸೀಮೋಲ್ಲಂಘನ ಮಾಡಿದೆ. ಅದರಲ್ಲೂ ‘ಗಜರಾಜ’ ಹೊತ್ತು ತರುವ ಬೆಲೆಕಟ್ಟಲಾಗದ ಅಂಬಾರಿ ಮೆರವಣಿಗೆ ಲಕ್ಷಾಂತರ ಮಂದಿಯ ವಿಶೇಷ ಗಮನ ಸೆಳೆಯುತ್ತ ಬಂದಿದೆ. ಆದರೆ, ಈ ಬಾರಿ ದಸರೆಯಲ್ಲಿ ಆನೆಗಳ ಪಾಲ್ಗೊಳ್ಳುವಿಕೆಯ ವಿರುದ್ಧ ಸೊಲ್ಲು ಕೇಳಿಬಂದಿದೆ.
ಉತ್ಸವದಲ್ಲಿ ಆನೆಗಳಿಗೆ ಹಿಂಸೆಯಾಗುತ್ತಿದ್ದು , ಈ ಹಿನ್ನೆಲೆಯಲ್ಲಿ ದಸರೆಯಲ್ಲಿ ಆನೆಗಳು ಭಾಗವಹಿಸುವುದನ್ನು ನಿಷೇಧಿಸಬೇಕು ಎನ್ನುವ ಕೂಗು ಪ್ರಾಣಿದಯಾ ಸಂಸ್ಥೆ ಸೇರಿದಂತೆ ಅನೇಕ ವಲಯಗಳಿಂದ ಕೇಳಿಬಂದಿದೆ.
ದಸರಾ ಮೆರವಣಿಗೆಯ ಒಂದು ತಿಂಗಳ ಮುಂಚೆ ಆನೆಗಳಿಗೆ ತರಬೇತಿ ನೀಡಲಾಗುತ್ತದೆ. ಸ್ವಚ್ಛಂದವಾಗಿ ಅರಣ್ಯದಲ್ಲಿ ಓಡಾಡಿಕೊಂಡಿದ್ದ ಆನೆಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ , ಡಾಂಬರ್ ರಸ್ತೆಗಳಲ್ಲಿ ನಡೆಸಬೇಕಾಗುತ್ತದೆ. ಇದರಿಂದ ಮೃದು ಪಾದದ ಆನೆಗಳು ರಸ್ತೆಗಳಲ್ಲಿ ನಡೆಯುವಾಗ ಗಾಜಿನ ಚೂರುಗಳು, ಹಾನಿಕಾರಕ ವಸ್ತುಗಳಿಂದ ಹಾನಿಗೊಳ್ಳುತ್ತವೆ. ಆದ್ದರಿಂದ ಮೆರವಣಿಗೆಯಲ್ಲಿ ಭಾರದ ಅಂಬಾರಿ ಹೊರಿಸಿ ಆನೆಗಳನ್ನು ಹಿಂಸಿಸುವುದು, ಅವುಗಳ ಮೇಲೆ ಚಿತ್ರಬಿಡಿಸುವುದು ಮತ್ತು ಪಳಗಿಸುವ ಸಂದರ್ಭದಲ್ಲಿ ಕೈಗೊಳ್ಳಲಾಗುವ ಕಠಿಣ ಕ್ರಮವನ್ನು ನಿಷೇಧಿಸಬೇಕು ಎಂದು ಪ್ರಾಣಿಪ್ರಿಯರು ಹೇಳುತ್ತಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications