‘ಧ್ವಜ’ ರಾಜಕಾರಣ ವಿರುದ್ಧ ಸೆ.1 ರಿಂದ ಕೆಪಿಸಿಸಿ ಸರಣಿ ಕಾರ್ಯಕ್ರಮ
‘ಧ್ವಜ’ ರಾಜಕಾರಣ ವಿರುದ್ಧ ಸೆ.1 ರಿಂದ ಕೆಪಿಸಿಸಿ ಸರಣಿ ಕಾರ್ಯಕ್ರಮ
ಸೋನಿಯಾಗೂ ಉಮಾ ಮೇಲಿನ ಮೊಕದ್ದಮೆಗೂ ಸಂಬಂಧವಿಲ್ಲ -ಪೂಜಾರಿ
ಉಮಾ ಭಾರತಿ ಹಾಗೂ ಸಂಘಪರಿವಾರದ ಬಣ್ಣ ಬಯಲು ಮಾಡಲು ಸೆ.1ರಿಂದ ಕಾಂಗ್ರೆಸ್ ಸರಣಿ ಕಾರ್ಯಕ್ರಮ ಹಮ್ಮಿಕೊಂಡಿರುವ ವಿಷಯವನ್ನು ಕೆಪಿಸಿಸಿ ಅಧ್ಯಕ್ಷ ಜನಾರ್ದನ ಪೂಜಾರಿ ಮಂಗಳೂರಿನಲ್ಲಿ ಸುದ್ದಿಗಾರರಿಗೆ ನೀಡಿದರು. ಹುಬ್ಬಳ್ಳಿಯಲ್ಲಿನ ವಿವಾದಿತ ಈದ್ಗಾ ಮೈದಾನವನ್ನು ಧಾರ್ಮಿಕ ಉದ್ದೇಶಗಳಿಗಾಗಿ ಮುಸ್ಲಿಂ ಸಮುದಾಯಕ್ಕೆ 999 ವರ್ಷಕ್ಕೆ ಗುತ್ತಿಗೆ ನೀಡಲಾಗಿದೆ. ಸಾರ್ವಜನಿಕ ಉಪಯೋಗಕ್ಕಾಗಿ ಈ ಮೈದಾನವನ್ನು ನಿಷೇಧಿಸಲಾಗಿದೆ ಎಂದು ಪೂಜಾರಿ ಹೇಳಿದರು.
1964ರಲ್ಲಿ ಬಿ.ಡಿ.ಜತ್ತಿ ಸರ್ಕಾರ ಈದ್ಗಾ ಮೈದಾನವನ್ನು ಮುಸ್ಲಿಂ ಸಮುದಾಯಕ್ಕೆ ಗುತ್ತಿಗೆ ನೀಡುವ ನಿರ್ಣಯ ಕೈಗೊಂಡಿದೆ. ವಾಸ್ತವ ಪರಿಸ್ಥಿತಿ ಹೀಗಿದ್ದೂ , 1994ರಲ್ಲಿ ಉಮಾ ಭಾರತಿ ಹಾಗೂ ಸಂಗಡಿಗರು ಪ್ರಚೋದನಕಾರಿ ಭಾಷಗಳ ಮೂಲಕ ಕೋಮು ಘರ್ಷಣೆಗೆ ಎಡೆ ಮಾಡಿಕೊಟ್ಟರು. ಈ ಹಿಂಸಾಚಾರದಲ್ಲಿ ನಾಲ್ವರು ಯುವಕರು ಜೀವ ಕಳಕೊಂಡರು. ಇದೆಲ್ಲ ಸತ್ಯವನ್ನು ಮುಚ್ಚಿಟ್ಟು ಉಮಾಭಾರತಿ ಈಗ ಧ್ವಜದ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಪೂಜಾರಿ ಆಪಾದಿಸಿದರು.
ಉಮಾ ಮೇಲಿನ ಮೊಕದ್ದಮೆಗೂ ಸೋನಿಯಾಗಾಂಧಿಗೂ ಸಂಬಂಧ ಕಲ್ಪಿಸುತ್ತಿರುವ ಸಂಘ ಪರಿಧಿವಾರ ಹಾಗೂ ಸುಷ್ಮಾ ಸ್ವರಾಜ್ರ ಹೇಳಿಕೆಗಳನ್ನು ಪೂಜಾರಿ ಖಂಡಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications