ಹೈಕೋರ್ಟ್ ಪೀಠ ಅನಗತ್ಯ: ಜೈನ್ ಪತ್ರಕ್ಕೆ ಉ.ಕ.ದಲ್ಲಿ ಅಸಮಾಧಾನ
ಹೈಕೋರ್ಟ್ ಪೀಠ ಅನಗತ್ಯ: ಜೈನ್ ಪತ್ರಕ್ಕೆ ಉ.ಕ.ದಲ್ಲಿ ಅಸಮಾಧಾನ
ಪ್ರಧಾನಿ ಬಳಿ ಸರ್ವಪಕ್ಷ ನಿಯೋಗ ಕೊಂಡೊಯ್ಯಲು ರಾಜ್ಯ ಸರ್ಕಾರ ನಿರ್ಧಾರ
ಮುಖ್ಯ ನ್ಯಾಯಮೂರ್ತಿ ಎನ್.ಕೆ.ಜೈನ್ ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ಈ ವಿಚಾರ ಬೆಳಕಿಗೆ ಬಂದಿದೆ.
ಉತ್ತರ ಕರ್ನಾಟಕದಲ್ಲಿ ವ್ಯಾಜ್ಯಗಳ ಸಂಖ್ಯೆ ಕಡಿಮೆಯಿರುವ ಕಾರಣ, ಹೈಕೋರ್ಟ್ ಪೀಠದ ಆಗತ್ಯವಿಲ್ಲ . ಪೀಠ ಸಾಧ್ಯವಾಗದಿದ್ದರೆ ಸರ್ಕಿಟ್ ಬೆಂಚ್ಗೆ ಒಪ್ಪಿಗೆ ನೀಡಿ ಎಂದು ಸರಕಾರ ಮನವಿ ಸಲ್ಲಿಸಿದೆ. ಆದರೆ ಸರಕಾರದ ಮೇಲೆ ಹೆಚ್ಚಿನ ಆರ್ಥಿಕ ಹೊರೆ ಬೀಳುವ ಕಾರಣ, ಈ ಪ್ರಸ್ತಾವನೆಯನ್ನು ಒಪ್ಪಿಕೊಳ್ಳಲಾಗದೆಂದು ಪತ್ರದಲ್ಲಿ ಮುಖ್ಯ ನ್ಯಾಯಮೂರ್ತಿಜೈನ್ ಅಭಿಪ್ರಾಯಪಟ್ಟಿದ್ದಾರೆ.
ಈ ಪತ್ರವನ್ನು ಬಹಿರಂಗಗೊಳಿಸ ಬೇಕೆಂದು ಬೆಂಗಳೂರು, ಹುಬ್ಬಳ್ಳಿ ,ಧಾರವಾಡದಲ್ಲಿ ಉತ್ತರ ಕರ್ನಾಟಕದ ವಕೀಲರು ನಡೆಸುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ, ಸಂಪುಟ ಸಭೆಯಲ್ಲಿ ಪತ್ರದ ಬಗೆಗೆ ಚರ್ಚಿಸಲಾಯಿತು.
ಆದರೆ ಪೀಠ ಸ್ಥಾಪನೆಗೆ ಸಂಬಂಧಿಸಿದಂತೆ ಸರಕಾರದ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ. ಪ್ರಧಾನ ಮಂತ್ರಿಗಳು, ಕೇಂದ್ರ ಕಾನೂನು ಸಚಿವರು ಹಾಗೂ ಸುಪ್ರಿಂಕೋರ್ಟ್ ನ್ಯಾಯಮೂರ್ತಿಗಳ ಬಳಿಗೆ ಸರ್ವ ಪಕ್ಷಗಳ ನಿಯೋಗ ತೆರಳಿ, ಮನವೊಲಿಸುವ ಪ್ರಯತ್ನಕ್ಕೆ ಸಂಪುಟ ನಿರ್ಧರಿಸಿದೆ ಎಂದು ಕಂದಾಯ ಸಚಿವ ಎಂ.ಪಿ.ಪ್ರಕಾಶ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಅತೃಪ್ತಿ ಪ್ರಕಟ: ಪೀಠ ನಿರಾಕರಣೆ ಬಗೆಗೆ ಉತ್ತರ ಕರ್ನಾಟಕದಲ್ಲಿ ಅಸಮಧಾನ ವ್ಯಕ್ತವಾಗಿದೆ. ಮಹಾರಾಷ್ಟ್ರದಲ್ಲಿ ನಾಲ್ಕು ಪೀಠಗಳಿರುವಾಗ, ಕರ್ನಾಟಕದಲ್ಲಿ ಕೇವಲ ಒಂದು ಸಾಕೆ? ಎಂದು ಪ್ರಶ್ನಿಸಿರುವ ಪತ್ರಕರ್ತ ಡಾ.ಪಾಟೀಲ್ ಪುಟ್ಟಪ್ಪ, ಉತ್ತರ ಕರ್ನಾಟಕಕ್ಕೆ ಅನಿವಾರ್ಯವಾಗಿರುವ ಹೈಕೋರ್ಟ್ ಪೀಠ ನಿರಾಕರಣೆ ಮೂಲಕ ರಾಜ್ಯ ಒಡೆವ ಕೂಗಿಗೆ ನ್ಯಾಯಮೂರ್ತಿಗಳು ಆಸ್ಪದ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಧಾರವಾಡ ಉತ್ತರ ಲೋಕಸಭೆಯ ಸಂಸದ ಪ್ರಹ್ಲಾದ್, ಈ ಹಿಂದೆ ಸ್ಥಳ ಸೂಚಿಸುವಂತೆ ರಾಜ್ಯ ಸರಕಾರಕ್ಕೆ ಪತ್ರ ಬರೆದಿದ್ದ ಮುಖ್ಯನ್ಯಾಯಮೂರ್ತಿಗಳು ಈಗಪೀಠದ ಅಗತ್ಯವಿಲ್ಲ ಎಂದಿರುವುದು ವಿಚಿತ್ರವಾಗಿದೆ ಎಂದಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications