ಬಿಜೆಪಿ ಪಟ್ಟಿಯಲ್ಲಿ ಜನಸಂಖ್ಯೆಸ್ಫೋಟ, ಸಾರ್ವಕರ್, ಕಳಂಕಿತ ಸಚಿವರು
ಬಿಜೆಪಿ ಪಟ್ಟಿಯಲ್ಲಿ ಜನಸಂಖ್ಯೆಸ್ಫೋಟ, ಸಾರ್ವಕರ್, ಕಳಂಕಿತ ಸಚಿವರು
ಸುಷ್ಮಾ ನೇತೃತ್ವದಲ್ಲಿ ಸೆ.21ರಂದು ಪೋರ್ಟ್ಬ್ಲೇರ್ನಲ್ಲಿ ಸತ್ಯಾಗ್ರಹ
ಜನಸಂಖ್ಯೆಯ ಬೆಳವಣಿಗೆಯ ಬಗ್ಗೆ ಅರಿವು ಮೂಡಿಸುವ ಆಂದೋಲನವನ್ನು ಬಿಜೆಪಿ ಸದ್ಯದಲ್ಲಿಯೇ ಹಮ್ಮಿಕೊಳ್ಳಲಿದೆ. ಇದೊಂದು ಗಂಭೀರ ವಿಷಯವಾಗಿದ್ದು , ಈ ಕುರಿತು ಇಂದು (ಸೆ.9, ಬುಧವಾರ) ಬೆಂಗಳೂರಿನಲ್ಲಿ ನಡೆದ ಪಕ್ಷದ ಪದಾಧಿಕಾರಿಗಳ ಸಭೆ ಚರ್ಚಿಸಿತು ಎಂದು ಬಿಜೆಪಿ ವಕ್ತಾರ ಮುಖ್ತರ್ ಅಬ್ಬಾಸ್ ನಕ್ವಿ ಸುದ್ದಿಗಾರರಿಗೆ ತಿಳಿಸಿದರು.
ಜನಸಂಖ್ಯಾ ಬೆಳವಣಿಗೆ ರಾಷ್ಟ್ರೀಯ ಸಮಸ್ಯೆ. ಇದನ್ನು ಹಿಂದು-ಮುಸ್ಲಿಂ ಸಮಸ್ಯೆ ಎಂದು ಬಿಂಬಿಸಬಾರದು. ಪ್ರತಿಯಾಂದನ್ನೂ ಕೋಮು ವಿಷಯವನ್ನಾಗಿ ನೋಡಬಾರದು ಎಂದು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದ ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ಹೇಳಿದರು.
ಜನಸಂಖ್ಯೆಗೆ ಸಂಬಂಧಿಸಿದಂತೆ ಪ್ರತಿಯಾಬ್ಬರಿಗೂ ಸಮಾನವಾದ ಕಾನೂನು ಜಾರಿಗೊಳಿಸಬೇಕಾಗಿದೆ. ಪ್ರಜಾಪ್ರಭುತ್ವದಲ್ಲಿ ಇದು ಅನಿವಾರ್ಯ ಎಂದು ಸುಷ್ಮಾ ಹೇಳಿದರು.
ಪೋರ್ಟ್ಬ್ಲೇರ್ನಲ್ಲಿ ಸತ್ಯಾಗ್ರಹ : ಕೇಂದ್ರ ಸರ್ಕಾರ ವೀರ ಸಾವರ್ಕರ್ರನ್ನು ಅವಮಾನಿಸಿರುವುದನ್ನು ಪ್ರತಿಭಟಿಸಿ ಅಂಡಮಾನ್ ದ್ವೀಪಗಳಲ್ಲಿನ ಪೋರ್ಟ್ಬ್ಲೇರ್ನಲ್ಲಿ ಬಿಜೆಪಿ ಸೆ.21ರಂದು ಸತ್ಯಾಗ್ರಹ ನಡೆಸಲಿದೆ. ಈ ಸತ್ಯಾಗ್ರಹದಲ್ಲಿ ಬಿಜೆಪಿಯ ಸಂಸದರು ಹಾಗೂ ಶಾಸಕರು ಭಾಗವಹಿಸುವರು. ಪ್ರತಿಭಟನೆಯ ನೇತೃತ್ವವನ್ನು ಸುಷ್ಮಾ ಸ್ವರಾಜ್ ವಹಿಸುವ ಸಾಧ್ಯತೆಯಿದೆ ಎಂದು ಬಿಜೆಪಿ ವಕ್ತಾರ ಅರುಣ್ ಜೇಟ್ಲಿ ಸುದ್ದಿಗಾರರಿಗೆ ತಿಳಿಸಿದರು.
ಕೇಂದ್ರದಲ್ಲಿನ ಕಳಂಕಿಂತ ಸಚಿವರ ವಿರುದ್ಧವೂ ಬಿಜೆಪಿ ಹೋರಾಟ ಮುಂದುವರಿಯಲಿದೆ. ಕಳಂಕಿತ ಸಚಿವರನ್ನು ಕೈಬಿಡುವಂತೆ ಸೆ.21ರಿಂದ 25ರವರೆಗೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಪ್ರತಿಭಟನೆಯನ್ನು ಆಯೋಜಿಸಲಿದೆ ಎಂದು ಜೇಟ್ಲಿ ಹೇಳಿದರು.
(ಪಿಟಿಐ))
ಮುಖಪುಟ / ವಾರ್ತೆಗಳು
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications