ಕರ್ನಾಟಕದತ್ತ ವಿಶ್ವ ಬ್ಯಾಂಕ್ನಿಂದ ಮಿಲಿಯನ್ಗಟ್ಟಲೆ ಹಣದ ಪ್ರವಾಹ
ಕರ್ನಾಟಕದತ್ತ ವಿಶ್ವ ಬ್ಯಾಂಕ್ನಿಂದ ಮಿಲಿಯನ್ಗಟ್ಟಲೆ ಹಣದ ಪ್ರವಾಹ
ಅಭಿವೃದ್ಧಿಯಲ್ಲಿ ರಾಜ್ಯ 6ನೇ ರ್ಯಾಂಕ್ನಿಂದ 7ನೇ ರ್ಯಾಂಕ್ಗೆ ಕುಸಿತ
ಬ್ಯಾಂಕ್ ನಿರ್ದೇಶಕರಾದ ಮೈಕಲ್ ಕಾರ್ಟರ್ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸ್ಪಷ್ಟವಾಗಿ ಸಾಲದ ಮೊತ್ತವನ್ನು ಹೇಳಲಾಗದು. ಆದರೆ 100 ಮಿಲಿಯನ್ ಡಾಲರ್ಗೂ ಅಧಿಕ ಹಣ ನೀಡುವ ಉದ್ದೇಶವಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಪಟ್ಟಣ ಹಾಗೂ ನಗರಾಭಿವೃದ್ಧಿ ಯೋಜನೆಗಳು ಪ್ರಸಕ್ತ ವರ್ಷದ ಕಡೆಯಲ್ಲಿ, ಆರೋಗ್ಯ ಯೋಜನೆಗಳು ಮುಂದಿನ ವರ್ಷದ ಮಧ್ಯಭಾಗದಲ್ಲಿ ಅರಂಭಗೊಳ್ಳುವ ವಿಶ್ವಾಸವಿದೆ. ಕರ್ನಾಟಕದಲ್ಲಿ ವಿಶ್ವಬ್ಯಾಂಕ್ ಹೆಚ್ಚಿನ ಹಣ ಹೂಡಿಕೆ ಮಾಡಲು ನಿರ್ಧರಿಸಿದೆ. ರಾಜ್ಯದಲ್ಲಿನ ಸಾರ್ವಜನಿಕ ಹಣಕಾಸು ವ್ಯವಸ್ಥೆಯನ್ನು ಬ್ಯಾಂಕ್ ಅಧ್ಯಯನ ನಡೆಸಿದೆ. ಅದರ ಪ್ರಕಾರ ರಾಜ್ಯದ ಆರ್ಥಿಕ ವರದಿ ತೃಪ್ತಿಕರವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯದಲ್ಲಿ ಗ್ರಾಮೀಣ ಜನರು ಸಂಕಷ್ಟದಲ್ಲಿದ್ದಾರೆ. ಬರಗಾಲ, ಕುಡಿಯುವ ನೀರಿನ ಕೊರತೆ ಮತ್ತಿತರ ಸಮಸ್ಯೆಗಳಿಂದ ಕರ್ನಾಟಕ ಅಭಿವೃದ್ಧಿ ವಿಚಾರದಲ್ಲಿ ಪಕ್ಕದ ತಮಿಳುನಾಡಿಗೆ ಹೋಲಿಸಿದರೆ ಹಿಂದೆ ಉಳಿದಿದೆ. ಭಾರತದಲ್ಲಿ ನಡೆಸಲಾದ ಮಾನವ ಸಂಪನ್ಮೂಲ ಅಭಿವೃದ್ಧಿ ಸೂಚಿ ಪ್ರಕಾರ ಕಳೆದ 20 ವರ್ಷಗಳ ಹಿಂದೆ ತಮಿಳುನಾಡು 7ನೇ ರ್ಯಾಂಕ್ನಲ್ಲಿತ್ತು. ಈಗ ಅದು 3ನೇ ರ್ಯಾಂಕ್ನಲ್ಲಿದೆ. ಆದರೆ ಕರ್ನಾಟಕ 6ರಿಂದ 7ನೇ ರ್ಯಾಂಕ್ಗೆ ಕುಸಿದಿದೆ. ಈ ನಿಟ್ಟಿನಲ್ಲಿ ವಿಶ್ವಬ್ಯಾಂಕ್ ಯೋಜನೆ ರಾಜ್ಯಕ್ಕೆ ಪೂರಕವಾಗಲಿದೆ ಎಂದು ಮೈಕಲ್ ಕಾರ್ಟರ್ ತಿಳಿಸಿದ್ದಾರೆ.
(ಪಿಟಿಐ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications