ಅವರು ಪ್ರಗತಿಪರರು, ಸಂಪ್ರದಾಯವಾದಿ : ಶ್ರೀರಂಗರಿಗೆ ಶತ ನಮನ
ಅವರು ಪ್ರಗತಿಪರರು, ಸಂಪ್ರದಾಯವಾದಿ : ಶ್ರೀರಂಗರಿಗೆ ಶತ ನಮನ
ಶ್ರೀರಂಗರ ಜನ್ಮಶತಮಾನೋತ್ಸವ ಅಂಗವಾಗಿ ಬೆಂಗಳೂರಿನಲ್ಲಿ ವಿಚಾರ ಸಂಕಿರಣ
ನಗರದ ಸೆನೆಟ್ ಹಾಲ್ನಲ್ಲಿ ‘ಶ್ರೀರಂಗ’ ರ ಜನ್ಮ ಶತಮಾನೋತ್ಸವದ ಪ್ರಯುಕ್ತ ಕೇಂದ್ರ ಸಾಹಿತ್ಯ ಅಕಾಡೆಮಿ ಏರ್ಪಡಿ ಸಿದ್ದ ಶ್ರೀರಂಗರ ಬರಹಗಳ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಅವರು ಮಾತನಾಡುತ್ತಿದ್ದರು.
ಬೆಂಗಳೂರು, ಧಾರವಾಡ ಮತ್ತಿತರ ಕಡೆ ರಂಗಚಳವಳಿಗೆ ಶ್ರೀರಂಗ ಕಾರಣಕರ್ತರಾಗಿದ್ದಾರೆ. ಅಲ್ಲದೇ ರಂಗಭೂಮಿ ಯಲ್ಲಿ ತಮ್ಮದೇ ಆದ ವಿಶಿಷ್ಟ ಪ್ರಯೋಗಗಳಿಂದ ಅವರು ಹೆಸರಾಗಿದ್ದರು ಎಂದ ಕಂಬಾರರು-ಶ್ರೀರಂಗರ ಎಲ್ಲಾ ನಾಟಕಗಳನ್ನು ಪ್ರಕಟಿಸುವಂತೆ ರಾಜ್ಯ ಸರಕಾರವನ್ನು ಒತ್ತಾಯಿಸಿದರು.
ವಿಚಾರ ಸಂಕಿರಣ ಉದ್ಘಾಟಿಸಿದ ರಂಗ ನಿರ್ದೇಶಕಿ ವಿಜಯ ಮೆಹ್ತಾ ಮಾತನಾಡಿ, ಬಂಡಾಯಗಾರರು ಎಲ್ಲ ಸಂಬಂ ಧಗಳನ್ನು ಧಿಕ್ಕರಿಸಿ ನಿಲ್ಲುತ್ತಾರೆ. ಆದರೆ ಶ್ರೀರಂಗ ಕಡೆಯವರೆಗೆ ಸಂಬಂಧಗಳನ್ನು ಉಳಿಸಿಕೊಂಡಿದ್ದರು. ಲಂಡನ್ನಲ್ಲಿ ಶಿಕ್ಷಣ ಪಡೆದ ಶ್ರೀರಂಗರಲ್ಲಿ ಒಬ್ಬ ಸಂಪ್ರದಾಯವಾದಿ ಮತ್ತು ಒಬ್ಬ ಪ್ರಗತಿವಾದಿ ವ್ಯಕ್ತಿತ್ವವಿತ್ತು. ಹೀಗಾಗಿಯೇ ಅವರ ನಾಟಕಗಳು ಪರಿಣಾಮಕಾರಿಯಾಗಿವೆ ಎಂದರು.
ಹಿರಿಯ ವಿಮರ್ಶಕ ಡಾ. ಜಿ.ಎಸ್.ಆಮೂರ ಮಾತನಾಡಿ, ಸ್ವಾತಂತ್ರ್ಯಪೂರ್ವದಲ್ಲಿದ್ದ ಆರ್.ವಿ. ಜಾಗೀರದಾರ್ ಅನಂತರ ಆದ್ಯರಂಗಚಾರ್ಯ ಆದರು. ಸಂಸ್ಕೃ ತ ಮನೆತನದವರಾದರೂ, ಸಂಪ್ರದಾಯವಿರೋಧಿ. ಕನ್ನಡ ರಂಗ ಭೂಮಿಯಲ್ಲಿ ಆಧುನಿಕತೆಯ ತರ್ಕ ಮತ್ತು ಪ್ರಗತಿಯ ಚಿಂತನೆಗೆ ಶ್ರೀರಂಗ ಅಡಿಗಲ್ಲು ಹಾಕಿದರು. 1930 ರಿಂದ 1960 ಶ್ರೀರಂಗರಯುಗ ಎನ್ನಬಹುದು ಎಂದರು.
ಕೇಂದ್ರ ಸಾಹಿತ್ಯ ಅಕಾಡೆಮಿ ಕಾರ್ಯದರ್ಶಿ ಕೆ. ಸಚ್ಚಿದಾನಂದನ್, ಅಗ್ರಹಾರ ಕೃ ಷ್ಣಮೂರ್ತಿ, ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ಧರ್ಮ-ಕಾರಣ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications