Get Updates
Get notified of breaking news, exclusive insights, and must-see stories!

ಪೀಣ್ಯ ಕೈಗಾರಿಕಾ ನಗರ ಪ್ರಾಧಿಕಾರ ಸ್ಥಾಪನೆಗೆ ರಾಜ್ಯ ಸರ್ಕಾರ ಕಟಿಬದ್ಧ

ಪೀಣ್ಯ ಕೈಗಾರಿಕಾ ನಗರ ಪ್ರಾಧಿಕಾರ ಸ್ಥಾಪನೆಗೆ ರಾಜ್ಯ ಸರ್ಕಾರ ಕಟಿಬದ್ಧ
ಕೈಗಾರಿಕಾ ಪ್ರದೇಶದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವುದಾಗಿ ಸಿಂಧ್ಯಾ ಭರವಸೆ

ಬೆಂಗಳೂರು : ಪೀಣ್ಯ ಕೈಗಾರಿಕಾ ನಗರ ಪ್ರಾಧಿಕಾರ ಸ್ಥಾಪಿಸಲು ರಾಜ್ಯ ಸರ್ಕಾರ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಕೈಗಾರಿಕಾ ಸಚಿವ ಪಿಜಿಆರ್‌ ಸಿಂಧ್ಯಾ ತಿಳಿಸಿದ್ದಾರೆ.

ಸಂವಿಧಾನಕ್ಕೆ 74ನೇ ತಿದ್ದುಪಡಿಯ ಮೂಲಕ ಪೀಣ್ಯ ಕೈಗಾರಿಕಾ ನಗರ ಪ್ರಾಧಿಕಾರ ರಚಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಈ ಮೂಲಕ ಪೀಣ್ಯ ಕೈಗಾರಿಕಾ ಪ್ರದೇಶದ ಸಮಗ್ರ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ದೊರೆಯಲಿದೆ ಎಂದು ಸಿಂಧ್ಯಾ ಹೇಳಿದರು. ಪೀಣ್ಯ ಕೈಗಾರಿಕೆಗಳ ಸಂಘದ ಬೆಳ್ಳಿಹಬ್ಬ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ (ಸೆ.27) ಸಿಂಧ್ಯಾ ಮಾತನಾಡುತ್ತಿದ್ದರು.

ಪೀಣ್ಯ ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಈ ಪ್ರದೇಶದಲ್ಲಿ ಎಲ್ಲ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದು ಸಚಿವ ಸಿಂಧ್ಯಾ ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ರಸ್ತೆ , ಬೀದಿ ದೀಪ, ನೀರು ಸರಬರಾಜು ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಸಮರ್ಪಕಗೊಳಿಸುವಂತೆ ಕೈಗಾರಿಕೆಗಳ ಸಂಘ ಸಲ್ಲಿಸಿದ ಮನವಿಯನ್ನು ಸಿಂಧ್ಯಾ ಸ್ವೀಕರಿಸಿದರು.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+