ರಾಯಚೂರು ಜಿಲ್ಲೆಯ ಗಲಗ ಗ್ರಾಮದಲ್ಲಿ ಮಲೇರಿಯಾಕ್ಕೆ 9ಜನ ಬಲಿ
ರಾಯಚೂರು ಜಿಲ್ಲೆಯ ಗಲಗ ಗ್ರಾಮದಲ್ಲಿ ಮಲೇರಿಯಾಕ್ಕೆ 9ಜನ ಬಲಿ
ಗ್ರಾಮವನ್ನು ಸುತ್ತುವರಿದಿರುವ ನಾರಾಯಣಪುರ ಜಲಾಶಯದ ನೀರಿನಿಂದ ಸೊಳ್ಳೆ ಸಂತತಿ ವೃದ್ಧಿ
ಅಂಜಿನಮ್ಮ ಚೆನ್ನಯ್ಯ, ಮಲ್ಲಮ್ಮ ನಾಗಪ್ಪ, ನಾಗರತ್ನಮ್ಮ ದುರ್ಗಪ್ಪ, ಕಾಸಿಂ ಆಲಿ ರೆಹಮಾನ್ಸಾಬ್, ಚೆನ್ನಮ್ಮ ಸುಗಪ್ಪ, ಲಾಲ್ಸಾಬ್ ಮೆಹಬೂಬ್ಸಾಬ್, ಮುದುಕಪ್ಪ ಹನುಮಯ್ಯ, ಹನುಮಂತಿ ಹನುಮಯ್ಯ ಹಾಗೂ ಹನುಮಂತಿ ಹನುಮಂತ್ ಎಂದು ಮಲೇರಿಯಾಕ್ಕೆ ಬಲಿಯಾದವರನ್ನು ಗುರ್ತಿಸಲಾಗಿದೆ.
ಈಚಿನ ದಿನಗಳಲ್ಲಿ ದೇವದುರ್ಗ ತಾಲ್ಲೂಕಿನಲ್ಲಿ ಮಲೇರಿಯಾ ಪ್ರಕರಣಗಳು ಹೆಚ್ಚುತ್ತಿರುವುದು ಆರೋಗ್ಯ ಇಲಾಖೆಗೆ ತಲೆಬಿಸಿ ಉಂಟು ಮಾಡಿದೆ. ಮೊಬೈಲ್ ಆಸ್ಪತ್ರೆಗಳನ್ನು ಆರೋಗ್ಯ ಇಲಾಖೆ ರೂಪಿಸಿದ್ದು , ಮಲೇರಿಯಾ ತಡೆಗೆ ವ್ಯಾಪಕ ಕ್ರಮಗಳನ್ನು ಕೈಗೊಂಡಿದೆ.
ಗಲಗ ಗ್ರಾಮವನ್ನು ನಾರಾಯಣಪುರ ಜಲಾಶಯದ ಬಲದಂಡೆಯ ನೀರು ಸುತ್ತುವರಿದಿದ್ದು ಸೊಳ್ಳೆಗಳ ಸಂತಾನ ಅಕ್ಷಯವಾಗಲು ಕಾರಣವಾಗಿದೆ. ಸೊಳ್ಳೆಗಳ ನಿಯಂತ್ರಣ, ರಕ್ತ ಪರೀಕ್ಷೆ , ಔಷಧಿ ಪೂರೈಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications