Get Updates
Get notified of breaking news, exclusive insights, and must-see stories!

‘ಮುಂಬರೊ ಚುನಾವಣೆ ಹಿನ್ನೆಲೆ ಮಹಾರಾಷ್ಟ್ರ ಗಡಿವಿವಾದಗಳ ಕೆದಕಿದೆ’

‘ಮುಂಬರೊ ಚುನಾವಣೆ ಹಿನ್ನೆಲೆ ಮಹಾರಾಷ್ಟ್ರ ಗಡಿವಿವಾದಗಳ ಕೆದಕಿದೆ’
ಮಹಾಜನ್‌ವರದಿಯೇ ಅಂತಿಮವಾಗಿದ್ದು, ರಾಜ್ಯದ ಹಿತಕಾಯಲು ಬದ್ದ

ಬೆಂಗಳೂರು : ಮಹಾರಾಷ್ಟ್ರ ಸರ್ಕಾರ ಮತ್ತೆ ಗಡಿವಿವಾದವನ್ನು ಕುರಿತು ಸುಪ್ರಿಂಕೋರ್ಟ್‌ನಲ್ಲಿ ಮೊಕದ್ದಮೆಯನ್ನು ದಾಖಲಿಸಿದೆ. ರಾಜ್ಯ ಸರಕಾರ ಇದನ್ನು ಸವಾಲಿನಂತೆ ಸ್ವೀಕರಿಸಿ, ರಾಜ್ಯದ ಹಿತಕಾಯಲಿದೆ ಎಂದು ಮುಖ್ಯಮಂತ್ರಿ ಎನ್‌.ಧರ್ಮಸಿಂಗ್‌ ಗುರುವಾರ ತಿಳಿಸಿದ್ದಾರೆ.

ಕನ್ನಡಪರ ಸಂಘಟನೆಗಳು ಸಲ್ಲಿಸಿದ ಮನವಿಯನ್ನು ಸ್ವೀಕರಿಸಿದ ನಂತರ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಧರ್ಮಸಿಂಗ್‌- ಕರ್ನಾಟಕ ಹಾಗೂ ಮಹಾರಾಷ್ಟ್ರ ನಡುವಿನ ಗಡಿ ಬಿಕ್ಕಟ್ಟುಗಳಿಗೆ ಸಂಬಂಧಿಸಿದಂತೆ ಮಹಾಜನ್‌ ಸಮಿತಿಯ ವರದಿಯೇ ಅಂತಿಮ ಎಂದರು.

ಸುಪ್ರಿಂಕೋರ್ಟ್‌ಗೆ ಈ ಸಂಬಂಧ ರಾಜ್ಯ ಸಮರ್ಥನೀಯ ಅರ್ಜಿಯನ್ನು ಸಲ್ಲಿಸಲಿದೆ. ಗಡಿ ಸಮಸ್ಯೆ ಎಂದೋ ಮುಗಿದ ಅಧ್ಯಾಯ. ಆದರೆ ಮುಂಬರುವ ಚುನಾವಣೆಯ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರಕಾರ, ಮತ್ತೆ ಈ ವಿಷಯಕ್ಕೆ ಜೀವತುಂಬಿದೆ. ಈ ಸಂಬಂಧ ಬು ಧವಾರ ನಡೆದ ಸಚಿವ ಸಂಪುಟದ ಸಭೆಯಲ್ಲಿ , ಸಮಸ್ಯೆಗೆ ಪರಿಹಾರ ಕಂಡು ಹಿಡಿಯುವ ನಿಟ್ಟಿನಲ್ಲಿ ಉಪಸಮಿತಿ ರಚಿಸಲಾಗಿದೆ. ಅಲ್ಲ ದೇ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಸರ್ವಪಕ್ಷಗಳ ನಿಯೋಗದೊಂದಿಗೆ ತೆರಳಿ ಕೇಂದ್ರ ಸರಕಾರದ ಮೂಲಕ ಸಮಸ್ಯೆ ಬಗೆ ಹರಿಸುವುದಾಗಿ ಧರ್ಮಸಿಂಗ್‌ ತಿಳಿಸಿದರು.

(ಪಿಟಿಐ)

ಮುಖಪುಟ / ಧರ್ಮ-ಕಾರಣ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+