ಬೆಂಗಳೂರಿಂದ ಅರಕಲಗೂಡಿನ ರಾಮನಾಥಪುರಕ್ಕೆ ಕರ್ನಾಟಕ ಸಂಗೀತ
ಬೆಂಗಳೂರಿಂದ ಅರಕಲಗೂಡಿನ ರಾಮನಾಥಪುರಕ್ಕೆ ಕರ್ನಾಟಕ ಸಂಗೀತ
ಅ.6ರಿಂದ ರಾಮನಾಥಪುರದಲ್ಲಿ ಖ್ಯಾತ ಕಲಾವಿದರಿಂದ ಸಂಗೀತ ಸಂಭ್ರಮ
ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ರಾಮನಾಥಪುರದಲ್ಲಿ ಗಾನಕಲಾ ಪರಿಷತ್ತಿನ 35ನೇ ಸಮ್ಮೇಳನ ನಡೆಯಲಿದೆ. ಅಕ್ಟೋಬರ್ 6ರಿಂದ ಐದು ದಿನಗಳ ಕಾಲ ನಡೆಯುವ ಈ ಸಮ್ಮೇಳನಕ್ಕೆ ಸಿದ್ಧತೆಗಳು ಭರದಿಂದ ನಡೆದಿವೆ ಎಂದು ಪರಿಷತ್ ಅಧ್ಯಕ್ಷ ಆರ್.ಕೆ.ಪದ್ಮನಾಭ್ ತಿಳಿಸಿದ್ದಾರೆ.
ಸ್ಥಳೀಯ ಶ್ರೀರಾಮ ಸೇವೆ ಸಮಿತಿ ಸಹಕಾರದೊಂದಿಗೆ ಈ ಸಮ್ಮೇಳನ ನಡೆಯುತ್ತಿದೆ. ಈ ಬಾರಿಯ ಸಮ್ಮೇಳನದಲ್ಲಿ ಯುವ ಕಲಾವಿದರ ಪ್ರದರ್ಶನಕ್ಕೆ ಆದ್ಯತೆ ನೀಡಲಾಗುವುದು ಎಂದು ಪದ್ಮನಾಭ್ ತಿಳಿಸಿದರು.
1969ರಲ್ಲಿ ಪ್ರಾರಂಭವಾದ ಗಾನಕಲಾ ಪರಿಷತ್ ಸಂಗೀತಗಾರರ ವೇದಿಕೆಯಾಗಿ ಕಾರ್ಯ ನಿರ್ವಹಿಸುತ್ತಿದೆ. ಹಲವಾರು ಯುವ ಗಾಯಕರ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸಿದೆ.
ರಾಮನಾಥಪುರ ಸಮ್ಮೇಳನದ ಅಧ್ಯಕ್ಷತೆಯನ್ನು ವಿದುಷಿ ಶಚೀದೇವಿ ವಹಿಸುವರು. ಹಿರಿಯ ವಯಲಿನ್ ಕಲಾವಿದ ಎಚ್.ಕೆ.ವೆಂಕಟರಾಂ ಯುವ ಸಂಗೀತಗಾರರ ಸಮ್ಮೇಳನದ ಅಧ್ಯಕ್ಷತೆ ವಹಿಸುವರು. ಕಲಾವಿದರಾದ ಎಸ್.ಕೆ.ರಾಮಚಂದ್ರರಾವ್, ಪದ್ಮಶ್ರೀ ಎಂ.ಎಸ್.ಗೋಪಾಲಕೃಷ್ಣನ್ ಮುಂತಾದವರು ಕಾರ್ಯಕ್ರಮ ನೀಡುವರು ಎಂದು ಪದ್ಮನಾಭ್ ಹೇಳಿದರು.
ಪ್ರಖ್ಯಾತ ಕರ್ನಾಟಕ ಸಂಗೀತಗಾರರ ಅಪರೂಪದ ಚಿತ್ರಗಳು ಹಾಗೂ ವೀಣೆ ಶೇಷಣ್ಣನವರ ಸಂಗ್ರಹವನ್ನು ಸಮ್ಮೇಳನದಲ್ಲಿ ಪ್ರದರ್ಶಿಸಲಾಗುವುದು. ಪ್ರವೀಣ್ ಗೋಡ್ಖಿಂಡಿ ಹಾಗೂ ಟಿ.ಆರ್.ಶ್ರೀನಾಥ್ರ ದ್ವಂದ್ವ ಕೊಳಲು ವಾದನ, ಬಿ.ಜಯಶ್ರೀ ಅವರ ರಂಗಗೀತೆಗಳು, ವಿದ್ಯಾಪ್ರಸನ್ನ ತೀರ್ಥರ ಸಂಗೀತ ಕಾರ್ಯಕ್ರಮಗಳು ಸಮ್ಮೇಳನದ ಕೆಲವು ವಿಶೇಷಗಳು ಎಂದು ಪದ್ಮನಾಭ್ ತಿಳಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications