Get Updates
Get notified of breaking news, exclusive insights, and must-see stories!

ಭಾರತ ರತ್ನ ಪ್ರಶಸ್ತಿಗೆ ರಾಜ್ಯ ಸರ್ಕಾರದಿಂದ ಮೂರು ಹೆಸರು ಶಿಫಾರಸು

ಭಾರತ ರತ್ನ ಪ್ರಶಸ್ತಿಗೆ ರಾಜ್ಯ ಸರ್ಕಾರದಿಂದ ಮೂರು ಹೆಸರು ಶಿಫಾರಸು
ಸರ್ಕಾರದ ಪಟ್ಟಿಯಲ್ಲಿ ಶಿವಕುಮಾರ ಸ್ವಾಮಿ, ಎಸ್‌.ನಿಜಲಿಂಗಪ್ಪ ಹಾಗೂ ರಮಾನಂದ ತೀರ್ಥ

ಗುಲ್ಬರ್ಗಾ : ಭಾರತರತ್ನ ಪ್ರಶಸ್ತಿಗೆ ಮಾಜಿ ಮುಖ್ಯಮಂತ್ರಿ ಎಸ್‌. ನಿಜಲಿಂಗಪ್ಪ ಸೇರಿದಂತೆ ಮೂವರ ಹೆಸರನ್ನು ಶಿಫಾರಸು ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಎನ್‌.ಧರ್ಮಸಿಂಗ್‌ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು- ಮಾಜಿ ಮುಖ್ಯಮಂತ್ರಿ ದಿವಂಗತ ಎಸ್‌.ನಿಜಲಿಂಗಪ್ಪ, ಅನ್ನ ಮತ್ತು ಅಕ್ಷರ ದಾಸೋಹದಿಂದ ಪ್ರಖ್ಯಾತರಾಗಿರುವ ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಹಾಗೂ ದಿವಂಗತ ರಮಾನಂದ ತೀರ್ಥ ಸ್ವಾಮಿಯವರ ಹೆಸರನ್ನು ಭಾರತರತ್ನ ಪ್ರಶಸ್ತಿಗೆ ಸೂಚಿಸಲು ನಿರ್ಧರಿಸಲಾಗಿದೆ ಎಂದರು.

ಸಂಪುಟದ ಉಪಸಮಿತಿ ಈ ಹೆಸರುಗಳನ್ನು ಆಯ್ಕೆ ಮಾಡಿದೆ. ರಾಷ್ಟ್ರಕ್ಕೆ ಈ ಮೂವರು ಸಲ್ಲಿಸಿದ ಸೇವೆ ಹಾಗೂ ಸಮಾಜಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ, ಭಾರತರತ್ನ ಪ್ರಶಸ್ತಿಗೆ ಇವರುಗಳ ಹೆಸರು ಶಿಫಾರಸು ಮಾಡಲಾಗಿದೆ. ಅಲ್ಲದೇ ಸ್ವಾತಂತ್ರ್ಯಹೋರಾಟಗಾರ ವಿ.ಪಿ. ದಯಾಳ್‌ಕರ್‌ರವರಿಗೆ ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಶಿಫಾರಸು ಮಾಡಲಾಗಿದೆ ಎಂದು ಧರ್ಮಸಿಂಗ್‌ ತಿಳಿಸಿದರು.

(ಇನ್ಫೋ ವಾರ್ತೆ)

ಮುಖಪುಟ / ಧರ್ಮ-ಕಾರಣ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+