ಬೀದರ್ ಉಪ ಚುನಾವಣೆ : ಶೇ. 42 ಮತದಾನ, ಅ.16 ಮತ ಎಣಿಕೆ
ಬೀದರ್ ಉಪ ಚುನಾವಣೆ : ಶೇ. 42 ಮತದಾನ, ಅ.16 ಮತ ಎಣಿಕೆ
ಚಿಟಪಟ ಮಳೆಯ ನಡುವೆ ನೀರಸ-ಶಾಂತಿಯುತ ಮತದಾನ
13.74 ಮತದಾರರಿರುವ ಈ ಕ್ಷೇತ್ರದಲ್ಲಿ ಒಂಬತ್ತು ಅಭ್ಯರ್ಥಿಗಳು ಕಣದಲ್ಲಿದ್ದು, ಅವರ ಸೋಲುಗೆಲುವಿನ ಭವಿಷ್ಯವನ್ನು ಮತದಾರ ಪ್ರಭು ಮತಯಂತ್ರದಲ್ಲಿ ದಾಖಲಿಸಿದ್ದಾನೆ. ಬಿಜೆಪಿಯ ರಾಮಚಂದ್ರ ವೀರಪ್ಪನವರ ನಿಧನದಿಂದ ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಮರುಚುನಾವಣೆ ನಡೆದಿದೆ. ಐದು ಸಲ ಸಂಸದರಾಗಿದ್ದ ವೀರಪ್ಪ, ಬೀದರ್ ಕ್ಷೇತ್ರವನ್ನು ಬಿಜೆಪಿಯ ಭದ್ರಕೋಟೆಯಾಗಿ ರೂಪಿಸಿದ್ದರು.
ವೀರಪ್ಪನವರ ಪುತ್ರ ಬಸವರಾಜ್ ಆರ್ಯ ಬಿಜೆಪಿಯಿಂದ ಸ್ಪರ್ಧಿಸಿದ್ದು, ತಮ್ಮ ತಂದೆಯ ವರ್ಚಸ್ಸನ್ನು ಹಾಗೂ ಅನುಕಂಪದ ಅಲೆಯ ಪ್ರಯೋಜನ ಪಡೆಯಲು ಕಸರತ್ತು ನಡೆಸಿದ್ದರು. ಜೆಡಿಎಸ್ನ ಬಾಬು ಹೊನ್ನಾ ನಾಯಕ್, ಕಾಂಗ್ರೆಸ್ನ ನರಸಿಂಗರಾವ್ ಸೂರ್ಯವಂಶಿ ತೀವ್ರ ಪೈಪೋಟಿ ನೀಡಿದ್ದಾರೆ.
ಕ್ಷೇತ್ರದಲ್ಲಿ ಲಂಬಾಣಿ ಜನಾಂಗ ಹೆಚ್ಚಿನ ಸಂಖ್ಯೆಯಲ್ಲಿದ್ದು, ಫಲಿತಾಂಶದಲ್ಲಿ ನಿರ್ಣಾಯಕ ಪಾತ್ರವಹಿಸಲಿದೆ. ರಾಜ್ಯಾಡಳಿತ ಪಾಲುದಾರ ಪಕ್ಷಗಳಾದ ಜೆಡಿಎಸ್-ಕಾಂಗ್ರೆಸ್ ತಮ್ಮ ಮೈತ್ರಿಯನ್ನು ಇಲ್ಲಿ ಮುಂದುವರೆಸಿಲ್ಲ. ಬಿಜೆಪಿಯಿಂದ ಬೀದರ್ಲೋಕಸಭಾ ಕ್ಷೇತ್ರವನ್ನು ಕಸಿಯಲು ಈ ಎರಡೂ ಪಕ್ಷಗಳು ಪ್ರಯತ್ನಿಸಿವೆ. ಪ್ರಚಾರದ ಬಿರುಸು ತೀವ್ರವಾಗಿತ್ತು . ರಾಜ್ಯಮಟ್ಟದ ನಾಯಕರ ಜೊತೆಗೆ ರಾಷ್ಟ್ರೀಯ ನಾಯಕರು ಕ್ಷೇತ್ರದಲ್ಲಿ ಮತದಾರರ ಮನವೊಲಿಸಲು ಅಗಮಿಸಿದ್ದರು. ಮತದಾರನ ಗುಟ್ಟನ್ನು ಅರಿಯಲು ಅಕ್ಟೋಬರ್ 16 ರವರೆಗೆ ಕಾಯಲೇ ಬೇಕಾಗಿದೆ.
(ಪಿಟಿಐ)
ಮುಖಪುಟ / ವಾರ್ತೆಗಳು
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications