ಬೀದರ್ಲೋಕಸಭೆ ಸ್ಥಾನ ‘ಕೈ’ಗೆ, ಕೊನೆಗೂ ಜ್ವಲಿಸಿದ ‘ಸೂರ್ಯ’ವಂಶಿ
ಬೀದರ್ಲೋಕಸಭೆ ಸ್ಥಾನ ‘ಕೈ’ಗೆ, ಕೊನೆಗೂ ಜ್ವಲಿಸಿದ ‘ಸೂರ್ಯ’ವಂಶಿ
ಬಿಜೆಪಿಯ ಬಸವರಾಜ ಆರ್ಯ ಪರಾಜಿತ, ಜೆಡಿಎಸ್ಗೆ ಮೂರನೇ ಸ್ಥಾನ
ಬಿಜೆಪಿಯ ಭದ್ರಕೋಟೆ ಎನ್ನಲಾಗಿದ್ದ ಬೀದರ್ ಲೋಕಸಭಾ ಕ್ಷೇತ್ರ ಹದಿಮೂರು ವರ್ಷಗಳ ನಂತರ ಕಾಂಗ್ರೆಸ್ ಪಾಲಾಗಿದೆ. ಶನಿವಾರ ನಡೆದ ಮತ ಎಣಿಕೆಯಲ್ಲಿ ತಮ್ಮ ಪ್ರತಿಸ್ಪರ್ಧಿಗಳಾದ ಬಿಜೆಪಿಯ ಬಸವರಾಜ ಆರ್ಯ ಹಾಗೂ ಜೆಡಿಎಸ್ನ ಹೊನ್ನನಾಯಕ್ರನ್ನು ಸೂರ್ಯವಂಶಿ ಸೋಲಿಸಿದ್ದಾರೆ. ಜೆಡಿಎಸ್ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ.
1991, 1996,1998, 1999, 2004 ಹೀಗೆ ಬಿಜೆಪಿಯ ದಿ.ರಾಮಚಂದ್ರವೀರಪ್ಪ ವಿರುದ್ಧ ಸೋಲುತ್ತಲೇ ಬಂದಿದ್ದ, ಕಾಂಗ್ರೆಸ್ನ ನರಸಿಂಗರಾವ್ ಸೂರ್ಯವಂಶಿ ಈ ಚುನಾವಣೆಯಲ್ಲಿ ಜಯಶೀಲರಾಗಿದ್ದಾರೆ. ಚುನಾವಣೆಯ ಫಲಿತಾಂಶಗಳು ರಾಜ್ಯದ ಸಮ್ಮಿಶ್ರ ಸರಕಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ.
ಜನಮತ : ಸೋನಿಯಾ ನಾಯಕತ್ವವನ್ನು ಜನರು ಬೆಂಬಲಿಸಿರುವುದು ಬೀದರ್ ಚುನಾವಣೆಯಲ್ಲಿ ವ್ಯಕ್ತವಾಗಿದೆ. ಸಮ್ಮಿಶ್ರ ಸರಕಾರದ ಮಿತ್ರ ಪಕ್ಷ ಜೆಡಿಎಸ್ ಚುನಾವಣೆಯ ಕಣದಲ್ಲಿದ್ದದ್ದು ದುರದೃಷ್ಟಕರ. ಬೀದರ್ ಗೆಲುವಿನಿಂದ ಸರಕಾರದ ಮೇಲಿನ ಜವಬ್ದಾರಿ ಹೆಚ್ಚಿದೆ. ಈ ಭಾಗದ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಶ್ರಮಿಸುವುದಾಗಿ ಮುಖ್ಯಮಂತ್ರಿ ಎನ್.ಧರ್ಮಸಿಂಗ್ ಭರವಸೆ ನೀಡಿದ್ದಾರೆ.
ಅಭಿನಂದನೆ : ಕಾಂಗ್ರೆಸ್ ಗೆಲುವಿಗೆ ಕಾರಣರಾದ ಮುಖ್ಯಮಂತ್ರಿ ಎನ್.ಧರ್ಮಸಿಂಗ್ರನ್ನು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ ದೂರವಾಣಿ ಮೂಲಕ ಅಭಿನಂದಿಸಿದ್ದಾರೆ.
(ಪಿಟಿಐ)
ಮುಖಪುಟ / ಧರ್ಮ-ಕಾರಣ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications