ತಂಪುಹವೆ ನಡುವೆ ಗರಿಬಿಚ್ಚಿದ ದಸರೆ ಸಂಭ್ರಮ;‘ಧರ್ಮ’ ಬದ್ಧ ಎಚ್ಚೆನ್
ತಂಪುಹವೆ ನಡುವೆ ಗರಿಬಿಚ್ಚಿದ ದಸರೆ ಸಂಭ್ರಮ;‘ಧರ್ಮ’ ಬದ್ಧ ಎಚ್ಚೆನ್
ವಿಚಾರವಾದಿ ಮೂಲಕ ಉದ್ಘಾಟನೆಗೊಳ್ಳುವ ಮೂಲಕ ದಸರೆಗೆ ಹೊಸ ಆಯಾಮ
ಅ.15ರ ಶುಕ್ರವಾರದಿಂದ ನವರಾತ್ರಿ ಪ್ರಾರಂಭವಾಗಿದ್ದು , ಮೈಸೂರಿನ ಚಾಮುಂಡಿ ಬೆಟ್ಟದ ಒಡತಿ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಜ್ಯೋತಿ ಬೆಳಗಿಸುವ ಮೂಲಕ ಡಾ. ನರಸಿಂಹಯ್ಯ ದಸರೆಗೆ ಚಾಲನೆ ನೀಡಿದರು. ಪುಷ್ಪವೃಷ್ಟಿಯಂತೆ ಆಗಾಗ ಸುರಿಯುತ್ತಿದ್ದ ತುಂತುರು, ತಂಪುಹವೆ ವಾತಾವರಣದಲ್ಲಿ ಒಂಬತ್ತು ದಿನಗಳ ದಸರೆ ಸಂಭ್ರಮ ಆರಂಭವಾಯಿತು.
ಇದೊಂದು ಸಾಂಸ್ಕೃತಿಕ ಉತ್ಸವ. ಧರ್ಮವನ್ನು ಬೇಡ ಎನ್ನುವುದು ಅವಾಸ್ತವವಾದುದು. ಸಂಸ್ಕೃತಿ ಮತ್ತು ಧರ್ಮದೊಂದಿಗೆ ನಮ್ಮ ಜನ ಜೀವನ ನಡೆಸುತ್ತಿದ್ದಾರೆ. ಆ ಕಾರಣದಿಂದಾಗಿ ಸಮಾಜದಲ್ಲಿ ಬದುಕಲು ಧರ್ಮದ ಅಗತ್ಯವಿದೆ ಎಂದು ದಸರೆ ಉದ್ಘಾಟಿಸಿದ ನರಸಿಂಹಯ್ಯ ಹೇಳಿದರು.
ಸಂಸ್ಕೃತಿ ಹಾಗೂ ಕನ್ನಡ ನುಡಿಯನ್ನು ಉಳಿಸಿಕೊಳ್ಳಬೇಕಾದ ಅವಶ್ಯಕತೆ ಹೆಚ್ಚಾಗಿದೆ. ಎಲ್ಲರೂ ಮಾತೃಭಾಷೆಗೆ ಒತ್ತು ನೀಡಬೇಕು ಎಂದ ನರಸಿಂಹಯ್ಯ- ದಸರೆ ಉದ್ಘಾಟಿಸಲು ಅವಕಾಶ ಕಲ್ಪಿಸುವ ಮೂಲಕ ಸರ್ಕಾರ ತಮ್ಮನ್ನು ಗೌರವಿಸಿದೆ ಎಂದು ಭಾವುಕರಾಗಿ ನುಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉಪ ಮುಖ್ಯಮಂತ್ರಿ ಸಿದ್ದರಾಮಯ್ಯ- ಸಾಂಸ್ಕೃತಿಕ ನೆಲೆಗಟ್ಟನ್ನು ವೈಚಾರಿಕತೆಯ ಮೂಲಕ ಕಾಣುವ ಉದ್ದೇಶದಿಂದ ನಾಡಹಬ್ಬವನ್ನು ವಿಚಾರವಾದಿಯಾಬ್ಬರಿಂದ ಉದ್ಘಾಟಿಸಲು ರಾಜ್ಯ ಸರ್ಕಾರ ನಿರ್ಧರಿಸಿತು. ಈ ಮೂಲಕ ದಸರೆಗೆ ಹೊಸ ಆಯಾಮ ದೊರೆತಿದೆ ಎಂದರು.
ಕಂದಾಯ ಸಚಿವ ಎಂ. ಪಿ. ಪ್ರಕಾಶ್, ಕೇಂದ್ರ ಪ್ರವಾಸೋದ್ಯಮ ಸಚಿವೆ ರೇಣುಕಾ ಚೌಧರಿ, ಸಂಸದರಾದ ವಿಜಯ ಶಂಕರ್, ಶಿವಣ್ಣ, ಶಾಸಕರಾದ ಜಿ. ಟಿ. ದೇವೇಗೌಡ, ಎಂ. ಕೆ. ಸೋಮ ಶೇಖರ್, ಡಿ. ಟಿ. ಜಯಕುಮಾರ್, ಶಂಕರ ಲಿಂಗೇಗೌಡ ಕಾರ್ಯಕ್ರಮದಲ್ಲಿ ಹಾಜರಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications