ಹೊಸ ಜನಾದೇಶ ಪಡೆಯಲು ಕಾಂಗ್ರೆಸ್-ಜೆಡಿಎಸ್ ಪಕ್ಷದಲ್ಲಿ ಕಸರತ್ತು
ಹೊಸ ಜನಾದೇಶ ಪಡೆಯಲು ಕಾಂಗ್ರೆಸ್-ಜೆಡಿಎಸ್ ಪಕ್ಷದಲ್ಲಿ ಕಸರತ್ತು
ಪೂಜಾರಿಗೆ ಧಮ್ ಇದ್ದರೇ ನನ್ನ ವಿರುದ್ಧ ಸಿಬಿಐ ತನಿಖೆ ನಡೆಸಲಿ-ರೇವಣ್ಣ
ಎರಡು ಪಕ್ಷಗಳ ಮುಖಂಡರು ಸಂಪುಟ ವಿಸ್ತರಣೆ ಬಗೆಗೆ ವ್ಯತಿರಿಕ್ತ ಹೇಳಿಕೆಗಳ ಮೂಲಕ ಗೊಂದಲ ಮೂಡಿಸಿದ್ದಾರೆ. ಸೋಮವಾರ ಬೆಳಿಗ್ಗೆ ಅಕ್ಟೋಬರ್ ಅಂತ್ಯದಲ್ಲಿ ಸಂಪುಟವಿಸ್ತರಣೆ ಖಚಿತ ಎನ್ನುತ್ತಿದ್ದ ಮುಖ್ಯಮಂತ್ರಿಗಳು, ಸಂಜೆ ಹೊತ್ತಿಗೆ ತಮ್ಮ ನಿಲುವು ಬದಲಿಸಿದ್ದಾರೆ. ಈಗ ದೀಪಾವಳಿ ವೇಳೆಗೆ ವಿಸ್ತರಣೆ ಎನ್ನುತ್ತಿದ್ದಾರೆ.
ಮಹತ್ವದ ಸಭೆ: ನ.4 ರಂದು ಜೆಡಿಎಸ್ ಶಾಸಕಾಂಗ ಸಭೆ ನಡೆಯುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ಕುತೂಹಲದ ಕೇಂದ್ರ ಬಿಂದುವಾಗಿದೆ. ಸಂಪುಟ ವಿಸ್ತರಣೆಯೂ ಬೇಡ, ಹಂಗಿನ ಸರಕಾರವೂಬೇಡ. ಹೊಸ ಜನಾದೇಶ ಪಡೆಯೋಣ ಎಂಬ ಮಾತುಗಳು ಜೆಡಿಎಸ್ ಪಾಳಯದಿಂದ ಕೇಳಿ ಬರುತ್ತಿವೆ.
ಮಹಾರಾಷ್ಟ್ರ ಹಾಗೂ ಬೀದರ್ಚುನಾವಣೆಯ ಗೆಲುವು ಕಾಂಗ್ರೆಸ್ಗೆ ಚೈತನ್ಯ ತುಂಬಿದೆ. ಇದೇ ಅಲೆಯಲ್ಲಿ ಹೊಸ ಜನಾದೇಶ ಪಡೆಯುವ ಉತ್ಸಾಹ ಕಾಂಗ್ರೆಸ್ ಮುಖಂಡರಲ್ಲಿ ಕಾಣಿಸುತ್ತಿದೆ. ದೆಹಲಿಯಲ್ಲಿ ಕೆಲವರು ಹೈಕಮಾಂಡ್ ಮೇಲೆ ಒತ್ತಡ ಹಾಕಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ರನ್ನು ಪ್ರದೇಶ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ, ರಾಜ್ಯದಲ್ಲಿ ಹೊಸ ಜನಾದೇಶ ಪಡೆಯಬೇಕೆಂಬ ವಾದಗಳು ಕಾಂಗ್ರೆಸ್ನಲ್ಲಿವೆ.
ಈ ಎಲ್ಲಾ ಬೆಳವಣಿಗೆಗಳು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನಿದ್ದೆ ಕೆಡಿಸಿದೆ. ಈ ಹಿನ್ನೆಲೆಯಲ್ಲಿ ನಡೆಯಲಿರುವ ಜೆಡಿಎಸ್ ಸಭೆ ಮಹತ್ವ ಹೊಂದಿದೆ. ಜನಾದೇಶ ಪಡೆಯಲು ಕಾಂಗ್ರೆಸ್-ಜೆಡಿಎಸ್ಗೆ ಮನಸ್ಸಿದ್ದರೂ, ಅಧಿಕಾರ ಬಿಡಲು ಕಷ್ಟವಾಗುತ್ತಿದೆ. ರಾಜಕೀಯದ ಹಾವು-ಏಣಿ ಆಟ ಮುಂದುವರೆದಿದೆ.
ಸವಾಲು: ಕೆಪಿಸಿಸಿ ಅಧ್ಯಕ್ಷ ಜನಾರ್ಧನ್ ಪೂಜಾರಿ ಬಗೆಗೆ ದೇವೇಗೌಡರ ಕುಮಾರ ಕಂಠೀರವ ಸಚಿವ ರೇವಣ್ಣ ಕೆಂಡಕಾರಿದ್ದಾರೆ. ದುಷ್ಟರನ್ನು ಕಂಡರೆ ದೂರವಿರು ಎಂದು ಸುಮ್ಮನಿದ್ದರೆ, ಪೂಜಾರಿ ನನ್ನನ್ನು ಕಳಂಕಿತ ಸಚಿವನೆಂದು ಕೆಣಕಿದ್ದಾರೆ. ಪೂಜಾರಿಗೆ ಧಮ್ ಇದ್ದರೇ ನನ್ನ ವಿರುದ್ಧ ಮಾಡಿರುವ ಆರೋಪಗಳ ಬಗ್ಗೆ ಸಿಬಿಐ ತನಿಖೆ ನಡೆಸಲಿ ಎಂದು ರೇವಣ್ಣ ಸವಾಲು ಹಾಕಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಧರ್ಮ-ಕಾರಣ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications