ಚಿಕ್ಕಮಗಳೂರು: ಮತ್ತೊಂದು ದತ್ತ ಹುತ್ತ, ಶಾಸಕನಿಂದಆತ್ಮಾಹುತಿ ಯತ್ನ
ಚಿಕ್ಕಮಗಳೂರು: ಮತ್ತೊಂದು ದತ್ತ ಹುತ್ತ, ಶಾಸಕನಿಂದಆತ್ಮಾಹುತಿ ಯತ್ನ
ದತ್ತಾತ್ರೇಯ ವಿಗ್ರಹ ಸಂಪೂರ್ಣ ತೆರವು, ಮಂಟಪ ನಾಶ
ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆಯಲ್ಲಿ ದತ್ತಮಾಲೆ ಅಭಿಯಾನ ಈ ವರ್ಷ ಕಾವೇರಿತ್ತು. ಬಿಜೆಪಿ ಮತ್ತು ಸಂಘ ಪರಿವಾರ ವಿವಾದಾತ್ಮಕ ಪ್ರದೇಶದಲ್ಲಿ ಪ್ರತಿಷ್ಠಾಪಿಸಿದ್ದ ದತ್ತಾತ್ರೇಯ ವಿಗ್ರಹ ಮತ್ತು ಮಂಟಪವನ್ನು ಜಿಲ್ಲಾಡಳಿತ ಮಂಗಳವಾರ(ಅಕ್ಟೋಬರ್ 26) ಸಂಪೂರ್ಣವಾಗಿ ತೆರವುಗೊಳಿಸಿದೆ. ಈ ಸಂದರ್ಭದಲ್ಲಿ ಪ್ರತಿರೋಧ ವ್ಯಕ್ತ ಪಡಿಸಿ, ಆತ್ಮಹತ್ಯೆಗೆ ಪ್ರಯತ್ನಿಸಿದ ಶಾಸಕ ಸಿ.ಟಿ. ರವಿ ಸೇರಿದಂತೆ 38 ಮಂದಿಯನ್ನು ಪೋಲೀಸರು ಬಂಧಿಸಿದ್ದಾರೆ.
ವಿಜಯಪುರ ಬಡಾವಣೆಯ ದುರ್ಗಾದೇವಿ ಮಂಟಪದಲ್ಲಿ ದತ್ತಾತ್ರೇಯ ವಿಗ್ರಹದ ಪ್ರತಿಷ್ಠಾಪನೆಗೆ ಸಂಘಪರಿವಾರ ಅನುಮತಿ ಕೋರಿತ್ತು. ಶಾಂತಿಭಂಗವಾಗುವ ಸಾಧ್ಯತೆಗಳಿವೆ ಎಂದು ಜಿಲ್ಲಾಡಳಿತ ಅನುಮತಿ ನಿರಾಕರಿಸಿತ್ತು. ನಿರಾಕರಣೆಗೆ ಸೊಪ್ಪು ಹಾಕದೇ ಅದೇ ಪ್ರದೇಶದಲ್ಲಿ ದತ್ತಾತ್ರೇಯ ವಿಗ್ರಹವನ್ನು ದಿಢೀರ್ ಪ್ರತಿಷ್ಠಾಪಿಸಿ, ಮಂಟಪವನ್ನು ನಿರ್ಮಿಸಲಾಗಿತ್ತು. ಈ ವಿವಾದಾತ್ಮಕ ಪ್ರದೇಶ ಈದ್ಗಾ ಸಮಿತಿಗೆ ಸೇರಿದ್ದು /ನಗರಸಭೆಗೆ ಸೇರಿದ್ದು ಎಂಬ ಗೊಂದಲಗಳಿವೆ.
ಚಿಕ್ಕಮಗಳೂರು ಬಂದ್: ಈ ಘಟನೆಯ ಪರಿಣಾಮ ಚಿಕ್ಕಮಗಳೂರು ತಲ್ಲಣಗೊಂಡಿದೆ. ಉದ್ರಿಕ್ತ ವಾತಾವರಣದ ಹಿನ್ನೆಲೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬಿಜೆಪಿ ಮತ್ತು ಸಂಘ ಪರಿವಾರ ಬುಧವಾರ (ಅ.27) ಚಿಕ್ಕಮಗಳೂರು ಬಂದ್ಗೆ ಕರೆ ಕೊಟ್ಟಿವೆ.
(ಇನ್ಫೋ ವಾರ್ತೆ)
ಮುಖಪುಟ / ಧರ್ಮ-ಕಾರಣ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications