ಸಮ್ಮಿಶ್ರ ಸರ್ಕಾರ ಕಷ್ಟ ,ಆದರೂ 5 ವರ್ಷ ಆಡಳಿತ ಖಚಿತ -ಎಸ್ಸೆಂ.ಕೃಷ್ಣ
ಸಮ್ಮಿಶ್ರ ಸರ್ಕಾರ ಕಷ್ಟ ,ಆದರೂ 5 ವರ್ಷ ಆಡಳಿತ ಖಚಿತ -ಎಸ್ಸೆಂ.ಕೃಷ್ಣ
ಸಮ್ಮಿಶ್ರ ಸರ್ಕಾರದಲ್ಲಿ ನಿರ್ಧಾರ ಕೈಗೊಳ್ಳಲು ವಿಳಂಬವಾಗುವುದು ಸಹಜ
ಐದು ತಿಂಗಳ ಸರ್ಕಾರದ ಸಂಪುಟ ವಿಸ್ತರಿಸಲು ಉಂಟಾಗುತ್ತಿರುವ ವಿಳಂಬದ ಕುರಿತು ಪ್ರತಿಕ್ರಿಯಿಸಿದ ಕೃಷ್ಣ - ಸಮ್ಮಿಶ್ರ ಸರ್ಕಾರ ನಡೆಸುವುದು ಕಷ್ಟ ಕಷ್ಟ ಎಂದರು. ಈ ಕಷ್ಟದ ಹಾದಿಯಲ್ಲೂ ರಾಜ್ಯದಲ್ಲಿ ಮಧ್ಯಂತರ ಚುನಾವಣೆಗಳು ನಡೆಯುವ ಸಾಧ್ಯತೆಗಳಿಲ್ಲ ಎಂದು ಸುದ್ದಿಗಾರರ ಪ್ರಶ್ನೆಯಾಂದಕ್ಕೆ ಕೃಷ್ಣ ಪ್ರತಿಕ್ರಿಯಿಸಿದರು. ಅವರು ಅ.28ರ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಸಮ್ಮಿಶ್ರ ಸರ್ಕಾರದ ಸಂದರ್ಭದಲ್ಲಿ ನಿರ್ಧಾರ ಕೈಗೊಳ್ಳಲು ವಿಳಂಬವಾಗುವುದು ಸಹಜ. ಅಂತೆಯೇ ಕೈಗೊಂಡ ನಿರ್ಧಾರಗಳನ್ನು ಅನುಷ್ಠಾನಕ್ಕೆ ತರುವುದೂ ಕಷ್ಟ . ಇವೆಲ್ಲವೂ ಸಮ್ಮಿಶ್ರ ಸರ್ಕಾರದ ಹೊಂದಾಣಿಕೆಯಲ್ಲಿ ತೆರಲೇಬೇಕಾದ ಶುಲ್ಕ ಎಂದು ಕೃಷ್ಣ ಮಾರ್ಮಿಕವಾಗಿ ನುಡಿದರು.
ಧರ್ಮಸಿಂಗ್ ಸರ್ಕಾರದ ಆಡಳಿತ ವೈಖರಿಯ ಬಗ್ಗೆ ಸ್ಪಷ್ಟ ಹೇಳಿಕೆ ನೀಡದೆ ನುಣುಚಿಕೊಂಡ ಕೃಷ್ಣ , ಸರ್ಕಾರ ಈಗಷ್ಟೇ ನೆಲೆ ಕಂಡುಕೊಳ್ಳುತ್ತಿದೆ ಎಂದರು. ಐದು ತಿಂಗಳ ಸರ್ಕಾರದ ಅವಧಿಯಲ್ಲಿ ತಾವು ಮೂರು ತಿಂಗಳ ವಿದೇಶ ಪ್ರವಾಸದಲ್ಲಿದ್ದು, ಎಂಟು ದಿನಗಳ ಹಿಂದಷ್ಟೇ ರಾಜ್ಯಕ್ಕೆ ವಾಪಸ್ಸಾಗಿದ್ದೇನೆ. ಈ ಅವಧಿಯಲ್ಲಿ ಸಮ್ಮಿಶ್ರ ಸರ್ಕಾರದ ಪಕ್ಷಗಳ ಸಂಬಂಧ ಸುಧಾರಣೆಯ ಬಗ್ಗೆ ಗಮನಿಸುತ್ತಿದ್ದೇನೆ ಎಂದು ಕೃಷ್ಣ ಹೇಳಿದರು.
(ಪಿಟಿಐ)
ಮುಖಪುಟ / ಕೃಷ್ಣಗಾರುಡಿ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications