ರಾಜ್ಯೋತ್ಸವದಂದು ಸಾಮೂಹಿಕ ಆತ್ಮಹತ್ಯೆ;ಸಕ್ಕರೆ ಕಾರ್ಮಿಕರ ಬೆದರಿಕೆ
ರಾಜ್ಯೋತ್ಸವದಂದು ಸಾಮೂಹಿಕ ಆತ್ಮಹತ್ಯೆ;ಸಕ್ಕರೆ ಕಾರ್ಮಿಕರ ಬೆದರಿಕೆ
ಆಳಂದ ಸಹಕಾರಿ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಒತ್ತಾಯ
ಆಳಂದ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ರಾಜ್ಯ ಸರ್ಕಾರ ಪುನರುಜ್ಜೀವನಗೊಳಿಸದಿದ್ದರೆ ನವಂಬರ್ 1ರಂದು ಜಿಲ್ಲಾಧಿಕಾರಿ ಕಚೇರಿಯ ಮುಂದೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕಾರ್ಖಾನೆಯ ನೌಕರರು ಎಚ್ಚರಿಸಿದ್ದಾರೆ.
ಕಳೆದ 20 ತಿಂಗಳಿಂದ ಸಕ್ಕರೆ ಕಾರ್ಖಾನೆಯ ರೈತರಿಗೆ ಸಂಬಳ ನೀಡಲಾಗಿಲ್ಲ . ಕಾರ್ಖಾನೆಯ ಎಲ್ಲ ನೌಕರರಿಗೂ ಬಾಕಿಯಿರುವ ಸಂಬಳವನ್ನು ತಕ್ಷಣವೇ ನೀಡಬೇಕು ಹಾಗೂ ಕಾರ್ಖಾನೆಯ ಪುನಶ್ಚೇತನಕ್ಕೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ 12 ಕಾರ್ಮಿಕರು ಜಿಲ್ಲಾಧಿಕಾರಿ ಕಚೇರಿಯೆದುರು ರಾಜ್ಯೋತ್ಸವ ದಿನದಂದು ಆತ್ಮಹತ್ಯೆ ಮಾಡಿಕೊಳ್ಳುವರು ಎಂದು ರೈತ ಮತ್ತು ಕಾರ್ಮಿಕ ಜಂಟಿ ಹೋರಾಟ ಸಮಿತಿಯ ಅಧ್ಯಕ್ಷ ಎಸ್.ಕೆ. ಕಾಂತ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಅಫ್ಜಲ್ಪುರ, ಗುಲ್ಬರ್ಗಾ ಹಾಗೂ ಆಳಂದ ತಾಲ್ಲೂಕುಗಳಿಂದ ಕಾರ್ಖಾನೆಗೆ ಕೇವಲ 40 ಸಾವಿರ ಟನ್ ಕಬ್ಬು ಮಾತ್ರ ಪೂರೈಕೆಯಾಗುತ್ತಿದ್ದು , ಈ ಕಬ್ಬು ಕಾರ್ಖಾನೆಯ ಸಾಮರ್ಥ್ಯಕ್ಕೆ ಸಾಲುತ್ತಿಲ್ಲ . ಕಾರ್ಖಾನೆಯ ನೌಕರರ ಸಮೀಕ್ಷೆಯ ಪ್ರಕಾರ- ಕಾರ್ಖಾನೆ ವಲಯದಲ್ಲೇ ಸುಮಾರು 1.5 ಲಕ್ಷ ಟನ್ ಕಬ್ಬು ಲಭ್ಯವಿದೆ. ಆದರೂ ಜಿಲ್ಲೆಯ ಏಕೈಕ ಸಕ್ಕರೆ ಕಾರ್ಖಾನೆಯನ್ನು ಉಳಿಸಿಕೊಳ್ಳಲು ಸರ್ಕಾರ ಆಸಕ್ತಿ ತೋರುತ್ತಿಲ್ಲ ಎಂದು ಕಾಂತಾ ದೂರಿದರು.
(ಇನ್ಫೋ ವಾರ್ತೆ)
ಮುಖಪುಟ / ಧರ್ಮ-ಕಾರಣ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications