ಕನ್ನಡ ಕನ್ನಡ ಬರ್ರಿನಮ್ಮ ಸಂಗಡ : ಕಸಾಪ ಅಧ್ಯಕ್ಷರಾಗಿ ಚಂಪಾ
ಬೆಂಗಳೂರು : ಜನ ಜೀವನದ ಎಲ್ಲ ಅಂಗಗಳಿಗೆ ಕನ್ನಡವನ್ನು ಮುಟ್ಟಿಸುವುದು ತಮ್ಮ ಗುರಿ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ 22ನೇ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪ್ರೊ.ಚಂದ್ರಶೇಖರ ಪಾಟೀಲ ತಿಳಿಸಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಚಂಪಾ ಅವರ ಆಯ್ಕೆಯನ್ನು ನ.3ರ ಮಂಗಳವಾರ ಅಧಿಕೃತವಾಗಿ ಪ್ರಕಟಿಸಲಾಯಿತು. ಡಾ. ನಲ್ಲೂರು ಪ್ರಸಾದ್ ವಿರುದ್ಧ ಚಂಪಾ 12,302 ಮತಗಳ ಭಾರೀ ಅಂತರದಿಂದ ಚುನಾಯಿತರಾಗಿದ್ದು, ಕಳೆದ ಬಾರಿ ಹರಿಕೃಷ್ಣ ಪುನರೂರು ವಿರುದ್ಧ ಅನುಭವಿಸಿದ್ದ ಅಲ್ಪ ಅಂತರದ ಸೋಲಿನ ಕಹಿಗೆ ಸಮಾಧಾನ ಕಂಡಿದ್ದಾರೆ. ಚಂಪಾ ಅವರು ಒಟ್ಟು 16,948 ಮತಗಳನ್ನು ಪಡೆದರೆ, ಅವರ ಸಮೀಪದ ಸ್ಪರ್ಧಿ ಡಾ.ನಲ್ಲೂರು ಪ್ರಸಾದ್ ಕೇವಲ 4,646 ಮತಗಳನ್ನು ಪಡೆದರು.
ಫಲಿತಾಂಶ ಪ್ರಕಟಣೆಯ ನಂತರ ಕಸಾಪ ಅಧ್ಯಕ್ಷರಾಗಿ ಹರಿಕೃಷ್ಣ ಪುನರೂರು ಅವರಿಂದ ಚಂಪಾ ಅಧಿಕಾರ ಸ್ವೀಕರಿಸಿದರು. ಬಂಡಾಯದ ನಾಯಕನಿಗೆ ಅಧಿಕಾರ ಸ್ವೀಕಾರಿಸಲು ಮಂಗಳವಾರ ಎನ್ನುವ ನೆಪ ಅಡ್ಡ ಬರಲಿಲ್ಲ .
ಅಧಿಕಾರ ಸ್ವೀಕಾರದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಚಂಪಾ- ಕನ್ನಡದ ಹಿತಾಸಕ್ತಿಗೆ ಪೂರಕವಾಗಿ ಪರಿಷತ್ತು ಕೆಲಸ ಮಾಡಲಿದೆ. ಒಳನಾಡು ಹಾಗೂ ಹೊರನಾಡಿನ ಕನ್ನಡಿಗರೊಂದಿಗೆ ಪರಿಷತ್ತು ಒಟ್ಟಾಗಿ ನಡೆಯಲಿದೆ ಎಂದರು.
ರಾಜ್ಯದಲ್ಲಿ ಕನ್ನಡದ ಸರ್ಕಾರವೇ ಇಲ್ಲ ಎಂದು ಕಿಡಿ ಹಾರಿಸಿದ ಚಂಪಾ, ಕನ್ನಡದ ಹಿತಾಸಕ್ತಿಗೆ ವಿರುದ್ಧವಾದರೆ ಸರ್ಕಾರದ ವಿರುದ್ಧವೇ ಕನ್ನಡಿಗರ ಶಕ್ತಿ ಸಂಚಯಿಸುವುದಾಗಿ ಎಚ್ಚರಿಸಿದರು.
ಅಂದಹಾಗೆ, ಕಸಾಪ ಅಧ್ಯಕ್ಷ ಪದ ಅಲಂಕರಿಸಿದ ಉತ್ತರ ಕರ್ನಾಟಕದ ಮೊದಲಿಗರು ಚಂಪಾ.(ಇನ್ಫೋ ವಾರ್ತೆ)
-
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
ಏಪ್ರಿಲ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್












Click it and Unblock the Notifications