ಪ್ರಗತಿಪರ ‘ಅಗ್ನಿ’ ಪುರುಷರ ಮುಂದಾಳತ್ವದಲ್ಲಿ ಕರುನಾಡ ಸೇನೆ ಸಜ್ಜು
ಪ್ರಗತಿಪರ ‘ಅಗ್ನಿ’ ಪುರುಷರ ಮುಂದಾಳತ್ವದಲ್ಲಿ ಕರುನಾಡ ಸೇನೆ ಸಜ್ಜು
ಬ್ರಿಗೇಡ್ ರಸ್ತೆಗೆ ಬಸವಣ್ಣ ರಸ್ತೆಯೆಂದು ಮರು ನಾಮಕರಣ, ರಾಜಧಾನಿಗೆ ಕನ್ನಡ ಕಂಪು
ಹಿರಿಯ ವಕೀಲ ಸಿ. ಹೆಚ್. ಹನುಮಂತರಾಯ ಮಾರ್ಗದರ್ಶನದಲ್ಲಿ ‘ಕರುನಾಡ ಸೇನೆ’ ಹೋರಾಟಕ್ಕೆ ಸಜ್ಜಾಗಿದೆ.
ಅಗ್ನಿ ವಾರಪತ್ರಿಕೆಯ ಸಂಪಾದಕ ಶ್ರೀಧರ್ ಸೇನೆಯ ದಂಡನಾಯಕರಾಗಿದ್ದು- ನಾಡು ಕಂಡ ನೂರಾರು ಸಂಘಟನೆಗಳಿಗಿಂತಲೂ ಇದು ಸಂಪೂರ್ಣ ಭಿನ್ನವಾಗಿದೆ. ಮಾತಿಗಿಂತಲೂ ಕಾಯಕದಲ್ಲಿಯೇ ನಮಗೆ ನಂಬಿಕೆ ಎಂದು ಶ್ರೀಧರ್ ಅಭಿಪ್ರಾಯಪಟ್ಟಿದ್ದಾರೆ.
ಇದು ಪತ್ರಿಕೆಯಲ್ಲ ಪ್ರತಿಭಟನೆಯ ಅಸ್ತ್ರ ಎನ್ನುವ ಘೋಷಣೆಯ ಅಗ್ನಿ ಪತ್ರಿಕೆ ಮೂಲಕ ಗುರ್ತಿಸಿಕೊಂಡಿರುವ ಶ್ರೀಧರ್, ರಾಜಧಾನಿ ನಗರದಲ್ಲಿನ ಕನ್ನಡೇತರ ನಾಮಫಲಕಗಳ ವಿರುದ್ಧ ಮೊದಲ ಹೋರಾಟಕ್ಕೆ ಮುಂದಾಗಿದ್ದಾರೆ. ಬ್ರಿಗೇಡ್ ರಸ್ತೆಗೆ ಬಸವಣ್ಣ ರಸ್ತೆ, ಕಮರ್ಷಿಯಲ್ ಸ್ಟ್ರೀಟ್ಗೆ ಟಿಪ್ಪುಸುಲ್ತಾನ್ ಹೆಸರನ್ನು ಹೊಸದಾಗಿ ನಾಮಕರಣ ಮಾಡುವ ಕನಸು ಅವರದು. ಬೆಂಗಳೂರನ್ನು ಸಂಪೂರ್ಣ ಕನ್ನಡೀಕರಣದ ಮೂಲಕ ಶುಚಿಗೊಳಿಸುವುದು ಸೇನೆಯ ಗುರಿ. ನ.8 ರಂದು ನಗರದ ಸೆಂಟ್ರಲ್ ಕಾಲೇಜು ಮೈದಾನದಲ್ಲಿ ಸೇನೆಯ ಉದ್ಘಾಟನಾ ಸಮಾರಂಭ ನಡೆಯಲಿದೆ.
ನಾಡಿನ ಹೆಸರಾಂತ ಸಾಹಿತಿಗಳು, ಕಲಾವಿದರು, ನಿಜವಾದ ಕನ್ನಡ ಹೋರಾಟಗಾರರು, ದಲಿತ ಸಂಘರ್ಷ ಸಮಿತಿ, ರೈತ ಸಂಘ ಸೇರಿದಂತೆ ಅನೇಕ ಸಂಘಟನೆಗಳ ಬೆಂಬಲ ಸೇನೆಗಿದೆ. ರಾಜಧಾನಿ ನಗರಕ್ಕೆ ಮಾತ್ರ ಸೀಮಿತವಾಗದೇ ರಾಜ್ಯದ ಎಲ್ಲಾ ಊರುಗಳಲ್ಲಿ ಸಂಘಟನೆಯನ್ನು ಬಲಪಡಿಸಲಾಗುವುದು. ನಮ್ಮ ಚಟುವಟಿಕೆ ನವೆಂಬರ್ಗೆ ಮಾತ್ರ ಸೀಮಿತವಲ್ಲ ಎಂದು ಶ್ರೀಧರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಇಂದೂಧರ ಹೊನ್ನಾಪುರ, ಕವಿ ಬಂಜಗೆರೆ ಜಯಪ್ರಕಾಶ್, ನಟ ಲೋಹಿತಾಶ್ವ, ಪಟ್ಟಣಗೆರೆ ಜಯಣ್ಣ ಈ ಸಂದರ್ಭದಲ್ಲಿ ಹಾಜರಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ವಾಟ್ಸ್ ಹಾಟ್
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications