ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಡೆಲ್ಲಿಯಲ್ಲಿ ಕಸರತ್ತು-ಕಣದಲ್ಲಿ ಬಂಗಾರಪ್ಪ
ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಡೆಲ್ಲಿಯಲ್ಲಿ ಕಸರತ್ತು-ಕಣದಲ್ಲಿ ಬಂಗಾರಪ್ಪ
ಸದಾನಂದ ಗೌಡ, ಜಗದೀಶ್ ಶೆಟ್ಟರ್ ಬಲಾಬಲ ಪರೀಕ್ಷೆ: ವರಿಷ್ಠರಿಗೆ ತಲೆ ಬಿಸಿ
ಅನಂತ್ ಕುಮಾರ್ ರಾಷ್ಟ್ರ ರಾಜಕಾರಣಕ್ಕೆ ಮರಳಿದ ನಂತರ ತೆರವಾಗಿರುವ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಸ್ಥಾನಕ್ಕೆ ದೆಹಲಿಯಲ್ಲಿ ಲಾಬಿ ಆರಂಭವಾಗಿದೆ. ಪಕ್ಷದಲ್ಲಿನ ವಿವಿಧ ಗುಂಪುಗಳು ವರಿಷ್ಠರ ಮೇಲೆ ಭಾರೀ ಒತ್ತಡ ಹೇರುತ್ತಿವೆ. ಮಂಗಳೂರು ಸಂಸದ ಡಿ.ವಿ.ಸದಾನಂದ ಗೌಡ, ಶಾಸಕ ಜಗದೀಶ್ಶೆಟ್ಟರ್ ಮೊದಲಿಂದಲೂ ಆಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಗಳೆಂದು ಗುರ್ತಿಸಿಕೊಂಡಿದ್ದಾರೆ.
ಲಿಂಗಾಯಿತ ಸಮುದಾಯದ ಬೆಂಬಲ ಹಾಗೂ ಅನುಭವಿ ಎಂಬ ಹೆಗ್ಗಳಿಕೆ ಜಗದೀಶ್ಶೆಟ್ಟರ್ಗಿದೆ. ಆರ್ಎಸ್ಎಸ್ ಹಿನ್ನೆಲೆಯ ಸದಾನಂದ ಗೌಡರಿಂದ ರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿ ಮತ್ತು ಆರ್ಎಸ್ಎಸ್ ಸಂಬಂಧ ಬಲವಾಗುತ್ತದೆ. ಗೌಡರಿಗೆ ಅವಕಾಶ ಕಲ್ಪಿಸಿದರೆ ಒಕ್ಕಲಿಗರ ಸೆಳೆಯಲು ಸುಲಭವಾಗುತ್ತದೆ ಎನ್ನುವುದು ಅವರ ಬೆಂಬಲಿಗರ ವಾದ. ಆದರೆ ಕಾಂಗ್ರೆಸ್ನ ಎಸ್.ಎಂ.ಕೃಷ್ಣ , ಜೆಡಿಎಸ್ನ ದೇವೇಗೌಡರ ಮುಂದೆ ಸದಾನಂದ ಗೌಡ ನಿಲ್ಲಲು ಹೇಗೆ ಸಾಧ್ಯ ಎನ್ನುವುದು ಅವರ ವಿರೋಧಿಗಳ ಪ್ರಶ್ನೆ.
ಬಂಗಾರಪ್ಪ ಸರಿ: ರಾಜ್ಯದಲ್ಲಿನ ಸಮ್ಮಿಶ್ರ ಸರಕಾರ ಯಾವಾಗ ಬೇಕಾದರೂ ಉರುಳ ಬಹುದು. ಇಂತಹ ಸಮಯದಲ್ಲಿ ಬಿಜೆಪಿ ನೇತೃತ್ವದ ಸರಕಾರ ರಚಿಸಿ, ಮತ್ತೊಂದು ಚುನಾವಣೆ ತಪ್ಪಿಸಲು ಬಂಗಾರಪ್ಪ ಮಾತ್ರ ಸಮರ್ಥರು. ಹಿಂದುಳಿದ ವರ್ಗದ ಮುಖಂಡ ಬಂಗಾರಪ್ಪ ಬಿಜೆಪಿಗೆ ಚೈತನ್ಯ ತುಂಬಬಲ್ಲರು. ರಾಜ್ಯದಲ್ಲಿ ಬಿಜೆಪಿ ಸಾರಥ್ಯವಹಿಸಲು ಬಂಗಾರಪ್ಪ ಸಮರ್ಥರೆಂದು ಬಿಜೆಪಿ ವರಿಷ್ಠರ ಮನವೊಲಿಸುವ ಪ್ರಯತ್ನಗಳು ನಡೆದಿವೆ. ಎಲ್.ಕೆ. ಆಡ್ವಾಣಿ ಹಾಗೂ ಅನಂತಕುಮಾರ್ ಸಹಾ ಬಂಗಾರಪ್ಪ ನವರ ಬಗೆಗೆ ಒಲವು ಹೊಂದಿದ್ದಾರೆ ಎನ್ನಲಾಗಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications