ಕಂಚಿಶ್ರೀ ಬಂಧನ : ಆರೆಸ್ಸೆಸ್ ಖಂಡನೆ, ಪ್ರತಿಭಟನೆಗೆ ವಿಎಚ್ಪಿ ಸಜ್ಜು
ಕಂಚಿಶ್ರೀ ಬಂಧನ : ಆರೆಸ್ಸೆಸ್ ಖಂಡನೆ, ಪ್ರತಿಭಟನೆಗೆ ವಿಎಚ್ಪಿ ಸಜ್ಜು
ಸ್ವಾಮೀಜಿ ಬಂಧನ ಸಮಸ್ತೆ ಹಿಂದೂ ಸಮುದಾಯಕ್ಕೆ ಮಾಡಿದ ಅವಮಾನ -ತೊಗಾಡಿಯಾ
ನಾವು ಬಂಧನವನ್ನು ಖಂಡಿಸುತ್ತೇವೆ. ಬಂಧನದ ಅವಶ್ಯಕತೆಯೇ ಇರಲಿಲ್ಲ . ಕಂಚಿಶ್ರೀಗಳು ತನಿಕೆಗೆ ಸಂಪೂರ್ಣ ಸಹಕಾರ ನೀಡಿದ್ದರು. ಅತ್ಯುನ್ನತ ಗೌರವದ ಹಿಂದೂ ಮಠವೊಂದರ ಹಿರಿಯ ಸ್ವಾಮೀಜಿಯ ಬಂಧನ ಲಕ್ಷಾಂತರ ಭಕ್ತರ ಭಾವನೆಗಳನ್ನು ನೋಯಿಸಿದೆ. ಉತ್ತಮವಾಗಿ ನಡೆಸಿಕೊಳ್ಳಲು ಕಂಚಿಶ್ರೀಗಳು ಅರ್ಹರು ಎಂದು ಆರೆಸ್ಸೆಸ್ ಲಕ್ತಾರ ರಾಮ್ ಮಾಧವ್ ತಿಳಿಸಿದ್ದಾರೆ.
ನೂರಾರು ವರ್ಷಗಳ ಇತಿಹಾಸವಿರುವ ಕಂಚಿಮಠದೊಂದಿಗೆ ಸಂಕಷ್ಟದ ಸಂದರ್ಭದಲ್ಲಿ ಒಗ್ಗಟ್ಟಾಗಿ ನಿಲ್ಲುವಂತೆ ಹಿಂದೂ ಸಮುದಾಯಕ್ಕೆ ಆರೆಸ್ಸೆಸ್ ವಕ್ತಾರ ರಾಮ್ ಮಾಧವ್ ಮನವಿ ಮಾಡಿಕೊಂಡಿದ್ದಾರೆ.
ಹಿಂದೂಗಳಿಗೆ ಅವಮಾನ -ತೊಗಾಡಿಯಾ
ಕಂಚಿಶ್ರೀಗಳ ಬಂಧನಕ್ಕೆ ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕ ಸರ್ಕಾರಗಳೊಂದಿಗೆ ಕೇಂದ್ರಸರ್ಕಾರವೂ ಪಿತೂರಿ ನಡೆಸಿದೆ ಎಂದು ವಿಶ್ವ ಹಿಂದೂ ಪರಿಷತ್ ಆರೋಪಿಸಿದೆ.
ಕಂಚಿಶ್ರೀಗಳ ಬಂಧನ ಹಿಂದೂ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ. ಈ ಅವಮಾನದ ವಿರುದ್ಧ ನ.13ರ ಶನಿವಾರದಿಂದ ಎರಡು ದಿನಗಳ ಪ್ರತಿಭಟನೆಯನ್ನು ದೇಶವ್ಯಾಪಿ ಹಮ್ಮಿಕೊಳ್ಳಲಾಗುವುದು ಎಂದು ವಿಎಚ್ಪಿ ನಾಯಕ ಪ್ರವೀಣ್ ತೊಗಾಡಿಯಾ ತಿಳಿಸಿದ್ದಾರೆ. ಅನೇಕ ಕೇಸುಗಳು ಬಾಕಿಯಿರುವ ಜಾಮಾ ಮಸೀದಿಯ ಇಮಾಮ್ ಬುಖಾರಿಯನ್ನು ಬಂಧಿಸಲು ಅವರಿಗೆ ಸಾಧ್ಯವೆ ಎಂದು ತೊಗಾಡಿಯಾ ಪ್ರಶ್ನಿಸಿದ್ದಾರೆ.
(ಪಿಟಿಐ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications