ಕಂಚಿಯ ಶಂಕರಾಚಾರ್ಯ ಜಯೇಂದ್ರ ಸರಸ್ವತಿ ಸ್ವಾಮೀಜಿಯ ಬಂಧನ
ಕಂಚಿಯ ಶಂಕರಾಚಾರ್ಯ ಜಯೇಂದ್ರ ಸರಸ್ವತಿ ಸ್ವಾಮೀಜಿಯ ಬಂಧನ
ಆಂಧ್ರದಲ್ಲಿ ಬಂಧನ, ನೆಲ್ಲೂರು ಜೈಲಿಗೆ ರವಾನೆ
ಆಂಧ್ರಪ್ರದೇಶದ ಮೆಹಬೂಬ್ನಗರದಲ್ಲಿ 60 ವರ್ಷದ ಶಂಕರಾಚಾರ್ಯರನ್ನು ನ.11ರ ಗುರುವಾರ ರಾತ್ರಿ ತಮಿಳುನಾಡಿನ ವಿಶೇಷ ಪೊಲೀಸ್ ತಂಡ ಬಂಧಿಸಿತು. ಬಂಧಿತ ಸ್ವಾಮೀಜಿಯನ್ನು ಚೆನ್ನೈಗೆ ಕರೆತಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು ಎಂದು ತಮಿಳುನಾಡು ಡಿಜಿಪಿ ಐ.ಕೆ. ಗೋವಿಂದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಂಕರಾಚಾರ್ಯರನ್ನು 15 ದಿನಗಳ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದ್ದು , ಅವರನ್ನು ನೆಲ್ಲೂರು ಕಾರಾಗೃಹಕ್ಕೆ ರವಾನಿಸಲಾಗಿದೆ.
ದೀಪಾವಳಿ ಸಂದರ್ಭದಲ್ಲಿ ಶಂಕರಾಚಾರ್ಯರ ಬಂಧನ ಸಿನಿಮೀಯ ರೀತಿಯಲ್ಲಿ ನಡೆದಿದೆ. ಶಂಕರಾಚಾರ್ಯರು ಬೆಂಗಳೂರಿನಲ್ಲಿದ್ದಾರೆಂದು ಭಾವಿಸಿದ ಪೊಲೀಸ್ ಕಮಾಂಡೊಗಳ ತಂಡ ಮೊದಲಿಗೆ ಬೆಂಗಳೂರಿಗೆ ಧಾವಿಸಿ, ಆನಂತರ ಹೈದರಾಬಾದ್ ಮೂಲಕ ಮೆಹಬೂಬ್ನಗರಕ್ಕೆ ತೆರಳಿತು. ಬಂಧನದ ಸಮಯದಲ್ಲಿ ಶಂಕರಾಚಾರ್ಯರು ತ್ರಿಕಾಲ ಪೂಜೆಯಲ್ಲಿ ತೊಡಗಿದ್ದರು.
ಕಂಚೀಪುರಂನ ವರದರಾಜ ಪೆರುಮಾಳ್ ದೇಗುಲದ ಮೇನೇಜರ್ ಶಂಕರರಾಮನ್ನ ಕೊಲೆ (ಸೆ.3, 2004) ಪ್ರಕರಣದಲ್ಲಿ ಶಂಕರಾಚಾರ್ಯರನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಐವರ ಸಾಕ್ಷ್ಯಗಳ ಆಧಾರದ ಮೇಲೆ ಈ ಬಂಧನ ನಡೆದಿದೆ.
ಹಿಂದೊಮ್ಮೆ ಅಯೋಧ್ಯೆ ವಿಷಯದಲ್ಲಿ ಮಧ್ಯಸ್ಥಿಕೆಯ ಪಾತ್ರ ವಹಿಸಿದ್ದ ಕಂಚಿ ಶಂಕರಾಚಾರ್ಯರು ರಾಜಕೀಯ ಸಂಬಂಧಗಳನ್ನೂ ಹೊಂದಿದ್ದರು. 10 ವರ್ಷಗಳ ಹಿಂದೆ ಮಠದಿಂದ ಏಕಾಏಕಿ ಕಣ್ಮರೆಯಾಗಿದ್ದ ಸ್ವಾಮೀಜಿ, ಆನಂತರ ಕರ್ನಾಟಕದ ಕೊಡಗಿನಲ್ಲಿ ಕಾಣಿಸಿಕೊಂಡಿದ್ದರು.
(ಏಜನ್ಸೀಸ್)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications