Get Updates
Get notified of breaking news, exclusive insights, and must-see stories!

ಮಹಾರಾಷ್ಟ್ರ ರಾಜ್ಯಪಾಲರಾಗಿ ಕರ್ನಾಟಕದ ಎಸ್‌.ಎಂ.ಕೃಷ್ಣ ನೇಮಕ

ಮಹಾರಾಷ್ಟ್ರ ರಾಜ್ಯಪಾಲರಾಗಿ ಕರ್ನಾಟಕದ ಎಸ್‌.ಎಂ.ಕೃಷ್ಣ ನೇಮಕ
ಕಾಂಗ್ರೆಸ್‌ ಮುಖಂಡ, ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣರ ಹೊಸ ಅವತಾರ

ನವದೆಹಲಿ : ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಮುಖಂಡ ಮಂಡ್ಯ ಜಿಲ್ಲೆಯ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ಅವರನ್ನು ಐದು ವರ್ಷ ಅವಧಿಗೆ ಮಹಾರಾಷ್ಟ್ರ ರಾಜ್ಯಪಾಲರನ್ನಾಗಿ ಶನಿವಾರ ನೇಮಕ ಮಾಡಲಾಗಿದೆ.

ಮಹಾರಾಷ್ಟ್ರದ ರಾಜ್ಯಪಾಲ ಮಹಮ್ಮದ್‌ ಫಜಲ್‌ರವರ ಅಧಿಕಾರದ ಅವಧಿ ಶುಕ್ರವಾರ(ನ.26) ಪೂರ್ಣಗೊಂಡಿತ್ತು. ಈ ಹಿನ್ನೆಲೆಯಲ್ಲಿ ಎಸ್‌.ಎಂ.ಕೃಷ್ಣರನ್ನು ನೂತನ ರಾಜ್ಯಪಾಲರಾಗಿ ನೇಮಕ ಮಾಡಿರುವುದಾಗಿ ರಾಷ್ಟ್ರಪತಿ ಭವನದ ಮೂಲಗಳು ತಿಳಿಸಿವೆ. ಮಹಾರಾಷ್ಟ್ರ ರಾಜ್ಯಪಾಲರಾಗಲು ಉತ್ತರಾಂಚಲ ಮುಖ್ಯಮಂತ್ರಿ ಎನ್‌.ಡಿ.ತಿವಾರಿ ಅವರ ಹೆಸರು ಸಹ ಕೇಳಿ ಬಂದಿತ್ತು.

ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಸ್‌.ಎಂ.ಕೃಷ್ಣ, ಬೆಂಗಳೂರನ್ನು ಸಿಂಗಾಪುರವನ್ನಾಗಿ ಪರಿವರ್ತಿಸುವ ಕನಸು ಕಂಡಿದ್ದರು. ಐಟಿ-ಬಿಟಿ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿದ್ದರು. ಎಸ್‌.ಎಂ.ಕೃಷ್ಣ ಪ್ರಸ್ತುತ ರಾಜ್ಯಪಾಲರಾಗುವ ಮೂಲಕ ರಾಜ್ಯದ ರಾಜಕಾರಣ ತುಸು ಮಂಕಾಗಿದೆ.

(ಏಜನ್ಸೀಸ್‌)

ಮುಖಪುಟ / ಕೃಷ್ಣಗಾರುಡಿ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+