ಕೃಷ್ಣ ನೇಮಕಕ್ಕೆ ಶಿವಸೇನೆಯ ವಿರೋಧ
ಡಿ.6 ಕೃಷ್ಣ ಅಧಿಕಾರ ಸ್ವೀಕಾರ ; ಕೃಷ್ಣ ನೇಮಕಕ್ಕೆ ಶಿವಸೇನೆಯ ವಿರೋಧ ಚಾಮರಾಜ ಪೇಟೆ ಶಾಸಕ ಸ್ಥಾನಕ್ಕೆ ಡಿ.4ರಂದು ಕೃಷ್ಣ ರಾಜೀನಾಮೆ
ಬೆಂಗಳೂರು : ಮಹಾರಾಷ್ಟ್ರದ ರಾಜ್ಯಪಾಲರಾಗಿ ನೇಮಕಗೊಂಡಿರುವ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಸೆಂ.ಕೃಷ್ಣ ಡಿ.6ರಂದು ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಗಳಿವೆ.
ಪ್ರಸ್ತುತ ಚೀನಾ ಪ್ರವಾಸದಲ್ಲಿರುವ ಕೃಷ್ಣ ಡಿಸೆಂಬರ್ 2 ರಂದು ನವದೆಹಲಿಗೆ ಬರಲಿದ್ದು , ಅಲ್ಲಿಂದ ಬೆಂಗಳೂರಿಗೆ ಆಗಮಿಸುವರು. ಡಿ.3ರಂದು ತಮ್ಮನ್ನು ಗೆಲ್ಲಿಸಿದ ಚಾಮರಾಜಪೇಟೆ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ಸಭೆ ನಡೆಸುವರು. ಡಿ.6ರಂದು ಮಹಾರಾಷ್ಟ್ರ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸುವರು ಎಂದು ಅವರ ನಿಕಟವರ್ತಿ ಮೂಲಗಳು ತಿಳಿಸಿವೆ. ನವಂಬರ್ 27ರಂದು ಮಹಾರಾಷ್ಟ್ರ ರಾಜ್ಯಪಾಲರಾಗಿ ಕೃಷ್ಣ ಅವರನ್ನು ನೇಮಿಸಲಾಗಿತ್ತು .
ಈ ನಡುವೆ ರಾಜ್ಯಪಾಲರಾಗಿ ಕೃಷ್ಣ ಅವರ ನೇಮಕಕ್ಕೆ ಶಿವಸೇನೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಉಭಯ ರಾಜ್ಯಗಳ ನಡುವಣ ಗಡಿ ವಿವಾದ ಜೀವಂತವಾಗಿರುವಾಗ ಕೃಷ್ಣ ಅವರನ್ನು ರಾಜ್ಯಪಾಲರನ್ನಾಗಿ ನೇಮಿಸಿರುವ ಕ್ರಮ ಸರಿಯಾದುದಲ್ಲ . ಈ ಮುನ್ನ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದಾಗ ಮಹಾರಾಷ್ಟ್ರದ ಹಿತಾಸಕ್ತಿಗೆ ಧಕ್ಕೆಯಾಗುವಂತೆ ವರ್ತಿಸಿದ್ದರು. ಅಂಥ ವ್ಯಕ್ತಿಯನ್ನು ರಾಜ್ಯಪಾಲರನ್ನಾಗಿ ನೇಮಿಸಿರುವುದು ಸರಿಯಾದ ಕ್ರಮವಲ್ಲ ಎಂದು ಶಿವಸೇನೆ ಹೇಳಿದೆ.
ಕರ್ನಾಟಕ ಹಾಗೂ ಮಹಾರಾಷ್ಟ್ರಗಳ ನಡುವಣ ಗಡಿ ವಿವಾದ ಬಗೆಹರಿಯುವವರೆಗೂ ಉಭಯ ರಾಜ್ಯಗಳ ವ್ಯಕ್ತಿಗಳನ್ನು ಎರಡೂ ರಾಜ್ಯಗಳಿಗೆ ರಾಜ್ಯಪಾಲರನ್ನಾಗಿ ನೇಮಿಸುವುದು ಸರಿಯಲ್ಲ ಎಂದು ಶಿವಸೇನೆ ಅಭಿಪ್ರಾಯಪಟ್ಟಿದೆ.(ಇನ್ಫೋ ವಾರ್ತೆ)
-
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Language Row: ಉತ್ತರ ಭಾರತದಲ್ಲಿ ಯಾಕೆ ತಮಿಳು - ಕನ್ನಡ ಇಲ್ಲ ಎಂದ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್












Click it and Unblock the Notifications