ಮಲತಾಯಿ ಧೋರಣೆ ವಿರೋಧಿಸಿ ಡಿ.1ರಂದು ರಾಜ್ಯದಿ ರೈಲ್ವೆ ಬಂದ್
ಮಲತಾಯಿ ಧೋರಣೆ ವಿರೋಧಿಸಿ ಡಿ.1ರಂದು ರಾಜ್ಯದಿ ರೈಲ್ವೆ ಬಂದ್
ರಾಜ್ಕುಮಾರ್, ವಿಷ್ಣುವರ್ಧನ್ ಕುರಿತು ಪಾಟೀಲ ಪುಟ್ಟಪ್ಪ ಕಟುಟೀಕೆ
ಡಿಸೆಂಬರ್ 1ರಂದು ರಾಜ್ಯ ರೈಲ್ವೆಬಂದ್ಗೆ ಕರೆ ನೀಡಲಾಗಿದೆ. ಹುಬ್ಬಳ್ಳಿ, ಬೆಂಗಳೂರು, ಮೈಸೂರು ಮತ್ತು ಬಳ್ಳಾರಿ ನಿಲ್ದಾಣಗಳಲ್ಲಿ ರೈಲ್ವೆ ಸಂಚಾರವನ್ನು ನಿಲ್ಲಿಸಲಾಗುವುದು. ಬಂದ್ ಶಾಂತಿಯುತವಾಗಿ ನಡೆಯಲಿದೆ ಎಂದು ಕರ್ನಾಟಕ ಅಭಿವೃದ್ಧಿ ವೇದಿಕೆ ಅಧ್ಯಕ್ಷ ಪಾಟೀಲ ಪುಟ್ಟಪ್ಪ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ, ರೈಲ್ವೆ ಮಂಡಳಿ ಮತ್ತು ರೈಲ್ವೆ ಸಚಿವರಿಗೆ ಮನವಿ ಪತ್ರಗಳನ್ನು ಬರೆದು ಸುಸ್ತಾಗಿದ್ದೇವೆ. ಈಗ ಉಳಿದಿರುವುದು ಕೇವಲ ಹೋರಾಟ ಮಾರ್ಗ ಮಾತ್ರ. ಡಿಸೆಂಬರ್1 ರಂದು ಬೆಳಿಗ್ಗೆ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಜಮಾಯಿಸಿ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗುವುದು ಎಂದ ಪಾಪು- ವಿವಿಧ ಕನ್ನಡ ವೇದಿಕೆಗಳು, ಕನ್ನಡ ಪರ ಸಂಘಟನೆಗಳು, ಜನಪ್ರತಿನಿಧಿಗಳು ಮತ್ತು ವಿವಿಧ ಸಂಘ- ಸಂಸ್ಥೆಗಳು ಬಂದ್ಗೆ ಬೆಂಬಲ ನೀಡಬೇಕೆಂದು ಮನವಿ ಮಾಡಿದರು.
ಬೇಡಿಕೆಗಳು :
- ನೈರುತ್ಯ ರೈಲ್ವೆ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಬೇಕು.
- ಸಿ ಮತ್ತು ಡಿ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಸದೆ ಕನ್ನಡಿಗರನ್ನು ನೇರ ನೇಮಕಾತಿ ಮಾಡಿಕೊಳ್ಳಬೇಕು. ಹುಬ್ಬಳ್ಳಿಯಿಂದ ಹೊರಡುವ ರೈಲುಗಳಿಗೆ ಕನ್ನಡ ನಾಮಫಲಕಗಳನ್ನು ತಪ್ಪದೆ ಹಾಕಬೇಕು.
- ರೈಲ್ವೆ ಕಾರ್ಯಾಗಾರವನ್ನು ತ್ವರಿತಗತಿಯಲ್ಲಿ ಅಭಿವೃದ್ಧಿ ಪಡಿಸಬೇಕು. ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ 6 ಪ್ಲಾಟ್ಫಾರಂಗಳನ್ನು ನಿರ್ಮಿಸಬೇಕು.
- ಬೆಂಗಳೂರಿನಲ್ಲಿರುವ ಆರ್ಆರ್ಬಿಯನ್ನು (ರೈಲ್ವೆ ರಿಕ್ರುಟ್ಮೆಂಟ್ ಬೋರ್ಡು) ಹುಬ್ಬಳ್ಳಿಗೆ ಸ್ಥಳಾಂತರಿಸಬೇಕು.
- ತೋರಣಗಲ್ನಿಂದ ಲೋಂಡಾವರೆಗೆ ಡಬಲ್ ಲೈನ್ ಆಗ ಬೇಕು.ಕೊಟ್ಟೂರು-ಹರಿಹರ ರೈಲ್ವೆ ಮಾರ್ಗ ಆಗಬೇಕು.ಕಲ್ಬುರ್ಗಿ ಮತ್ತು ಮಂಗಳೂರಿನಲ್ಲಿ ರೈಲ್ವೇ ವಿಭಾಗಗಳಾಗಬೇಕು.
- ಹುಬ್ಬಳ್ಳಿಯಲ್ಲಿ ವ್ಯಾಗನ್ ಕಾರ್ಖಾನೆ ಆಗಬೇಕು. ದಕ್ಷಿಣ-ಮಧ್ಯ ರೈಲ್ವೆ ಬದಲಿಗೆ ನೈರುತ್ಯ ರೈಲ್ವೇವಲಯ ಎಂಬ ನಾಮಫಲಕ ಹಾಕಬೇಕು.
ಗಣತಂತ್ರ ವ್ಯವಸ್ಥೆಯಲ್ಲಿ ಅನ್ಯಭಾಷಾ ಚಿತ್ರಗಳಿಗೆ ನಿಷೇಧ ಹೇರುವುದು ಸಾಧ್ಯವಿಲ್ಲ ಎಂದು ಪಾಟೀಲ ಪುಟ್ಟಪ್ಪ ತಿಳಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications