ಮರಳುವ ಭರವಸೆಯಾಂದಿಗೆ ಕಾಂಗ್ರೆಸ್ಗೆ ಕೃಷ್ಣತಾತ್ಕಾಲಿಕ ವಿದಾಯ
ಮರಳುವ ಭರವಸೆಯಾಂದಿಗೆ ಕಾಂಗ್ರೆಸ್ಗೆ ಕೃಷ್ಣತಾತ್ಕಾಲಿಕ ವಿದಾಯ
ಮುಂಬಯಿ ರಾಜಭವನವ ಪ್ರಜಾಭವನವಾಗಿಸುವೆ...
ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ತಮ್ಮನ್ನು ಆಯ್ಕೆ ಮಾಡಿದ ಚಾಮರಾಜಪೇಟೆ ಜನತೆಯ ಒಪ್ಪಿಗೆ ಪಡೆದು ತೆರಳುತ್ತಿರುವುದಾಗಿ ಹೇಳಿದ ಕೃಷ್ಣ - ಸಕ್ರಿಯ ರಾಜಕಾರಣದಿಂದ ತಾವು ದೂರವುಳಿಯುವ ಕುರಿತು ಮಾರ್ಮಿಕವಾಗಿ ಉತ್ತರಿಸಿದರು. ರಾಜ್ಯಪಾಲ ಹುದ್ದೆಯ ನಂತರ ರಾಜ್ಯಕ್ಕೆ ಹಿಂತಿರುಗುವುದಾಗಿ ಹೇಳಿದ ಕೃಷ್ಣ , ಜಲಕಂಠೇಶ್ವರನ ಕೃಪಾಕಟಾಕ್ಷ, ಮಾಜಿ ಶಾಸಕ ಆರ್.ವಿ.ದೇವರಾಜ್ ಹಾಗೂ ಕ್ಷೇತ್ರದ ಮತದಾರರ ಸಹಕಾರದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ, ಇದಕ್ಕಾಗಿ ಎಲ್ಲರಿಗೂ ನನ್ನ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದರು.
ಚಾಮರಾಜಪೇಟೆಯ ಜನತೆ ಮುಂಬಯಿಗೆ ಬಂದಾಗ ರಾಜಭವನಕ್ಕೆ ಬನ್ನಿ ಎಂದು ಆಮಂತ್ರಿಸಿದ ಮಾಜಿ ಮುಖ್ಯಮಂತ್ರಿ, ಮಹಾರಾಷ್ಟ್ರದ ರಾಜಭವನವನ್ನು ಪ್ರಜಾಭವನವನ್ನಾಗಿ ಮಾರ್ಪಾಡು ಮಾಡುತ್ತೇನೆ ಎಂದು ಅಭಿಮಾನಿಗಳ ಚಪ್ಪಾಳೆಯ ನಡುವೆ ಹೇಳಿದರು.
ಬೆಂಬಲಿಗರ ವಿರೋಧ : ರಾಜ್ಯ ರಾಜಕಾರಣದಿಂದ ದೂರವುಳಿದು ಮಹಾರಾಷ್ಟ್ರ ರಾಜ್ಯಪಾಲರಾಗಿ ತೆರಳುತ್ತಿರುವ ಕೃಷ್ಣ ಅವರ ನಿರ್ಧಾರವನ್ನು ಅವರ ಕಟ್ಟಾ ಬೆಂಬಲಿಗರು ವಿರೋಧಿಸಿದರು. ಕೃಷ್ಣ ಅವರನ್ನು ಬೇಕೆಂದೇ ರಾಜ್ಯ ಕಾಜಕಾರಣದಿಂದ ದೂರವಿಡಲಾಗುತ್ತಿದೆ ಎನ್ನುವ ಶಂಕೆ ಅನೇಕರದು. ಬೆಂಬಲಿಗರ ಒತ್ತಾಯಕ್ಕೆ ಸ್ಪಂದಿಸಿದ ಕೃಷ್ಣ , ರಾಜ್ಯಪಾಲ ಹುದ್ದೆ ಶಾಶ್ವತವೇನಲ್ಲ . ಎಲ್ಲಿಯೇ ಇದ್ದರೂ ರಾಜ್ಯವನ್ನು ಮರೆಯುವುದಿಲ್ಲ ಎಂದರು. ಅನೇಕ ರಾಜ್ಯಪಾಲರು ತಮ್ಮ ಕರ್ತವ್ಯ ನಿರ್ವಹಣೆಯ ನಂತರ ಸಕ್ರಿಯ ರಾಜಕಾರಣಕ್ಕೆ ಮರಳಿದ ಉದಾಹರಣೆಗಳಿವೆ ಎಂದು ಕೃಷ್ಣ ಹೇಳಿದರು.
ರಾಜ್ಯಪಾಲ ಹುದ್ದೆಗೆ ತೆರಳುತ್ತಿರುವ ಸಂದರ್ಭದಲ್ಲೂ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಮುಖಂಡ ಎಚ್.ಡಿ.ದೇವೇಗೌಡರ ಮೇಲೆ ಟೀಕಾಪ್ರಹಾರ ಮಾಡಿದ ಕೃಷ್ಣ , ದೇವೇಗೌಡರು ಕಾಂಗ್ರೆಸ್ ವಿರುದ್ಧ ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಆಪಾದಿಸಿದರು. ರೈತರ ಪರ ದೇವೇಗೌಡರ ಕಾಳಜಿ ಬೂಟಾಟಿಕೆಯದು ಎಂದು ಕೃಷ್ಣ ಗೇಲಿ ಮಾಡಿದರು.
ಮುಂಬಯಿಯಲ್ಲಿ ಸಾಂಸ್ಕೃತಿಕ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದಾಗಿ ಹೇಳಿದ ಕೃಷ್ಣ , ಸರ್ಕಾರೇತರ ಸಂಸ್ಥೆಗಳ ನೆರವಿನೊಂದಿಗೆ ಏಡ್ಸ್ ಜಾಗೃತಿ ಆಂದೋಲನ ರೂಪಿಸುವುದಾಗಿ ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ಕೃಷ್ಣಗಾರುಡಿ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications