ಸಂಸತ್ತಿನಲ್ಲಿ ಅಯೋಧ್ಯೆ ಪ್ರಕರಣದ ಹಿನ್ನೆಲೆ ಗೊಂದಲ,ಗದ್ದಲ,ಕೂಗಾಟ
ಸಂಸತ್ತಿನಲ್ಲಿ ಅಯೋಧ್ಯೆ ಪ್ರಕರಣದ ಹಿನ್ನೆಲೆ ಗೊಂದಲ,ಗದ್ದಲ,ಕೂಗಾಟ
ಬಿಜೆಪಿಯಿಂದ ಜೈ ಶ್ರೀರಾಮ್ ಘೋಷಣೆ, ಸಮಾಜವಾದಿ ಪಕ್ಷದಿಂದ ಸಭಾತ್ಯಾಗ
ಶೂನ್ಯವೇಳೆಯಲ್ಲಿ ಸಮಾಜವಾದಿ ಪಕ್ಷದ ಸಂಸದ ರಾಮ್ಜೀ ಲಾಲ್ ಸುಮನ್ ಮಾತನಾಡಿ, ಕೆಲವರು ಈ ದಿನವನ್ನು ಶೋಕದಿಂದ ಆಚರಿಸಿದರೆ, ಮತ್ತೆ ಕೆಲವರು ವಿಜಯೋತ್ಸವದ ದಿನವಾಗಿ ಆಚರಿಸುತ್ತಾರೆ ಎಂದರು.
ಈ ಮಾತಿನಿಂದ ಕೆರಳಿದ ಬಿಜೆಪಿ ಮತ್ತು ಶಿವಸೇನೆ ನಾಯಕರು, ಸಭಾಧ್ಯಕ್ಷರ ಮುಂದಿನ ಪೀಠಕ್ಕೆ ನುಗ್ಗಿದರು. ಸಮಾಜವಾದಿ ಪಕ್ಷವನ್ನು ತರಾಟೆಗೆ ತೆಗೆದು ಕೊಂಡ ಬಿಜೆಪಿ ಸಂಸದರು, ಜೈಶ್ರೀರಾಮ್ ಘೋಷಣೆ ಕೂಗಿದರು. ಸಮಾಜವಾದಿ ಪಾರ್ಟಿ ಸಂಸದರು ಸಭಾತ್ಯಾಗ ಮಾಡಿದರು.
ಕಡತದಿಂದ ಆಯೋಧ್ಯೆಗೆ ಸಂಬಂಧಿಸಿದ ಹೇಳಿಕೆಗಳನ್ನು ತೆಗೆದು ಹಾಕುವಂತೆ ಒತ್ತಾಯಗಳು ಕೇಳಿ ಬಂದವು. ಸಭಾಧ್ಯಕ್ಷ ಸೋಮನಾಥ ಚಟರ್ಜಿ ಗೊಂದಲ ನಿವಾರಣೆಗೆ ನಡೆಸಿದ ಪ್ರಯತ್ನ ಫಲಕಾರಿಯಾಗಲಿಲ್ಲ. ಆಯೋಧ್ಯೆ ವಿವಾದ ಸುಪ್ರಿಂಕೋರ್ಟ್ನಲ್ಲಿದೆ ಈ ಬಗ್ಗೆ ಇಲ್ಲಿ ಚರ್ಚೆ ಬೇಡ ಎಂದು ಚಟರ್ಜಿ ಮನವಿ ಮಾಡಿದರು. ಶಿವಸೇನೆ ಸಂಸದ ಚಂದ್ರಕಾಂತ್ಘೋರೆ, ಆಯೋಧ್ಯೆ ರಾಮನ ಜನ್ಮಸ್ಥಳ. ರಾಮಜನ್ಮಭೂಮಿಯಲ್ಲಿ ದೇವಸ್ಥಾನ ಕಟ್ಟಬೇಕು ಎಂದರು.
ಬಿಗಿ ಬಂದೋಬಸ್ತು : ಬಾಬರಿ ಮಸೀದಿ ಧ್ವಂಸದ ದಿನವಾದ ಇಂದು ಅಹಿತ ಕರ ಘಟನೆಗಳು ಸಂಭವಿಸದಂತೆ ದೇಶವ್ಯಾಪಿ ಬಿಗಿ ಪೋಲೀಸ್ ಬಂದೋಬಸ್ತು ಹಾಕಲಾಗಿತ್ತು. ವಾಹನ ತಪಾಸಣೆ ನಡೆಸಲಾಗುತ್ತಿತ್ತು.
ಚೆನ್ನೈ, ತಂಜಾವೂರು, ಕೊಯಮತ್ತೂರು ಮತ್ತಿತರ ಪ್ರದೇಶಗಳಲ್ಲಿ ನಿಷೇದಾಜ್ಞೆ ಉಲ್ಲಂಘಿಸಿ ಮೆರವಣಿಗೆಗೆ ಯತ್ನಿಸಿದ ಸಾವಿರಾರು ಜನರನ್ನು ಪೋಲೀಸರು ಬಂಧಿಸಿದ್ದಾರೆ.
(ಏಜನ್ಸೀಸ್)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications