ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ- ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅತೃಪ್ತಿ

By Staff
|
Google Oneindia Kannada News

ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ- ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅತೃಪ್ತಿ
ನನಗೆ ಗೌರವ ಕೊಡದಿದ್ದರೆ, ಮುಂದಿನ ಹಾದಿ ನೋಡಿಕೊಳ್ಳುತ್ತೇನೆ- ಬಂಗಾರಪ್ಪ

ಶಿವಮೊಗ್ಗ : ಪಕ್ಷ ಬಿಡುವುದು ಮತ್ತು ಪಕ್ಷ ಕಟ್ಟುವಲ್ಲಿ ಮಾಜಿ ಮುಖ್ಯಮಂತ್ರಿ ಎಸ್‌.ಬಂಗಾರಪ್ಪನವರಿಗೆ ಅಪಾರ ಆಸಕ್ತಿ. ತಮ್ಮ ಮಾತಿಗೆ ಬೆಲೆ ಇಲ್ಲ ಎಂದು ಅರಿವಾಗುತ್ತಿದ್ದಂತೆಯೇ ಬಂಗಾರಪ್ಪ ಮುಖ ತಿರುಗಿಸುತ್ತಾರೆ.

ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನ ದಕ್ಕದಿರುವ ಬಗೆಗೆ ಅವರಿಗೆ ಅಸಮಧಾನವಿದೆ. ಬಹುದಿನಗಳ ನಂತರ ಮೊದಲ ಬಾರಿಗೆ ಬಿಜೆಪಿ ಬಗೆಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿ, ತೀವ್ರ ಕುತೂಹಲ ಕೆರಳಿಸಿದ್ದಾರೆ. ತೀರ್ಥಹಳ್ಳಿಯಲ್ಲಿ ನಡೆದ ಸಮಾರಂಭದಲ್ಲಿ ಬಂಗಾರಪ್ಪ ಬಿಜೆಪಿ ಬಿಡುವ ಬಗೆಗೆ ಅಪರೋಕ್ಷವಾಗಿ ಸೂಚಿಸಿದ್ದಾರೆ. ಆ ಸಮಾರಂಭದಲ್ಲಿ ಬಂಗಾರಪ್ಪ ಹೇಳಿದ್ದು ಇಷ್ಟು;

  • ಅನೇಕ ಕಾರಣಗಳಿಗಾಗಿ ಕಾಂಗ್ರೆಸ್‌ ಬಿಟ್ಟು ಬಿಜೆಪಿ ಪ್ರವೇಶಿಸಿದೆ. ವಾಜಪೇಯಿ, ಆಡ್ವಾಣಿ ಬಗ್ಗೆ ಅಪಾರ ಗೌರವವಿದೆ. ನಮ್ಮನ್ನು ಗೌರವದಿಂದ ನಡೆಸಿಕೊಳ್ಳ ಬೇಕಾದ್ದು ಅವರ ಜವಬ್ದಾರಿ.
  • ಮಾಜಿ ಮುಖ್ಯಮಂತ್ರಿಯಾಗಿ ಹಾಗೂ ಮೂರು ಬಾರಿ ಸಂಸದನಾಗಿ ಆಯ್ಕೆಯಾದ ನನ್ನನ್ನು ಆ ಪಕ್ಷ ಸೂಕ್ತವಾಗಿ ಪರಿಗಣಿಸಿಲ್ಲ. ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ. ರಾಜ್ಯಘಟಕದ ಅಧ್ಯಕ್ಷರ ಆಯ್ಕೆ ತೀರ್ಮಾನ ಸರಿಯಾದವಲ್ಲ.
  • ಸ್ಥಳೀಯ ಸಂಸ್ಥೆ ಚುನಾವಣೆ ನಂತರ ಈ ಸರಕಾರ ಉಳಿಯುವುದಿಲ್ಲ. ಸರಕಾರ ಬಿದ್ದು ಹೋಗುತ್ತದೆ. ಹೀಗಾಗಿ ನಾವು ಪರ್ಯಾಯ ಶಕ್ತಿಯಾಗಿ ರೂಪುಗೊಳ್ಳುವುದು ಅನಿವಾರ್ಯ. ಬಿಜೆಪಿಯಲ್ಲಿ ಗೌರವ ದಕ್ಕದಿದ್ದರೆ ಮುಂದಿನ ದಾರಿ ನೋಡಿಕೊಳ್ಳಬೇಕಾಗುತ್ತದೆ.
(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X