ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಾಬಾಬುಡನ್‌ಗಿರಿಯಲ್ಲಿ ದತ್ತಜಯಂತಿ-ಉರುಸ್‌ ಆಚರಣೆ ಬಂದ್‌

By Staff
|
Google Oneindia Kannada News

ಬಾಬಾಬುಡನ್‌ಗಿರಿಯಲ್ಲಿ ದತ್ತಜಯಂತಿ-ಉರುಸ್‌ ಆಚರಣೆ ಬಂದ್‌
ದತ್ತಜಯಂತಿ ಯಾವುದೇ ಕಾರಣಕ್ಕೂ ನಿಲ್ಲದು-ವಿಎಚ್‌ಪಿ

ಚಿಕ್ಕಮಗಳೂರು : ಬಾಬಾಬುಡನ್‌ಗಿರಿಯಲ್ಲಿ ಹೊಸ ಆಚರಣೆಗಳಿಗೆ ಅವಕಾಶ ನೀಡದಿರಲು ಜಿಲ್ಲಾಡಳಿತ ನಿರ್ಧರಿಸಿದೆ. ಹೀಗಾಗಿ ದತ್ತಜಯಂತಿ ಸಂದರ್ಭದಲ್ಲಿ ಬೆಟ್ಟದ ಗುಹೆಗಳ ಬಳಿ ನಡೆಯುತ್ತಿದ್ದ ಹೋಮ, ಹವನಗಳಂತಹ ಆಚರಣೆಗಳಿಗೆ ಅಡ್ಡಿಯಾಗಲಿದೆ.

ರಾಜ್ಯ ಹೈಕೋರ್ಟ್‌ನ ಆದೇಶದಂತೆ ಶ್ರೀಗುರು ದತ್ತಾತ್ರೇಯ ಬಾಬಾಬುಡನ್‌ ಸ್ವಾಮಿ ದರ್ಗಾ ಮುಜರಾಯಿ ಇಲಾಖೆಗೆ ಸೇರಿದ ಸಂಸ್ಥೆಯಾಗಿದ್ದು, 1975ಕ್ಕಿಂತ ಹಿಂದಿನ ವಿಧಿವಿಧಾನಗಳನ್ನು ಆಚರಿಸುವಂತಿಲ್ಲ. ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಜಿಲ್ಲಾಡಳಿತ ಸಜ್ಜಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ರಾಜೇಂದ್ರ ಕುಮಾರ್‌ ಕಠಾರಿಯಾ, ಹಿಂದೆ ಆಗಿರುವ ತಪ್ಪುಗಳಿಗೆ ನಾನು ಹೊಣೆಯಲ್ಲ. ಮುಂದಿನ ಹೊಸ ತಪ್ಪುಗಳಿಗೆ ಅವಕಾಶ ನೀಡುವುದಿಲ್ಲ. ಹಿಂದುಗಳಿಗೆ ಮಾತ್ರವಲ್ಲ ಮುಸ್ಲಿಂರಿಗೂ ಈ ಆದೇಶ ಅನ್ವಯಿಸುತ್ತದೆ. ಉರುಸ್‌ ಮತ್ತು ದತ್ತ ಜಯಂತಿಗೆ ಇನ್ನು ಮುಂದೆ ಅವಕಾಶ ಇಲ್ಲ ಎಂದಿದ್ದಾರೆ.

ಅತೃಪ್ತಿ : ಹೊಸ ಆದೇಶದ ಬಗೆಗೆ ಅತೃಪ್ತಿ ವ್ಯಕ್ತಪಡಿಸಿರುವ ವಿಎಚ್‌ಪಿ, ಜಿಲ್ಲಾಧಿಕಾರಿಗಳ ನಿರ್ಧಾರ ಗೊಂದಲಕ್ಕೆ ಕಾರಣವಾಗಿದೆ. ಸಾವಿರಾರು ವರ್ಷಗಳಿಂದ ಆಚರಣೆಯಲ್ಲಿರುವ ದತ್ತ ಜಯಂತಿ ಉತ್ಸವವನ್ನು ನಡೆಸುವುದಾಗಿ ತಿಳಿಸಿದೆ.

(ಇನ್ಫೋ ವಾರ್ತೆ)

ಮುಖಪುಟ / ಧರ್ಮ-ಕಾರಣ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X