ಸಂಪುಟ ವಿಸ್ತರಣೆಗೆ ಮತ್ತೆ ಜೀವ : ಧರ್ಮಸಿಂಗ್-ದೇವೇಗೌಡ ಭೇಟಿ
ಸಂಪುಟ ವಿಸ್ತರಣೆಗೆ ಮತ್ತೆ ಜೀವ : ಧರ್ಮಸಿಂಗ್-ದೇವೇಗೌಡ ಭೇಟಿ
ಮುಂದಿನ ವಾರ ಸಂಪುಟ ವಿಸ್ತರಣೆ ಖಚಿತ!
ಸಂಪುಟ ವಿಸ್ತರಣೆ ವಿಳಂಬದ ಬಗ್ಗೆ ಜೆಡಿಎಸ್ ಕಾರ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಬೆನ್ನಿಗೇ ಧರ್ಮಸಿಂಗ್ ಹಾಗೂ ಗೌಡರ ಭೇಟಿ ನಡೆದಿದೆ. ಜಾತ್ಯತೀತ ಜನತಾದಳ ಶಾಸಕರ ಸಭೆಯ ನಂತರ ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವ ಕುರಿತು ಬೇಸರ ವ್ಯಕ್ತಪಡಿಸಿದ್ದ ಕುಮಾರಸ್ವಾಮಿ, ವಿಸ್ತರಣೆಗೆ ಡಿಸೆಂಬರ್ 13ರ ಗಡುವು ನೀಡಿದ್ದರು.
ಶಾಸಕರ ಅಸಮಾಧಾನ ಸ್ಫೋಟದ ಹಿನ್ನೆಲೆಯಲ್ಲಿ ಧರ್ಮಸಿಂಗ್ರನ್ನು ಭೇಟಿ ಮಾಡಲು ದೇವೇಗೌಡ ನಿರಾಕರಿಸಿದ್ದರು. ಹಿರಿಯ ಕಾಂಗ್ರೆಸ್ ನಾಯಕರೊಬ್ಬರ ಮಧ್ಯಸ್ಥಿಕೆಯಿಂದಾಗಿ ಗೌಡ ಹಾಗೂ ಧರ್ಮಸಿಂಗ್ ಭೇಟಿ ನಡೆದಿದೆ. ಗೌಡರ ಪುತ್ರ ಹಾಗೂ ಕಂದಾಯ ಸಚಿವ ಎಚ್.ಡಿ.ರೇವಣ್ಣ ಅವರ ನಿವಾಸದಲ್ಲಿ ಈ ಭೇಟಿ ನಡೆಯಿತು.
ಸಂಪುಟ ವಿಸ್ತರಿಸಲು ತಮಗೆ ಎದುರಾಗಿರುವ ಅಡಚಣೆಗಳ ಕುರಿತು ಧರ್ಮಸಿಂಗ್ ತಮ್ಮ ಭೇಟಿಯ ಕಾಲದಲ್ಲಿ ದೇವೇಗೌಡರಿಗೆ ವಿವರಿಸಿದ್ದು , ಗೌಡರು ಅಭಯ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡ- ಸರ್ಕಾರ ಹಾಗೂ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ನಾವು ಅಗತ್ಯ ನೆರವು ನೀಡುತ್ತೇವೆ ಎಂದರು.
ಸೋನಿಯಾ ಅವರ ಹುಟ್ಟುಹಬ್ಬ ಸಮಾರಂಭದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಧರ್ಮಸಿಂಗ್ ಬುಧವಾರ ರಾತ್ರಿ ದೆಹಲಿಗೆ ತೆರಳುವರು. ಕಾಂಗ್ರೆಸ್ನಿಂದ ಸಂಪುಟಕ್ಕೆ ಸೇರ್ಪಡೆಯಾಗುವವರ ಪಟ್ಟಿಯಾಂದಿಗೆ ಅವರು ವಾಪಸ್ಸಾಗಲಿದ್ದಾರೆ ಎಂದು ದೇವೇಗೌಡ ಹೇಳಿದರು. ಅಂದಹಾಗೆ, ಡಿ. 9 ರ ಗುರುವಾರ ಸೋನಿಯಾ ಹುಟ್ಟುಹಬ್ಬ .
(ಪಿಟಿಐ)
ಮುಖಪುಟ / ಧರ್ಮ-ಕಾರಣ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications