ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪರಮೇಶ್ವರ್‌, ತಮ್ಮಣ್ಣ ಬೆಂಬಲಿಗರಿಂದ ಕೆಪಿಸಿಸಿ ಕಚೇರಿ ಮುಂದೆ ಗದ್ದಲ

By Staff
|
Google Oneindia Kannada News

ಪರಮೇಶ್ವರ್‌, ತಮ್ಮಣ್ಣ ಬೆಂಬಲಿಗರಿಂದ ಕೆಪಿಸಿಸಿ ಕಚೇರಿ ಮುಂದೆ ಗದ್ದಲ
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕಾಂಗ್ರೆಸ್‌ನಲ್ಲಿ ಅಸಮಾಧಾನ, ಪೂಜಾರಿಯಿಂದ ಶಿಸ್ತುಕ್ರಮದ ಎಚ್ಚರಿಕೆ

ಬೆಂಗಳೂರು : ನಿರೀಕ್ಷಿಸಿದಂತೆ ಸಂಪುಟ ವಿಸ್ತರಣೆ ಬಗ್ಗೆ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಹೊಗೆ ಎದ್ದಿದೆ. ಮದ್ದೂರು ಕ್ಷೇತ್ರದ ಶಾಸಕ ಡಿ.ಸಿ.ತಮ್ಮಣ್ಣ, ಮತ್ತು ಮಾಜಿ ಸಚಿವ ಡಾ. ಜಿ.ಪರಮೇಶ್ವರ್‌ ಅವರ ಬೆಂಬಲಿಗರು ನಗರದ ಕೆಪಿಸಿಸಿ ಕಚೇರಿ ಮುಂದೆ ಪ್ರತಿಭಟಿಸಿ, ತಮ್ಮ ಅತೃಪ್ತಿ ಪ್ರದರ್ಶಿಸಿದರು.

ಸಚಿವ ಸ್ಥಾನ ನೀಡದೇ ನಮ್ಮ ನಾಯಕರನ್ನು ಕಡೆಗಣಿಸಲಾಗಿದೆ ಎಂದು ಅವರ ಬೆಂಬಲಿಗರು, ಮುಖ್ಯಮಂತ್ರಿ ಧರ್ಮಸಿಂಗ್‌ ವಿರುದ್ಧ ಘೋಷಣೆಗಳನ್ನು ಕೂಗಿದರು. ಕೆಪಿಸಿಸಿ ಅಧ್ಯಕ್ಷ ಜನಾರ್ಧನ ಪೂಜಾರಿ ಸ್ಥಳಕ್ಕೆ ತೆರಳಿ ಬೆಂಬಲಿಗರ ಮನವೊಲಿಸಲು ಪ್ರಯತ್ನಿಸಿದರು. ಮಂತ್ರಿ ಮಂಡಲದ ಮುಂದಿನ ವಿಸ್ತರಣೆಯಲ್ಲಿ ನ್ಯಾಯ ಒದಗಿಸಲಾಗುವುದು, ಪ್ರತಿಭಟನೆಯನ್ನು ಕೈಬಿಡದಿದ್ದರೆ ಶಿಸ್ತುಕ್ರಮ ಜರುಗಿಸುವುದಾಗಿ ಪೂಜಾರಿ ಎಚ್ಚರಿಸಿದರು.

ಕಾಂಗ್ರೆಸ್‌ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರನ್ನು ನಿರ್ಲಕ್ಷ್ಯ ಮಾಡಲಾಗಿದೆ ಎಂದು ದಾವಣಗೆರೆಯಲ್ಲಿ ಅವರ ಬೆಂಬಲಿಗರು ದೂರಿದ್ದಾರೆ. ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಪ್ರಾತಿನಿಧ್ಯ ಸಿಕ್ಕಿಲ್ಲ ಎನ್ನುವ ಕೂಗೂ ಕೇಳಿ ಬರುತ್ತಿದೆ.

(ಪಿಟಿಐ)

ಮುಖಪುಟ / ಧರ್ಮ-ಕಾರಣ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X