Get Updates
Get notified of breaking news, exclusive insights, and must-see stories!

ಮುಖ್ಯಮಂತ್ರಿ ಎನ್‌. ಧರ್ಮಸಿಂಗ್‌ ಮನೆ ಮುಂದೆ ಬಿಜೆಪಿ ಪ್ರತಿಭಟನೆ

ಮುಖ್ಯಮಂತ್ರಿ ಎನ್‌. ಧರ್ಮಸಿಂಗ್‌ ಮನೆ ಮುಂದೆ ಬಿಜೆಪಿ ಪ್ರತಿಭಟನೆ
ಬಿಜೆಪಿ ನಾಯಕರಿಂದ ‘ಹಳ್ಳಿ ಮನೆ’ ಊಟ ತಿಂದು ಧರಣಿ ಮುಂದುವರಿಕೆ

ಬೆಂಗಳೂರು : ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ ಸರಕಾರದ ನಿರ್ಲಕ್ಷ್ಯದಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿವೆ ಎಂದು ಆರೋಪಿಸಿ, ಬಿಜೆಪಿ ಶಾಸಕರು ಹಾಗೂ ವಿಧಾನ ಪರಿಷತ್‌ ಸದಸ್ಯರು ಮಂಗಳವಾರ(ಡಿ.14) ಮುಖ್ಯಮಂತ್ರಿ ಎನ್‌.ಧರ್ಮಸಿಂಗ್‌ ಅಧಿಕೃತ ನಿವಾಸ ಅನುಗ್ರಹದ ಮುಂದೆ ಧರಣಿ ನಡೆಸಿದರು.

ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ, ಹಳದಿ ಪಡಿತರ ಚೀಟಿ ವಿತರಣೆ, ರೈತರ ಪಂಪ್‌ಸೆಟ್‌ಗಳಿಗೆ 12 ಗಂಟೆಗಳ ಕಾಲ ನಿರಂತರ ವಿದ್ಯುತ್‌ ಪೂರೈಕೆ ಮತ್ತಿತರ ಬೇಡಿಕೆಗಳ ಈಡೇರಿಕೆಗಾಗಿ ನಡೆಸಲಾದ ಧರಣಿಯಲ್ಲಿ ಬಿಜೆಪಿ ಶಾಸಕರು ಮುಖ್ಯಮಂತ್ರಿ ಧರ್ಮಸಿಂಗ್‌ಗೆ ಧಿಕ್ಕಾರ ಕೂಗಿದರು.

ಸ್ಥಳಕ್ಕೆ ಆಗಮಿಸಿದ ಮುಖ್ಯಮಂತ್ರಿ ಧರ್ಮಸಿಂಗ್‌ ನೀಡಿದ ಲಿಖಿತ ಹೇಳಿಕೆಗಳಿಂದ ಬಿಜೆಪಿ ನಾಯಕರು ತೃಪ್ತರಾಗಲಿಲ್ಲ. ಧರಣಿ ಮುಂದುವರೆಸಿದ 60 ಶಾಸಕರು, 9 ವಿಧಾನ ಪರಿಷತ್‌ ಸದಸ್ಯರನ್ನು ಪೋಲೀಸರು ಬಂಧಿಸಿದರು.

ಮುಖ್ಯಮಂತ್ರಿ ನಿವಾಸದ ಮುಂದೆ ಧರಣಿಗಾಗಿ ಶಾಮಿಯಾನ ಹಾಕಲು ತಡೆದ ಪಿಎಸ್‌ಐಗೆ ಬಿಜೆಪಿ ಶಾಸಕರು ಥಳಿಸಿದರು. ಹಸಿವಿನಿಂದ ತತ್ತರಿಸಿದ ಬಿಜೆಪಿ ಶಾಸಕರು ಮೊದಲು ಕಡೆಲೆಕಾಯಿ, ಬಿಸ್ಕತ್‌ ತಿಂದು ಹಸಿವು ನೀಗಿಸಿಕೊಂಡರು. ನಂತರ ಮಧ್ಯಾಹ್ನ ‘ಹಳ್ಳಿ ಮನೆ’ಯಿಂದ ಊಟದ ಸರಬರಾಜು ಆಯಿತು. ಧರಣಿಯಲ್ಲಿ ಬಿಜೆಪಿ ಮುಖಂಡರಾದ ಬಿ.ಎಸ್‌.ಯಡಿಯೂರಪ್ಪ, ಜಗದೀಶ್‌ ಶೆಟ್ಟರ್‌ ಮತ್ತಿತರರು ಪಾಲ್ಗೊಂಡಿದ್ದರು.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+