ಮೈಸೂರ ಚಾಮುಂಡಿ ಸನ್ನಿಧಿಯಲ್ಲಿ ಜಯಲಲಿತಾ ಶ್ರವಣಚೌತಿ ಪೂಜೆ
ಮೈಸೂರ ಚಾಮುಂಡಿ ಸನ್ನಿಧಿಯಲ್ಲಿ ಜಯಲಲಿತಾ ಶ್ರವಣಚೌತಿ ಪೂಜೆ
ಚಾಮುಂಡೇಶ್ವರಿ ದೇವಿಗೆ ಜೋಡಿ ಬೆಳ್ಳಿದೀಪದ ಕಾಣಿಕೆ
ಹೆಲಿಕಾಪ್ಟರ್ನಲ್ಲಿ ಚೆನ್ನೈನಿಂದ ಆಗಮಿಸಿದ ಅವರು, ಲಲಿತಮಹಲ್ ಹೆಲಿಪ್ಯಾಡ್ನಲ್ಲಿ ಇಳಿದರು. ಅಲ್ಲಿಂದ ಭಾರಿ ಭದ್ರತೆಯಾಂದಿಗೆ ಕಾರಿನಲ್ಲಿ ಬೆಟ್ಟಕ್ಕೆ ಆಗಮಿಸಿದರು. ಜಯಲಲಿತಾ ಅವರಿಗೆ ಜಿಲ್ಲಾಧಿಕಾರಿ ಜಿ.ಕುಮಾರ್ನಾಯ್ಕ ಹಾಗೂ ದೇವಾಲಯದ ಪ್ರಧಾನ ಅರ್ಚಕ ನಾಗೇಂದ್ರ ದೀಕ್ಷಿತ್ ನೇತೃತ್ವದಲ್ಲಿ ಪೂರ್ಣಕುಂಭ ಸ್ವಾಗತ ನೀಡಲಾಯಿತು. ನಂತರ ಸಂಜೆ 3.45ರಿಂದ 4.10ರವರೆಗೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಶ್ರವಣ ಚೌತಿ ಪೂಜಾ ಕಾರ್ಯದಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಜಯಲಲಿತಾ ಸುದ್ದಿಗಾರರ ಪ್ರಶ್ನೆಗಳಿಂದ ದೂರ ಉಳಿದರು. ಇದೊಂದು ಖಾಸಗಿ ಭೇಟಿಯಾಗಿದ್ದು, ಇತರ ವಿಚಾರಗಳ ಚರ್ಚಿಸಲು ಸೂಕ್ತ ಜಾಗವಲ್ಲ ಎಂದು ಜಯಲಲಿತಾ ಅಭಿಪ್ರಾಯಪಟ್ಟರು.
ಬುಧವಾರ ಮಧ್ಯಾಹ್ನದಿಂದ ಬೆಟ್ಟದ ಮೇಲೆ ನಿಷೇಧಾಜ್ಞೆ ವಿಧಿಸಿದಂತಹ ವಾತಾವರಣ ಇತ್ತು. ಯಾವುದೇ ಯಾತ್ರಿಕರನ್ನು, ಹಾಗೂ ವಾಹನಗಳನ್ನು ಬೆಟ್ಟದ ಮೇಲೆ ಬಿಡಲಿಲ್ಲ. ಜಯಲಲಿತಾಗೆ ಭಾರೀ ರಕ್ಷಣೆ ನೀಡಲಾಗಿತ್ತು. ಅವರ ಕಾರಿನ ಹಿಂದೆ ಮುಂದೆ ಸುಮಾರು 30ಕ್ಕೂ ಅಧಿಕ ಪೋಲೀಸ್ ವಾಹನಗಳು ಸಾಗಿದ್ದು, ಮೆರವಣೆಗೆಯಂತೆ ಕಂಡು ಬಂತು.
ಕಾಣಿಕೆ: ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ, ಮೈಸೂರಿನ ಶಕ್ತಿದೇವತೆಯ ಮೇಲೆ ವಿಶ್ವಾಸ ಹೊಂದಿದ್ದಾರೆ. ಪೂಜೆಯ ಬಳಿಕ ಚಾಮುಂಡೇಶ್ವರಿ ದೇವಾಲಯಕ್ಕೆ ದೊಡ್ಡ ಗಾತ್ರದ ಜೋಡಿ ಬೆಳ್ಳಿದೀಪಗಳನ್ನು ಕೊಡುಗೆಯಾಗಿ ನೀಡಿದರು.
ಕಳೆದ ವರ್ಷ ಮಾಘಮಾಸದಲ್ಲಿ ಅವರು ಆಗಮಿಸಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications