ಅಂಕಣ ಬರಹ, ವರದಿಗಾರಿಕೆ : ಪತ್ರಿಕೋದ್ಯಮದ ತಾಜಾ ಕೈಪಿಡಿಗಳು
ಅಂಕಣ ಬರಹ, ವರದಿಗಾರಿಕೆ : ಪತ್ರಿಕೋದ್ಯಮದ ತಾಜಾ ಕೈಪಿಡಿಗಳು
ರಾಜ್ಯದಲ್ಲಿ 50 ಪತ್ರಕರ್ತರ ಕೊಲೆಗಳಾಗಿವೆ-ಮುಖ್ಯಮಂತ್ರಿಧರ್ಮಸಿಂಗ್
ಅಂಕಣಕಾರ ಎಚ್.ಎಸ್.ಕೃಷ್ಣಸ್ವಾಮಿ ಅಯ್ಯಂಗಾರ್(ಎಚ್ಚೆಸ್ಕೆ) ಅವರ ‘ಅಂಕಣ ಬರಹ’ ಹಾಗೂ ಪ್ರಜಾವಾಣಿ ಮುಖ್ಯ ವರದಿಗಾರ ಪದ್ಮರಾಜ್ ದಂಡಾವತಿ ಅವರ ‘ರಿಪೋರ್ಟಿಂಗ್’ ಎನ್ನುವ ಕನ್ನಡ ಪುಸ್ತಕಗಳನ್ನು, ಕರ್ನಾಟಕ ಮಾಧ್ಯಮ ಅಕಾಡೆಮಿ ಹೊರತಂದಿದೆ.
ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಧರ್ಮಸಿಂಗ್, ಪ್ರಸ್ತುತ ಪತ್ರಕರ್ತರ ಬದುಕು ಆತಂಕದಲ್ಲಿದೆ. ಪತ್ರಕರ್ತರ ಕಲ್ಯಾಣಕ್ಕೆ ಪೂರಕವಾಗುವಂತೆ ಕಾರ್ಯಕ್ರಮ ರೂಪಿಸಲು ಸರಕಾರ ಸಲಹೆ ಪಡೆಯಲು ಸರ್ಕಾರ ಸಮಿತಿ ರಚಿಸಲಿದೆ ಎಂದರು.
ಕಠಿಣ ಸವಾಲುಗಳ ನಡುವೆ ಪತ್ರಕರ್ತರು ಕರ್ತವ್ಯ ನಿರ್ವಹಿಸಬೇಕಾಗಿದೆ. ಜೀವವನ್ನೇ ಪಣವಾಗಿಟ್ಟು ಕೆಲಸ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯದಲ್ಲಿ ಪತ್ರಕರ್ತರ 50 ಕೊಲೆಗಳಾಗಿವೆ. ಇಂತಹ ಅಕಾಲಿಕ ಸಾವಿಗೆ ತುತ್ತಾದ ಕಾರ್ಯನಿರತ ಪತ್ರಕರ್ತರ ಕುಟುಂಬಕ್ಕೆ ಸರಕಾರ ನೆರವು ನೀಡಲಿದೆ. ಮಾಧ್ಯಮ ಅಕಾಡೆಮಿಗೆ ಪುಸ್ತಕಗಳ ಪ್ರಕಟಣೆಗಾಗಿ 5 ಲಕ್ಷ ರೂ.ಗಳನ್ನು ಬಿಡುಗಡೆ ಮಾಡುವುದಾಗಿ ಧರ್ಮಸಿಂಗ್ ಹೇಳಿದರು.
ವಿಧಾನ ಪರಿಷತ್ ಸಭಾಪತಿ ವಿ.ಆರ್.ಸುದರ್ಶನ್ ಮಾತನಾಡಿ, ಮುದ್ರಣ ಮಾಧ್ಯಮದಲ್ಲಿ ವಿದೇಶಿ ಹೂಡಿಕೆ ಹರಿದು ಬರಲಿದೆ. ಈ ಪರಿಣಾಮ ಅತ್ಯಂತ ಸ್ಪರ್ಧಾತ್ಮಕ ವಾತಾವಾರಣ ಸೃಷ್ಟಿಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಮಾಧ್ಯಮ ಅಕಾಡೆಮಿ ಅಧ್ಯಕ್ಷ ಹಾಗೂ ಸೂರ್ಯೋದಯ ಪತ್ರಿಕೆಯ ಸಂಪಾದಕ ಅರ್ಜುನದೇವ್, ವಾರ್ತಾ ಇಲಾಖೆ ಆಯುಕ್ತ ಸಿ.ಚಂದ್ರಶೇಖರ್ ಮತ್ತಿತರರು ಹಾಜರಿದ್ದರು.
ಕೊಸರು: ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಪತ್ರಕರ್ತರ ಕಾರ್ಯವೈಖರಿ ಬಗೆಗೆ ಇತ್ತೀಚಿಗಷ್ಟೇ ಕೆಂಡಕಾರಿದ್ದ ಮುಖ್ಯಮಂತ್ರಿಗಳಿಗೆ ಈಗ ಪ್ರೀತಿ ಬಂದಿದೆ. ಏಕೆಂದರೆ ಸಂಪುಟ ವಿಸ್ತರಣೆ ಮುಗಿದಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications