ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯ ಸರ್ಕಾರ ಹಸಿರುಬಾವುಟ
ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯ ಸರ್ಕಾರ ಹಸಿರುಬಾವುಟ
ನೂತನ ಸಂಪುಟದ ಮೊದಲ ಸಭೆಯಲ್ಲಿ ಮಹತ್ವದ ನಿರ್ಣಯ, ಫೆಬ್ರವರಿಯಲ್ಲಿ ಕಾಮಗಾರಿ ಶುರು
ನಗರದ ಹೊರವಲಯದ ದೇವನಹಳ್ಳಿ ಬಳಿ ನಿರ್ಮಿಸಲು ಉದ್ದೇಶಿಸಲಾಗಿರುವ ಈ ಯೋಜನೆ ವಿವಾದಕ್ಕೆ ಸಿಲುಕಿ ದಶಕಗಳಿಂದ ನೆನೆಗುದಿಗೆ ಬಿದ್ದಿತ್ತು. ಮಂಗಳವಾರ ನಡೆದ ಸಂಪುಟ ಸಭೆಯ ನಂತರ ಮಾತನಾಡಿದ ಮುಖ್ಯಮಂತ್ರಿ ಎನ್.ಧರ್ಮಸಿಂಗ್, ಯೋಜನೆಗೆ ಸಂಪುಟ ಸಮ್ಮತಿಸಿದ್ದು ಫೆಬ್ರವರಿ ತಿಂಗಳಲ್ಲಿ ಕಾಮಗಾರಿ ಆರಂಭಗೊಳ್ಳಲಿದೆ ಎಂದರು.
ಯೋಜನೆಯ ವಿವರ ನೀಡಿದ ಸಚಿವ ಪಿ.ಜಿ.ಆರ್.ಸಿಂಧ್ಯ, ಯೋಜನೆಯ ವ್ಯಾಪ್ತಿಯನ್ನು ಸರಕಾರ ಸುಮಾರು 400 ಎಕರೆ ಕಡಿಮೆ ಮಾಡಿದೆ. ಅಂದರೆ 4450 ಎಕರೆಯಿಂದ 4050 ಎಕರೆಗೆ ಕುಗ್ಗಿದೆ. ಯೋಜನೆಯ ವೆಚ್ಚ 1334 ಕೋಟಿ ರೂ.ಗಳಾಗಿದ್ದು, ರಾಜ್ಯ 350 ಕೋಟಿ ರೂ.ಗಳನ್ನು ಬಡ್ಡಿರಹಿತ ಸಾಲವಾಗಿ ನೀಡಲಿದೆ. ಅದರ ಮರುಪಾವತಿಗೆ ಹತ್ತು ವರ್ಷಗಳ ಕಾಲಾವಕಾಶ ನೀಡಲಾಗಿದೆ ಎಂದರು.
ಕೆಎಸ್ಐಐಡಿಸಿನೊಂದಿಗೆ ಭೂಮಿ ಗುತ್ತಿಗೆ ಒಪ್ಪಂದಕ್ಕೆ ಸರಕಾರ ಸಹಿ ಹಾಕಿ, 400 ಎಕರೆ ಭೂಮಿಯನ್ನು ವಶಕ್ಕೆ ತೆಗೆದುಕೊಳ್ಳಲಿದೆ. ಯೋಜನೆ ಫೆಬ್ರವರಿಯಲ್ಲಿ ಆರಂಭವಾಗಲಿದೆ. ಯೋಜನೆಯ ಚೆಂಡು ಐಏಎಎಲ್ ಅಂಗಳದಲ್ಲಿದೆ ಎಂದು ಸಿಂಧ್ಯ ತಿಳಿಸಿದರು.
ಡಿ.11 ರಂದು ನಡೆದ ಸಭೆಯಲ್ಲಿ ಯೋಜನೆಗೆ ಅನುಮೋದನೆ ಪಡೆಯಲಾಗಿತ್ತು. ಯೋಜನೆ ಬಗೆಗಿನ ಗೊಂದಲಗಳು ಹಾಗೂ ಸಂದೇಹಗಳಿಗೆ ಈ ಸಭೆಯಲ್ಲಿ ಪರಿಹಾರ ಸಿಕ್ಕಿದೆ. ವಾದ ವಿವಾದಗಳ ಸುಳಿಯಲ್ಲಿ ಅಭಿವೃದ್ಧಿ ವೆಚ್ಚ 15 ಕೋಟಿಯಿಂದ 63.6 ಕೋಟಿಗೆ ಹೆಚ್ಚಳವಾಗಿದೆ. ಕಾನೂನು ಸಲಹೆ ಶುಲ್ಕ ಸಹ, 7 ರಿಂದ 17 ಕೋಟಿಗೆ ಏರಿಕೆಯಾಗಿದೆ. ಯೋಜನೆಯ ಮೂಲ ವೆಚ್ಚ 2001ರಲ್ಲಿ 1150 ಕೋಟಿಯಾಗಿತ್ತು. ಅದು 2003 ರಲ್ಲಿ 1334 ಕೋಟಿಗೆ ಹೆಚ್ಚಳವಾಗಿದೆ.
(ಪಿಟಿಐ)
ಮುಖಪುಟ / ಧರ್ಮ-ಕಾರಣ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications