ತಾಕತ್ತಿದ್ದರೆ ಜೆಡಿಎಸ್ ಒಡೆಯಲಿ ; ಡಿ.ಕೆ.ಶಿ.ಗೆ ಕುಮಾರಸ್ವಾಮಿ ಸವಾಲು
ತಾಕತ್ತಿದ್ದರೆ ಜೆಡಿಎಸ್ ಒಡೆಯಲಿ ; ಡಿ.ಕೆ.ಶಿ.ಗೆ ಕುಮಾರಸ್ವಾಮಿ ಸವಾಲು
ಆತ(ಡಿಕೆಶಿ)ರಾಜ್ಯವನ್ನು ಲೂಟಿ ಮಾಡುವುದರಲ್ಲಿ ವೀರಪ್ಪನ್ನನ್ನು ಸಹ ಮೀರಿಸಿದ್ದಾನೆ - ಕುಮಾರ ಸ್ವಾಮಿ ಆರೋಪ
ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಅಕ್ರಮ ಗಣಿಗಾರಿಕೆಯ ಮೂಲಕ ರಾಜ್ಯದ ಖನಿಜ ಸಂಪತ್ತನ್ನು ಲೂಟಿ ಮಾಡಿದ ಆತ (ಡಿಕೆಶಿ), ಲೂಟಿಯಲ್ಲಿ ವೀರಪ್ಪನ್ನನ್ನು ಮೀರಿಸಿದ್ದಾನೆ. ಆತ ಎಸ್.ಎಂ.ಕೃಷ್ಣರನ್ನು ಬ್ಲಾಕ್ಮೆಲ್ ಮೂಲಕ ನಿಯಂತ್ರಿಸುತ್ತಿದ್ದ ಎಂದು ಆರೋಪಿಸಿದರು.
ನಾನು ಜೆಡಿಎಸ್ ಪಕ್ಷವನ್ನು ಹೈಜಾಕ್ ಮಾಡಿ ಬ್ಲಾಕ್ಮೇಲ್ ರಾಜಕಾರಣ ಮಾಡುತ್ತಿರುವುದಾಗಿ ದೂರಲಾಗಿದೆ. ಅಂತಹ ಸಂಸ್ಕೃತಿ ನಮ್ಮದಲ್ಲ. ಅದನ್ನು ಸಾಬೀತು ಪಡಿಸಿದರೆ ರಾಜಕಾರಣಕ್ಕೆ ವಿದಾಯ ಹೇಳುತ್ತೇನೆ. ರಾಜಕೀಯಕ್ಕೆ ಬರುವ ಮೊದಲು ಆತ(ಡಿಕೆಶಿ) ಯಾವ ಸ್ಥಿತಿಯಲ್ಲಿದ್ದ ಎನ್ನುವುದನ್ನು ಯೋಚಿಸಲಿ. ಆತನ ಅಪಾರ ಆಸ್ತಿಯ ಮೂಲವನ್ನು ಬಹಿರಂಗಪಡಿಸಿ ಆನಂತರ ಪಾರದರ್ಶಕತೆಯ ಬಗೆಗೆ ಮಾತನಾಡಲಿ ಎಂದರು.
ನನಗೆ ಪಕ್ಷ ಕಟ್ಟುವುದಷ್ಟೆ ಮುಖ್ಯ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೂ ನಾನು ಮಂತ್ರಿ ಅಥವಾ ಮುಖ್ಯಮಂತ್ರಿ ಹುದ್ದೆಗೆ ಅಭ್ಯರ್ಥಿಯಲ್ಲ. ಆ ಸ್ಥಾನಕ್ಕೆ ಸಾಕಷ್ಟು ಹಿರಿಯರು, ಅನುಭವಿಗಳು ಪಕ್ಷದಲ್ಲಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.
ಕಾದು ನೋಡಿ: ಸಮ್ಮಿಶ್ರ ಸರಕಾರಕ್ಕಿಂತಲೂ ಕಾಂಗ್ರೆಸ್ ಪಕ್ಷವನ್ನು ಬೆಳೆಸುವುದೇ ಮುಖ್ಯ ಎಂದು ಹೇಳಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್- ಕೆಲವೇ ದಿನಗಳಲ್ಲಿ ರಾಜ್ಯದ ರಾಜಕೀಯ ಚಿತ್ರಣ ಬದಲಾಗಲಿದೆ, ಮುಂದಿನ ಬೆಳವಣಿಗೆಯನ್ನು ಕಾದು ನೋಡಿ ಎನ್ನುವ ಮೂಲಕ ಕುತೂಹಲ ಮೂಡಿಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications