ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಪಿಸಿಸಿ ಅಧ್ಯಕ್ಷತೆಗೆ ನಾವ್‌ ರೆಡಿ -ಎಚ್‌. ವಿಶ್ವನಾಥ್‌, ಶ್ರೀಕಂಠಯ್ಯ.....

By Staff
|
Google Oneindia Kannada News

ಕೆಪಿಸಿಸಿ ಅಧ್ಯಕ್ಷತೆಗೆ ನಾವ್‌ ರೆಡಿ -ಎಚ್‌. ವಿಶ್ವನಾಥ್‌, ಶ್ರೀಕಂಠಯ್ಯ.....
ಪೂಜಾರಿಗೆ ಗೇಟ್‌ಪಾಸ್‌ ಕೊಡಿಸಲು ದೆಹಲಿಯಿಂದ ಗುಂಪುಗಳ ಲಾಬಿ

ಬೆಂಗಳೂರು : ರಾಜ್ಯ ಕಾಂಗ್ರೆಸ್‌ನಲ್ಲಿ ಭಿನ್ನಮತ ತಲೆಎತ್ತಿದೆ. ಪಕ್ಷದ ಅಧ್ಯಕ್ಷ ಜನಾರ್ದನ ಪೂಜಾರಿ ಪದಚ್ಯುತಿಗೆ ತೆರೆಮರೆಯ ಪ್ರಯತ್ನಗಳು ನಡೆಯುತ್ತಿವೆ. ಈ ನಡುವೆ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನ ನೀಡಿದರೆ ಸ್ವೀಕರಿಸಲು ಸಿದ್ಧ ಎಂದು ಮಾಜಿ ಸಚಿವ ಎಚ್‌.ವಿಶ್ವನಾಥ್‌ ಬಹಿರಂಗವಾಗಿ ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಲ್ಲಿ ನಾನು ಸಹ ಒಬ್ಬ. ಈ ಬಗ್ಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಕೋರಿದ್ದೇನೆ. ಹೈಕಮಾಂಡ್‌ ಪಕ್ಷದ ಹೊಣೆ ಒಪ್ಪಿಸಿದರೆ, ಅದನ್ನು ಸಮರ್ಥವಾಗಿ ನಿರ್ವಹಿಸುವುದಾಗಿ ವಿಶ್ವನಾಥ್‌ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಈ ಹಿಂದೆ ಪಕ್ಷದ ಅಧ್ಯಕ್ಷರ ಬಗೆಗೆ ವಿಶ್ವನಾಥ್‌ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ನೋಟೀಸ್‌ ನೀಡಿತ್ತು. ಇಂತಹದೇ ನೋಟಿಸನ್ನು ಮತ್ತೊಬ್ಬ ಮಾಜಿ ಸಚಿವ ಎಚ್‌.ಸಿ.ಶ್ರೀಕಂಠಯ್ಯ ಅವರಿಗೆ ನೀಡಲಾಗಿದೆ. ನೋಟಿಸ್‌ಗೆ ಸೊಪ್ಪು ಹಾಕದೇ ಶ್ರೀಕಂಠಯ್ಯ, ತಮ್ಮ ಬೆಂಬಲಿಗರೊಂದಿಗೆ ಕೆಪಿಸಿಸಿ ಅಧ್ಯಕ್ಷ ಸ್ಢಾನಕ್ಕೆ ಕಸರತ್ತು ನಡೆಸಿದ್ದಾರೆ. ಡಿ.ಬಿ.ಚಂದ್ರೇಗೌಡ ಸಹ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿ ಎಂದು ಹಿಂದೆಯೇ ಗುರ್ತಿಸಿಕೊಂಡಿದ್ದರು.

ನವದೆಹಲಿಯಲ್ಲಿ ಪೂಜಾರಿ ವಿರುದ್ಧ ಪಿತೂರಿ ಆರಂಭಗೊಂಡಿದ್ದು, ಮುಂದಿನ ಬೆಳವಣಿಗೆಗಳನ್ನು ಕಾದು ನೋಡ ಬೇಕು.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X