ಸುನಾಮಿ ದುರಂತದ ನಿರಾಶ್ರಿತರಿಗೆ ‘ಧರ್ಮ’ ಸರ್ಕಾರದಿಂದ 5.5 ಕೋಟಿ
ಸುನಾಮಿ ದುರಂತದ ನಿರಾಶ್ರಿತರಿಗೆ ‘ಧರ್ಮ’ ಸರ್ಕಾರದಿಂದ 5.5 ಕೋಟಿ
ಸಚಿವರಿಂದ ಒಂದು ದಿನದ ವೇತನ, ಮೀನುಗಾರರಿಗೆ ಸೂಚನೆ, ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ
ಸೋಮವಾರ ಮುಖ್ಯಮಂತ್ರಿ ಎನ್.ಧರ್ಮಸಿಂಗ್ ಸುದ್ದಿಗಾರರೊಂದಿಗೆ ಮಾತನಾಡಿ, ತಮಿಳುನಾಡಿಗೆ ಎರಡು ಕೋಟಿ, ಆಂಧ್ರಪ್ರದೇಶ ಮತ್ತು ಅಂಡಮಾನ್-ನಿಕೋಬಾರ್ ದ್ವೀಪಗಳಿಗೆ ತಲಾ ಒಂದು ಕೋಟಿ, ಕೇರಳ, ಪಾಂಡಿಚೇರಿ ಮತ್ತು ಲಕ್ಷದ್ವೀಪಗಳಿಗೆ ತಲಾ 50 ಸಾವಿರ ಪರಿಹಾರ ನೀಡಲಿದೆ ಎಂದರು.
ಕರಾವಳಿ ಜಿಲ್ಲೆಗಳಲ್ಲಿ ಹದಿನಾರು ದೋಣಿಗಳಿಗೆ ಧಕ್ಕೆಯಾಗಿದೆ. ಸೋಮವಾರ ರಾಜ್ಯದ ಎಲ್ಲ ಕರಾವಳಿ ಪ್ರದೇಶಗಳಿಗೆ ಉಪಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಪ್ರಕಾಶ್ ಮತ್ತು ಆರ್.ವಿ.ದೇಶಪಾಂಡೆ ತಂಡ ಭೇಟಿ ನೀಡಿ, ಪರಿಸ್ಥಿತಿಯನ್ನು ಪರಿಶೀಲಿಸಿದೆ. ಸಂಪುಟದ ಸಚಿವರು ಒಂದು ತಿಂಗಳ ವೇತನವನ್ನು ಕೊಡುಗೆಯಾಗಿ ನೀಡಿದ್ದಾರೆ. ಪರಿಹಾರ ನಿಧಿಗೆ ಒಂದು ದಿನದ ವೇತನವನ್ನು ನೀಡುವಂತೆ ಸರಕಾರಿ ನೌಕರರ ಮನವೊಲಿಸಲಾಗುವುದು ಎಂದು ಧರ್ಮಸಿಂಗ್ ಹೇಳಿದರು.
ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಸುನಾಮಿ ಅಟ್ಟಹಾಸಕ್ಕೆ ಸಿಲುಕಿದ ರಾಜ್ಯಗಳಿಗೆ ಸರಕಾರ ಎಲ್ಲ ರೀತಿಯ ನೆರವನ್ನು ನೀಡಲಿದೆ. ಮುಖ್ಯ ಕಾರ್ಯದರ್ಶಿ ಕೆ.ಎಂ.ಮಿಶ್ರ ಸಂಬಂಧಿಸಿದ ರಾಜ್ಯಗಳ ಜೊತೆ ನೇರ ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿದರು.
ಕಂದಾಯ ಸಚಿವ ಎಂ.ಪಿ.ಪ್ರಕಾಶ್, ರಾಜ್ಯದ ಐದು ವೈದ್ಯಕೀಯ ತಂಡಗಳು ನೆರೆಪೀಡಿತ ಪ್ರದೇಶಕ್ಕೆ ಭೇಟಿ ನೀಡಿವೆ. ಸೇವೆಗೆ ಮುಂದಾಗಿವೆ. ಕರ್ನಾಟಕ ಸರಕಾರ ಒಂದು ಲಕ್ಷ ರೂಗಳನ್ನು ದುರಂತದಲ್ಲಿ ಸಾವನ್ನಪ್ಪಿದ ಕನ್ನಡಿಗರ ಕುಟುಂಬಗಳಿಗೆ ನೆರವು ನೀಡಲು ಉದ್ದೇಶಿಸಿದೆ. ಸರಕಾರದ ಪ್ರಕಾರ ಇಬ್ಬರು ಮೃತಪಟ್ಟಿದ್ದಾರೆ ಎಂದರು.
ನೆರವು : ಸುದ್ದಿಗಾರರೊಂದಿಗೆ ಮಾತನಾಡಿದ ಮಹಾರಾಷ್ಟ್ರ ರಾಜ್ಯಪಾಲ ಎಸ್.ಎಂ.ಕೃಷ್ಣ, ಸುನಾಮಿ ಆರ್ಭಟವನ್ನು ರಾಷ್ಟ್ಟ್ರಿಯ ದುರಂತ ಎಂದು ಬಣ್ಣಿಸಿದರು. ಈ ಸಂದರ್ಭದಲ್ಲಿ ಪರಿಹಾರ ನಿಧಿಗೆ ಒಂದು ತಿಂಗಳ ವೇತನ ನೀಡುವುದಾಗಿ ಅವರು ಘೋಷಿಸಿದರು.
ಸ್ಥಳಾಂತರ : ಉಡುಪಿ ಮತ್ತು ಕುಂದಾಪುರ ತಾಲೂಕಿನಲ್ಲಿ ರಾಕ್ಷಸ ಕಡಲ ಅಲೆಯ ಪರಿಣಾಮ ಎಂಟು ದೋಣಿಗಳು ಮುರಿದಿವೆ. ಅಪಾರ ಸಂಖ್ಯೆಯ ತೆಂಗು, ತಾಳೆ ಮತ್ತಿತರ ಮರಗಳು ನೆಲಕ್ಕುರುಳಿವೆ ಎಂದು ಉಡುಪಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಮುಂಜಾಗ್ರತೆ ಕ್ರಮವಾಗಿ ಉಡುಪಿಯ 5000 ಜನ ಮತ್ತು ಕುಂದಾಪುರ ತಾಲೂಕಿನ 2000 ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ. ಈ ನಿಟ್ಟಿನಲ್ಲಿ ಸ್ಥಳೀಯ ಶಾಲೆ ಮತು ವಿವಿಧ ಕಟ್ಟಡಗಳ ಬಳಸಿಕೊಳ್ಳಲಾಗಿದೆ. ಎರಡು ದಿನಗಳ ಕಾಲ ಸಮುದ್ರದತ್ತ ಹೋಗದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
(ಪಿಟಿಐ)
ಮುಖಪುಟ / ಧರ್ಮ-ಕಾರಣ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications