ಸುನಾಮಿ-ಭಾರತದ 7,400 ಮಂದಿ ಸೇರಿದಂತೆ 25,000 ಮಂದಿ ಸಾವು
ಸುನಾಮಿ-ಭಾರತದ 7,400 ಮಂದಿ ಸೇರಿದಂತೆ 25,000 ಮಂದಿ ಸಾವು
ಅಮೇರಿಕಾದಿಂದ ಹದಿನೈದು ದಶಲಕ್ಷ ಡಾಲರ್ ನೆರವು, ಸಂತ್ರಸ್ಥ ಸ್ಥಳಗಳಿಗೆ ಆಡ್ವಾಣಿ, ಸೋನಿಯಾ ಭೇಟಿ
ತಮಿಳುನಾಡಿನಲ್ಲಿ 4,500, ಅಂಡಮಾನ್ನಲ್ಲಿ 3000, ಶ್ರೀಲಂಕಾದಲ್ಲಿ 12, 000 ಮಂದಿ ಬಲಿಯಾಗಿದ್ದು, ಸಾಮೂಹಿಕ ಸಂಸ್ಕಾರ ಕಾರ್ಯ ನಡೆಯುತ್ತಿದೆ. ವೇಲಾಂಕಣ್ಣಿನಲ್ಲಿ 500 ಶವಗಳು ಸಿಕ್ಕಿವೆ. ಕಾಣೆಯಾದವರನ್ನು ಹೆಲಿಕಾಪ್ಟರ್ ಮೂಲಕ ಹುಡುಕಲಾಗುತ್ತಿದೆ.
ಸಂತ್ರಸ್ಥರಿಗಾಗಿ ಬಿಹಾರ್ ಮುಖ್ಯಮಂತ್ರಿ ರಾಬ್ರಿದೇವಿ ಹತ್ತು ಕೋಟಿ ರೂ.ಗಳ ನೆರವನ್ನು ಮಂಗಳವಾರ ಪ್ರಕಟಿಸಿದ್ದಾರೆ. ಬಿಹಾರ್ ಸರಕಾರ ಪ್ರಧಾನಿಗಳ ಸಂತ್ರಸ್ಥರ ಪರಿಹಾರ ನಿಧಿಗೆ ಹಣವನ್ನು ನೀಡಲಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.
ಕೇಂದ್ರರೈಲ್ವೆ ಸಚಿವ ಲಾಲೂಪ್ರಸಾದ್ ಯಾಧವ್, ರೈಲ್ವೆ ಪರಿಹಾರ ನಿಧಿಯಿಂದ ಸಂತ್ರಸ್ಥರಿಗಾಗಿ 30ಲಕ್ಷರೂಗಳ ನೆರವನ್ನು ಘೋಷಿಸಿದ್ದಾರೆ.
ಭೇಟಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ, ರಕ್ಷಣಾ ಸಚಿವ ಪ್ರಣಬ್ ಮುಖರ್ಜಿರೊಂದಿಗೆ ಚೆನ್ನೈ ಮತ್ತು ನಾಗಪಟ್ಟನಂಗೆ ಭೇಟಿ ನೀಡಿ ಪರಿಸ್ಥಿತಿ ವೀಕ್ಷಿಸಿದರು.
ಬಿಜೆಪಿ ಅಧ್ಯಕ್ಷ ಎಲ್.ಕೆ.ಆಡ್ವಾಣಿ ಮಂಗಳವಾರ, ತಮಿಳುನಾಡು ಮತ್ತು ಕೇರಳಕ್ಕೆ ಭೇಟಿ ನೀಡಿ ನೊಂದವರಿಗೆ ಸಾಂತ್ವನ ಹೇಳಿದರು.
ನೆರವು: ಸಂತ್ರಸ್ಥ ಪ್ರದೇಶಗಳಿಗೆ ನೆರವಾಗಲು ಅಮೇರಿಕಾ 15 ದಶಲಕ್ಷ ಡಾಲರ್ ನೆರವನ್ನು ಪ್ರಕಟಿಸಿದ್ದು, ಅದರಲ್ಲಿ 4ದಶಲಕ್ಷ ಡಾಲರ್ ಹಣವನ್ನು ಬಿಡುಗಡೆ ಮಾಡಿದೆ ಎಂದು ಮೂಲಗಳು ತಿಳಿಸಿವೆ.
(ಏಜನ್ಸೀಸ್)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications