ಸರಕಾರಿ ಕಚೇರಿ ಮೇಲೆ ದಾಳಿ ಮಾಡುವುದಿಲ್ಲ - ಉಪ ಲೋಕಾಯುಕ್ತ
ಸರಕಾರಿ ಕಚೇರಿ ಮೇಲೆ ದಾಳಿ ಮಾಡುವುದಿಲ್ಲ - ಉಪ ಲೋಕಾಯುಕ್ತ
ಲೋಕಾಯುಕ್ತ ವೆಂಕಟಾಚಲರ ಅಧಿಕಾರ ಮೊಟಕು, ಧರ್ಮ ಸರಕಾರದ ನೀತಿ
ನಗರದ ರಾಜಭವನದಲ್ಲಿ ಡಿ.29ರ ಬುಧವಾರ ರಾಜ್ಯಪಾಲ ಚತುರ್ವೇದಿಯವರಿಂದ, ಉಪಲೋಕಾಯುಕ್ತರಾಗಿ ಅಧಿಕಾರ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ನಾನು ಪೋಲೀಸ್ ಅಧಿಕಾರಿಯಲ್ಲ. ಹೀಗಾಗಿ ಸರಕಾರಿ ಕಚೇರಿ ಮೇಲೆ ದಾಳಿಯನ್ನು ಕೈಗೊಳ್ಳುವುದಿಲ್ಲ. ನಾನು ಕೇವಲ ಅಧಿಕಾರಿಗಳ ಭ್ರಷ್ಟಚಾರದ ಬಗೆಗೆ ಪರಿವೀಕ್ಷಿಸುತ್ತೇನೆ. ದೂರುಗಳು ಬಂದರೆ ತನಿಖೆ ಕೈಗೊಳ್ಳುತ್ತೇನೆ. ಒಳ್ಳೆಯ ಅಧಿಕಾರಿಗಳನ್ನು ಪ್ರೋತ್ಸಾಹಿಸುತ್ತೇನೆ ಎಂದು ಬಸವನಗೌಡ ಹೇಳಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಎನ್.ಧರ್ಮಸಿಂಗ್ ಮಾತನಾಡಿ, ಲೋಕಾಯುಕ್ತಕ್ಕೆ ಹೆಚ್ಚಿನ ಅಧಿಕಾರ ನೀಡುವ ಪ್ರಸ್ತಾವನೆಯನ್ನು ಮುಂದಿನ ಸಂಪುಟ ಸಭೆಯಲ್ಲಿ ಪರಿಶೀಲಿಸುವುದಾಗಿ ತಿಳಿಸಿದರು.
ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ವಿಧಾನ ಸಭಾಧ್ಯಕ್ಷ ಕೃಷ್ಣ, ಡಾ.ಹೆಚ್.ಸುದರ್ಶನ್, ಲೋಕಾಯುಕ್ತ ನಿರ್ದೇಶಕ ಎಂ.ಡಿ. ಸಿಂಗ್ ಮತ್ತಿತರರು ಹಾಜರಿದ್ದರು.
ಲೋಕಾಯುಕ್ತ ಎನ್. ವೆಂಕಟಾಚಲ ಅವರ ಗೈರು ಹಾಜರಿ ಎದ್ದು ಕಾಣುತ್ತಿದ್ದು. ಅವರು ಸರಕಾರಿ ಕೆಲಸದ ಮೇಲೆ ದೆಹಲಿಗೆ ತೆರಳಿದ್ದರು ಎಂದು ಮೂಲಗಳು ತಿಳಿಸಿವೆ.
ಕೊಸರು: ಸರಕಾರಿ ಕಚೇರಿಗಳ ಮೇಲೆ ದಿಢೀರ್ ದಾಳಿ ಮಾಡಿ, ಅಧಿಕಾರಿಗಳಿಗೆ ಸಿಂಹಸ್ವಪ್ನರಾಗಿದ್ದ ಲೋಕಾಯುಕ್ತ ವೆಂಕಟಾಚಲ ಅವರ ಅಧಿಕಾರ ವ್ಯಾಪ್ತಿ ಕಡಿಮೆಯಾಗಿದೆ. ಈ ನಡುವೆ ಉಪಲೋಕಾಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಬಸವನಗೌಡರ ಹೇಳಿಕೆ(ಸರಕಾರಿ ಕಚೇರಿಗಳ ಮೇಲೆ ದಾಳಿ ನಡೆಸುವುದಿಲ್ಲ...) ಅಧಿಕಾರಿಗಳ ಮುಖದಲ್ಲಿ ಮಂದಹಾಸ ಮೂಡಿಸಿದೆ!
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications