ಸುನಾಮಿ ಸಂತ್ರಸ್ತರ ಹಸಿವು ನೀಗಿಸಲು ಬೆಂಗಳೂರಿನಲ್ಲಿ ಚಪಾತಿ ಮೇಳ
ಸುನಾಮಿ ಸಂತ್ರಸ್ತರ ಹಸಿವು ನೀಗಿಸಲು ಬೆಂಗಳೂರಿನಲ್ಲಿ ಚಪಾತಿ ಮೇಳ
ಅಂಜ ಬೇಡಿ, ನಿಮ್ಮೊಂದಿಗೆ ನಾವಿದ್ದೇವೆ; ಸಾರ್ವಜನಿಕರ ಸ್ಪಂದನ-1.25 ಲಕ್ಷ ಚಪಾತಿಗಳು
ಸಂತ್ರಸ್ತರ ಹಸಿವು ನೀಗಿಸಲು ನಗರದಲ್ಲಿ ಚಪಾತಿ ಮೇಳ ಆರಂಭಗೊಂಡಿದೆ. ಆದಿಜಗದ್ಗುರು ಶ್ರೀಶಿವರಾತ್ರೇಶ್ವರ ಭಗವತ ಮಹೋತ್ಸವ ಸಮಿತಿ 1.5 ಲಕ್ಷ ಚಪಾತಿಗಳನ್ನು ಸುನಾಮಿ ಪೀಡಿತ ಪ್ರದೇಶಗಳ ಸಂತ್ರಸ್ತರಿಗೆ ತಲುಪಿಸಲು ಸಜ್ಜಾಗಿದೆ.
ನಗರದ ರಾಧಾ ವೇಣುಗೋಪಾಲ್ ಎನ್ನುವ ಮಹಿಳೆ, ತಮ್ಮ ನೆರೆಹೊರೆ ಹಾಗೂ ಕಾಲೇಜು ವಿದ್ಯಾರ್ಥಿನಿಯರ ಸಹಕಾರದಿಂದ 5000 ಚಪಾತಿಗಳನ್ನು ತಯಾರಿಸಿದ್ದಾರೆ. ಅವುಗಳನ್ನು ಸಕ್ಕರೆ ಮತ್ತು ಉಪ್ಪಿನಕಾಯಿಯಾಂದಿಗೆ ಚೆನ್ನೈಗೆ ಬಸ್ ಮೂಲಕ ತಲುಪಿಸಿದ್ದಾರೆ.
ಕಿತ್ತೂರು ರಾಣಿ ಚೆನ್ನಮ್ಮ ಕ್ಷೇಮಾಭಿವೃದ್ಧಿ ಸಂಘದ 500 ಮಹಿಳೆಯರು, 25,000 ಚಪಾತಿಗಳನ್ನು ತಯಾರಿಸಿದ್ದಾರೆ. ಬೆಳಿಗ್ಗೆ 8.30ರಿಂದ ರಾತ್ರಿ 8 ಗಂಟೆಯ ತನಕ ನಿರಂತರವಾಗಿ ಉತ್ಸಾಹದಿಂದ ಸಂಘ ಶ್ರಮಿಸಿದೆ. ಅಲ್ಲದೇ ಐದೈದು ಚಪಾತಿಗಳನ್ನು ಸಕ್ಕರೆ ಮತ್ತು ಉಪ್ಪಿನಕಾಯಿಯಾಂದಿಗೆ ಪ್ರತ್ಯೇಕವಾಗಿ ಪ್ಯಾಕ್ ಮಾಡಿದೆ.
ಸುನಾಮಿ ಸಂತ್ರಸ್ತರ ಬಗ್ಗೆ ಕೇವಲ ಅನುಕಂಪ ವ್ಯಕ್ತಪಡಿಸುವುದಕ್ಕಿಂತಲೂ, ಅವರ ನೋವಿಗೆ ಸ್ಪಂದಿಸಲು ಪ್ರಜ್ಞಾವಂತ ಸಮಾಜ ಮುಂದಾಗ ಬೇಕಾಗಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications