ಇಡಗುಂಜಿ ಯಕ್ಷಗಾನ ಮೇಳ -70
ಇಡಗುಂಜಿ ಯಕ್ಷಗಾನ ಮೇಳ -70
ಜನವರಿ 2ರಂದು ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮೇಳದಿಂದ 70ರ ಸಂಭ್ರಮದ ಆಚರಣೆ
1934ರಲ್ಲಿ ಕೆರೆಮನೆ ಶಿವರಾಮ ಹೆಗಡೆ ಅವರಿಂದ ಉತ್ತರ ಕನ್ನಡ ಜಿಲ್ಲೆಯ ಕೆರೆಮನೆಯಲ್ಲಿ ಯಕ್ಷಗಾನ ಮೇಳ ಆರಂಭವಾಯಿತು. ಪ್ರಸ್ತುತ ಕೆರೆಮನೆ ಶಂಭು ಹೆಗಡೆ ಹಾಗೂ ಕೆರೆಮನೆ ಶಿವಾನಂದ ಹೆಗಡೆ ಮೇಳದ ನೇತೃತ್ವ ವಹಿಸಿದ್ದಾರೆ.
ಮೂರು ತಲೆಮಾರಿನಿಂದ ಯಕ್ಷಗಾನವನ್ನು ಬೆಳೆಸಿಕೊಂಡು ಬಂದ ಶ್ರೀ ಇಡಗುಂಜಿ ಮಹಾ ಗಣಪತಿ ಯಕ್ಷಗಾನ ಮೇಳವು ಐವತ್ತಕ್ಕೂ ಹೆಚ್ಚು ಪ್ರಸಂಗಗಳ ಮೂಲಕ ದೇಶ ವಿದೇಶಗಳಲ್ಲಿ ಒಟ್ಟು ಏಳು ಸಾವಿರ ಪ್ರದರ್ಶನವನ್ನು ನೀಡಿದೆ. ಯಕ್ಷಗಾನ ಮೇಳದ ಅಭಿವೃದ್ಧಿಗಾಗಿ ಕೆರೆಮನೆ ಕುಟುಂಬ ತನ್ನ ತರ್ವಸ್ವವನ್ನೇ ಧಾರೆ ಎರೆದಿದೆ. ಹಲವಾರು ಯಕ್ಷಗಾನ ಕಲಾವಿದರನ್ನೂ ಸೃಷ್ಟಿಸಿದ ಕೀರ್ತಿ ಈ ಕುಟುಂಬಕ್ಕೆ ಸೇರುತ್ತದೆ.
ಈ ಸಾಧನೆಗೈದ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮೇಳಕ್ಕೆ 70ರ ಸಂಭ್ರಮದಲ್ಲಿ ಇಡೀ ದಿನ ವಿಚಾರ ಸಂಕಿರಣ ಹಾಗೂ ಯಕ್ಷಗಾನ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ವಿಶ್ವವಿದ್ಯಾಲಯ ಕುಲಪತಿ ಡಾ. ಎಂ. ಎಸ್. ತಿಮ್ಮಪ್ಪ ವಿಚಾರ ಸಂಕಿರಣ ಉದ್ಘಾಟಿಸಲಿದ್ದಾರೆ. ಶಿವಮೊಗ್ಗ ಕುವೆಂಪು ವಿಶ್ವವಿದ್ಯಾಲಯ ಕುಲಪತಿ ಡಾ. ಚಿದಾನಂದ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ನೆಬ್ಬೂರು ನಾರಾಯಣ ಭಾಗವತರಿಗೆ ಕೆರೆಮನೆ ಶಿವರಾಮ ಹೆಗಡೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಕಂದಾಯ ಸಚಿವ ಎಂ.ಪಿ.ಪ್ರಕಾಶ್, ಕೆರಮನೆ ಶಂಭು ಹೆಗಡೆ, ವಿಧಾನ ಪರಿಷತ್ ಮಾಜಿ ಸಭಾಪತಿ ಬಿ. ಎಲ್. ಶಂಕರ್, ಹಿರಿಯ ಅಧಿಕಾರಿ ಚಿರಂಜೀವಿ ಸಿಂಗ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಮುದ್ದುಮೋಹನ್, ವಿಜಯ ಕರ್ನಾಟಕ ಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್, ನ್ಯಾಯಮೂರ್ತಿ ಎ.ಜೆ. ಸದಾಶಿವ ಮುಂತಾದವರು ಇಡಗುಂಜಿ ಯಕ್ಷಗಾನ ಮೇಳ -70ರ ಸಂಭ್ರಮದಲ್ಲಿ ಭಾಗವಹಿಸುವರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications