ಒಂದು ಲಕ್ಷ ಮಂದಿ ತಿಂದು ತೇಕಿದ ಸುನಾಮಿ ರಕ್ಕಸ ಮತ್ತೆ ಬರುವನಾ?
ಒಂದು ಲಕ್ಷ ಮಂದಿ ತಿಂದು ತೇಕಿದ ಸುನಾಮಿ ರಕ್ಕಸ ಮತ್ತೆ ಬರುವನಾ?
ಕರ್ನಾಟಕದಲ್ಲಿ ಮತ್ತೆ ಸುನಾಮಿಯ ಭಯವಿಲ್ಲ - ತಜ್ಞರ ಅಭಯ
ಶ್ರೀಲಂಕಾದಲ್ಲಿ 22,799 ಮಂದಿ ಸಾವನ್ನಪ್ಪಿದ್ದು, 5,000ಮಂದಿ ನಾಪತ್ತೆಯಾಗಿದ್ದಾರೆ. ಸುಮಾರು 6ಲಕ್ಷಕ್ಕೂ ಅಧಿಕ ಮಂದಿ ನಿರಾಶ್ರಿತರಾಗಿದ್ದಾರೆ. 93,407 ಮಂದಿ ವಿವಿಧ ಶಾಲೆ, ದೇವಸ್ಥಾನ, ಚರ್ಚ್, ಮತ್ತಿತರ ನಿರಾಶ್ರಿತರ ಕೇಂದ್ರಗಳಲ್ಲಿ ತಂಗಿದ್ದಾರೆ. ಇಂಡೋನೇಷ್ಯದಲ್ಲಿ 45,268, ಭಾರತದಲ್ಲಿ 12ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು ಸಾವಿರಾರು ಜನ ನಾಪತ್ತೆಯಾಗಿದ್ದಾರೆ. ತಮಿಳುನಾಡು ಮತ್ತು ಪಾಂಡಿಚೇರಿಯಲ್ಲಿ ಈವರೆಗೆ 7000ಮಂದಿ ಮೃತಪಟ್ಟಿದ್ದಾರೆ.
ಕೊಳೆತು ನಾರುತ್ತಿರುವ ಶವಗಳನ್ನು ತೆಗೆಯುವ ಕೆಲಸ ಮುಂದುವರೆದಿದೆ. ಸಾಮೂಹಿಕ ಅಂತ್ಯ ಸಂಸ್ಕಾರ ನಡೆಸಲಾಗುತ್ತಿದೆ. ವಿಮಾನದಲ್ಲಿ ಆಹಾರ ಪಟ್ಟಣಗಳನ್ನು ವಿತರಿಸುವ ಕಾರ್ಯ ಪ್ರಗತಿಯಲ್ಲಿದೆ. ಸಮುದ್ರದ ಬಳಿ ಹೋಗದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ.
ಮತ್ತೆ ಸುನಾಮಿ : ಈ ನಡುವೆ ಮುಂದಿನ 48ಗಂಟೆಗಳಲ್ಲಿ ಹಿಂದೂ ಮಹಾಸಾಗರದಿಂದ ಮತ್ತೆ ಸುನಾಮಿ ಅಪ್ಪಳಿಸುವ ಸಾಧ್ಯತೆಗಳು ಕೇಳಿ ಬರುತ್ತಿವೆ. ಕಡಲು ತೀರದ ರಾಜ್ಯಗಳು ಮತ್ತು ದ್ವೀಪಗಳಲ್ಲಿ ಮುಂಜಾಗ್ರತೆ ವಹಿಸುವಂತೆ ಕೇಂದ್ರ ಸರಕಾರ ಎಚ್ಚರಿಸಿದೆ. ಜನವರಿ 1ರವರೆಗೂ ಈ ಮುಂಜಾಗ್ರತಾ ಕ್ರಮಗಳು ಜಾರಿಯಲ್ಲಿರುತ್ತವೆ. ಆಂಧ್ರಪ್ರದೇಶ, ತಮಿಳುನಾಡು, ಪಾಂಡಿಚೇರಿ, ಕೇರಳ, ಲಕ್ಷದೀಪ, ಅಂಡಮಾನ್ ಮತ್ತು ನಿಕೋಬರ್ನ ಮುಖ್ಯ ಕಾರ್ಯದರ್ಶಿಗಳಿಗೆ ಈ ಕುರಿತು ಗೃಹ ಕಚೇರಿ ಸೂಚನೆ ನೀಡಿದೆ.
ತಮಿಳುನಾಡಿನ ನಾಗಪಟ್ಟಣಂ ಮೇಲೆ ಮತ್ತೆ ಅಲೆಗಳು ಅಪ್ಪಳಿಸುವ ಸಾಧ್ಯತೆಗಳಿರುವುದರಿಂದ, ಸ್ಥಳ ಬದಲಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ. ಸುರಕ್ಷಿತ ಸ್ಥಳಗಳನ್ನು ಹುಡುಕಿಕೊಂಡು ಜನರು ಓಡುತ್ತಿದ್ದಾರೆ. ವಿಮಾನ, ಹಡಗು, ರೈಲಿನಲ್ಲಿ ಜನರನ್ನು ಸ್ಥಳಾಂತರಿಸಲಾಗುತ್ತಿದೆ. ಲಗೇಜು ಹಿಡಿದು ಸಿಕ್ಕಸಿಕ್ಕ ವಾಹನಗಳಲ್ಲಿ ಜನ ಪ್ರಯಾಣ ಮಾಡುತ್ತಿದ್ದಾರೆ.
ತುರ್ತುಪರಿಸ್ಥಿತಿ ನಿಬಾಯಿಸಲು ವಾಯುಪಡೆ, ನೌಕಾಪಡೆ, ಭೂಪಡೆಗಳಿಗೆ ಸದಾ ಜಾಗೃತವಾಗಿರುವಂತೆ ಸರಕಾರ ಸೂಚನೆ ನೀಡಿದೆ. ಸ್ಥಳೀಯ ಅಗ್ನಿಶಾಮಕ ದಳ ಮತ್ತು ಪೋಲೀಸರು ನೆರವು ನೀಡಲು ಸಜ್ಜಾಗಿದ್ದಾರೆ.
ಕಂಪನ : ಅಂಡಮಾನ್ ಮತ್ತು ಇಂಡೋನೇಷ್ಯಾದಲ್ಲಿ ಗುರವಾರ ಬೆಳಿಗ್ಗೆಯಿಂದ ಸರಣಿ ಲಘು ಭೂಕಂಪಗಳಾಗುತ್ತಿವೆ. ರಿಕ್ಟರ್ ಸ್ಕೇಲ್ ಪ್ರಕಾರ ಭೂಕಂಪದ ತೀವ್ರತೆ 5ರಷ್ಟಿತ್ತು ಎಂದು ವರದಿಗಳು ತಿಳಿಸಿವೆ. ಆದರೆ ಯಾವುದೇ ದೊಡ್ಡ ತೊಂದರೆ ಸಂಭವಿಸಿಲ್ಲ.
(ಏಜನ್ಸೀಸ್)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications