ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇವಲ ಮೂರು ವರ್ಷದಿ ರಾಜ್ಯದ ರಸ್ತೆಗಳಿಂದ ಹಿತಾನುಭವ -ರೇವಣ್ಣ

By Staff
|
Google Oneindia Kannada News

ಕೇವಲ ಮೂರು ವರ್ಷದಿ ರಾಜ್ಯದ ರಸ್ತೆಗಳಿಂದ ಹಿತಾನುಭವ -ರೇವಣ್ಣ
2020 ಕೋಟಿ ವೆಚ್ಚದಲ್ಲಿ 2.200 ಕಿ.ಮೀ ರಸ್ತೆ ನಿರ್ಮಾಣ, 2006ರ ಡಿಸೆಂಬರ್‌ ವೇಳೆಗೆ ಮೊದಲ ಹಂತ ಪೂರ್ಣ

ಬೆಂಗಳೂರು: ಸುಮಾರು 200 ಕೋಟಿ ವೆಚ್ಚದಲ್ಲಿ ರಸ್ತೆ ಸಂಚಾರ ಸುಗಮಗೊಳಿಸಲು, ರಾಜ್ಯದಲ್ಲಿ ಹೊಸ ಸೇತುವೆಗಳನ್ನು ನಿರ್ಮಾಣ ಮಾಡಲಾಗುವುದು. ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ಕೈಗೆತ್ತಿಕೊಂಡಿರುವ ರಸ್ತೆ ಅಭಿವೃದ್ಧಿ ಯೋಜನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಲೋಕೋಪಯೋಗಿ ಮತ್ತು ಇಂಧನ ಸಚಿವ ಎಚ್‌.ಡಿ.ರೇವಣ್ಣ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಮೂರು ವರ್ಷಗಳಲ್ಲಿ ಹೊಸ ಸೇತುವೆಗಳನ್ನು ನಿರ್ಮಿಸುವು ಗುರಿ ಹೊಂದಲಾಗಿದೆ. ಅಲ್ಲದೇ ನಬಾರ್ಡ್‌ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ 275ಕೋಟಿಗಳನ್ನು ಬಿಡುಗಡೆ ಮಾಡಿದೆ. ಗ್ರಾಮೀಣ ಪ್ರದೇಶಗಳ ಮಣ್ಣಿನ ರಸ್ತೆಗಳನ್ನು ಡಾಂಬರು ರಸ್ತೆಯನ್ನಾಗಿ ಪರಿವರ್ತಿಸಲಾಗುವುದು ಎಂದರು.

ರಾಜ್ಯದ ಕೆಲವೆಡೆ ತಾಲೂಕು ಕೇಂದ್ರಗಳಿಗೆ ಪ್ರಮುಖ ಸಂಪರ್ಕ ರಸ್ತೆಗಳಿಲ್ಲ. ಈ ನಿಟ್ಟಿನಲ್ಲಿ ವಿಶ್ವಬ್ಯಾಂಕ್‌ ನೆರವಿನೊಂದಿಗೆ, ರಾಜ್ಯದ ಎಲ್ಲ ತಾಲೂಕು ಕೇಂದ್ರಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ನಿರ್ಮಿಸಲಾಗುವುದು. ಯೋಜನೆಯ ಮೊದಲ ಹಂತ 2006ರ ಡಿಸೆಂಬರ್‌ ವೇಳೆಗೆ ಪೂರ್ಣಗೊಳ್ಳಲಿದೆ. 2020ಕೋಟಿ ವೆಚ್ಚದಲ್ಲಿ 2,200 ಕಿ.ಮೀ ರಸ್ತೆ ಅಭಿವೃದ್ಧಿ ಪಡಿಸಲಾಗುವುದು ಎಂದು ಎಚ್‌.ಡಿ.ರೇವಣ್ಣ ತಿಳಿಸಿದರು.

(ಪಿಟಿಐ)

ಮುಖಪುಟ / ಧರ್ಮ-ಕಾರಣ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X