ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಡಿಯೂರಪ್ಪ ಪದಚ್ಯುತಿಗೆ 23ಶಾಸಕರ ಸಹಿ ಸಂಗ್ರಹಣೆ

By Staff
|
Google Oneindia Kannada News

ಯಡಿಯೂರಪ್ಪ ಪದಚ್ಯುತಿಗೆ 23ಶಾಸಕರ ಸಹಿ ಸಂಗ್ರಹಣೆ
ಬೆಂಗಳೂರಿಗೆ ಆಗಮಿಸುತ್ತಿರುವ ಅನಂತಕುಮಾರ್‌ ನಡೆ ಕುತೂಹಲ ಹುಟ್ಟಿಸಿದೆ

ಬೆಂಗಳೂರು : ಅನಂತಕುಮಾರ್‌ ಮತ್ತು ಬಿ.ಎಸ್‌.ಯಡಿಯೂರಪ್ಪ ನಡುವಿನ ಭಿನ್ನಮತ ಹಾಗೂ ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಸಂಘರ್ಷ ಈಗ ತಾರಕ್ಕೇರಿದೆ.

ತಮ್ಮ ಅಳಲನ್ನು ವ್ಯಕ್ತಪಡಿಸಿ ರಾಷ್ಟ್ರೀಯ ಅಧ್ಯಕ್ಷ ಎಲ್‌.ಕೆ. ಆಡ್ವಾಣಿ ಅವರಿಗೆ ಯಡಿಯೂರಪ್ಪ ಪತ್ರ ಬರೆದ ಬೆನ್ನಲ್ಲಿಯೇ, ಅವರನ್ನು ವಿಧಾನಸಭೆಯ ಪ್ರತಿಪಕ್ಷದ ನಾಯಕ ಸ್ಥಾನದಿಂದ ಪದಚ್ಯುತಿಗೊಳಿಸುವ ಪ್ರಯತ್ನಗಳು ನಡೆದಿವೆ.

ಯಡಿಯೂರಪ್ಪ ವಿರುದ್ಧ 23ಬಿಜೆಪಿ ಶಾಸಕರ ಸಹಿ ಸಂಗ್ರಹಿಸಿದ್ದು, ಅವರನ್ನು ಪದಚ್ಯುತಿಗೊಳಿಸಬೇಕೆಂಬ ಒತ್ತಾಯ ಕೇಳಿ ಬಂದಿದೆ. ಈ ವಿಚಾರದಲ್ಲಿ ನನ್ನದೇನೂ ಕೈವಾಡವಿಲ್ಲ, ನಾನು ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದೇನೆ ಎಂದು ಸಂಸದ ಬಸವನಗೌಡ ಯತ್ನಾಳ್‌ ತಿಳಿಸಿದ್ದಾರೆ.

ಮಂಗಳವಾರ ನಡೆದ ಮಹತ್ವದ ಸಭೆಯಲ್ಲಿ ಯಡಿಯೂರಪ್ಪನವರನ್ನು ಬೆಂಬಲಿಸಿ 57ನಾಯಕರ ಸಹಿ ಸಂಗ್ರಹಿಸಲಾಗಿದೆ. ಈ ನಡುವೆ ಬೆಂಗಳೂರಿಗೆ ಆಗಮಿಸುತ್ತಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಂತ್‌ಕುಮಾರ್‌ ಬಿಕ್ಕಟ್ಟನ್ನು ಶಮನಗೊಳಿಸುವರೋ, ಇಲ್ಲ ಹೆಚ್ಚಿಸುವರೋ ಕಾದು ನೋಡಬೇಕು.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X