ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಗೆ ಸರ್ವಪಕ್ಷಗಳ ನಿಯೋಗ-ಧರ್ಮಸಿಂಗ್‌

By Staff
|
Google Oneindia Kannada News

ದೆಹಲಿಗೆ ಸರ್ವಪಕ್ಷಗಳ ನಿಯೋಗ-ಧರ್ಮಸಿಂಗ್‌
ರಾಜ್ಯದ ರೈಲ್ವೇ ಯೋಜನೆಗಳಿಗೆ ಕೇಂದ್ರದ ನಿರ್ಲಕ್ಷ್ಯ : ಪ್ರತಿಪಕ್ಷಗಳ ಆರೋಪ

ನವದೆಹಲಿ : ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೇ ಯೋಜನೆಗಳಿಗೆ ಚಾಲನೆ ನೀಡಲು, ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕರೆದೊಯ್ಯುವುದಾಗಿ ಮುಖ್ಯಮಂತ್ರಿ ಎನ್‌.ಧರ್ಮಸಿಂಗ್‌ ತಿಳಿಸಿದ್ದಾರೆ.

ಶುಕ್ರವಾರ ವಿಧಾನಸಭೆಯಲ್ಲಿ ಈ ವಿಚಾರ ತಿಳಿಸಿದ ಅವರು, ಕೇಂದ್ರ ರೈಲ್ವೇ ಸಚಿವ ಲಾಲೂಪ್ರಸಾದ್‌ಯಾದವ್‌ ಅವರನ್ನು ಸರ್ವಪಕ್ಷ ನಿಯೋಗದೊಂದಿಗೆ ಭೇಟಿಯಾಗುವ ಕಾರ್ಯಕ್ರಮವನ್ನು ಸದ್ಯದಲ್ಲಿಯೇ ರೂಪಿಸುವುದಾಗಿ ಭರವಸೆ ನೀಡಿದರು.

ಕೇಂದ್ರಸರ್ಕಾರವು ರಾಜ್ಯ ರೈಲ್ವೇ ಅಭಿವೃದ್ಧಿಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ರಾಜ್ಯಸರ್ಕಾರವು ಕೇಂದ್ರದ ಮನವೊಲಿಸಲು ವಿಫಲವಾಗಿದೆ ಎಂದು ಪ್ರತಿಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದವು.

(ಪಿಟಿಐ)

ಮುಖಪುಟ / ಧರ್ಮ-ಕಾರಣ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X