ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

72ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಶಾಂತರಸ ಆಯ್ಕೆ?

By Staff
|
Google Oneindia Kannada News

72ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಶಾಂತರಸ ಆಯ್ಕೆ?
ಬೀದರಿನಲ್ಲಿ ಮೇ.6ರಿಂದ ಮೇ.8ರವರೆಗೆ ಸಾಹಿತ್ಯ ಸಮ್ಮೇಳನ

ಬೆಂಗಳೂರು : ಬೀದರಿನಲ್ಲಿ ಪೂರ್ವ ನಿಗದಿಯಂತೆ ಮೇ.6ರಿಂದ ಮೇ.8ರವರೆಗೆ 72ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ದಿನಾಂಕಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ ಎಂದು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಚಂದ್ರಶೇಖರ ಪಾಟೀಲ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಣ್ಯ ಸಚಿವ ಗುರುಪಾದಪ್ಪ ನಾಗಮಾರಪಳ್ಳಿ ಅಧ್ಯಕ್ಷತೆಯಲ್ಲಿ ಸ್ವಾಗತ ಸಮಿತಿ ಈ ನಿರ್ಧಾರವನ್ನು ಕೈಗೊಂಡಿದೆ ಎಂದರು.

ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಶಾಂತರಸ ಅವರನ್ನು ಆಯ್ಕೆಮಾಡುವಂತೆ ಸ್ವಾಗತಸಮಿತಿ ಕೋರಿದೆ. ಮೂರುದಿನಗಳ ಸಮ್ಮೇಳನದಲ್ಲಿ ಭಾಗವಹಿಸಲು ಇಚ್ಚಿಸುವವರು 150ರೂ.ಗಳನ್ನು ಸಲ್ಲಿಸಿ, ತಮ್ಮ ಹೆಸರನ್ನು ನೊಂದಾಯಿಸ ಬಹುದು. ಸಮ್ಮೇಳನದಲ್ಲಿ 72ಪುಸ್ತಕಗಳು ಬಿಡುಗಡೆಗೊಳ್ಳಲಿವೆ ಎಂದು ಚಂದ್ರಶೇಖರ ಪಾಟೀಲ ತಿಳಿಸಿದ್ದಾರೆ.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X